ಎಲ್ಲೆಲ್ಲೂ ಬಿಸಿಲೋ ಬಿಸಿಲು! ಈ ಧಗೆಯನ್ನು ತಡೆಯೋಕೆ ಸಾಧ್ಯವೇ ಇಲ್ಲ ಎಂಬಷ್ಟು ಮೈಸುಡುವ ಬಿಸಿಲು ಎಲ್ರನ್ನೂ ಸುಸ್ತು ಮಾಡಿಸಿದೆ. ಇದರ ಜೊತೆಗೆ ಕರ್ನಾಟಕದ ಈ ನಗರದಲ್ಲಿ ಇಡೀ ದೇಶದಲ್ಲೇ ಹೆಚ್ಚು ಉಷ್ಣಾಂಶ ದಾಖಲಾದ ಸುದ್ದಿ ಹೊರಬಿದ್ದಿದೆ.
ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಬಿಸಿಗಾಳಿ ಬೀಸುವ ಗಂಭೀರ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಪ್ರದೇಶಗಳಲ್ಲಿ ಸೆಖೆ ದಿನೇ ದಿನೇ ಹೆಚ್ಚುತ್ತಿದ್ದರೆ ಬೆಂಗಳೂರಿನ ಹವಾಮಾನ ಆಶ್ವರ್ಯ ಹುಟ್ಟಿಸುವಂತಿದೆ.
ಬೆಂಗಳೂರು ನಗರ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದೆ. ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮಳೆ ಸುರಿಯುವ ವಾತಾವರಣವೂ ನಿರ್ಮಾಣವಾಗಿದೆ.
ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿ ಬೀಸುವ ಎಚ್ಚರಿಕೆಯನ್ನು ಸಹ ಹವಾಮಾನ ಇಲಾಖೆ ನೀಡಿದೆ. ಇಡೀ ದೇಶದಲ್ಲೇ ಮಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. ಮಾರ್ಚ್ 8ರಂದು ಕರ್ನಾಟಕದ ಕರಾವಳಿ ನಗರದಲ್ಲಿ ಬರೋಬ್ಬರಿ 38.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಅಂದಹಾಗೆ ಮಂಗಳೂರಿನಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚಿನ ತಾಪಮಾನ ದಾಖಲಾಗಿರುವುದು ಇದೇ ಮೊದಲೇನೂ ಅಲ್ಲ. ಈ ಮುನ್ನವೇ ಮಂಗಳೂರಿನಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾಗಿತ್ತು. ಮುಂದಿನ ದಿನಗಳಲ್ಲಿ ಮಂಗಳೂರಿನ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಸುಮಾರು ಎರಡರಿಂದ ಮೂರು ಡಿಗ್ರಿಗಳಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಯಿದೆ ಎಂದು Iಒಆ ಎಚ್ಚರಿಕೆ ನೀಡಿದೆ.
ಮಂಗಳೂರಿನಲ್ಲಿ ಮಾರ್ಚ್ 8ರಂದು ದಾಖಲಾದ ತಾಪಮಾನವು 2010 ರ ನಂತರ ದಾಖಲಾದ ಅತಿ ಹೆಚ್ಚಿನ ಉಷ್ಣಾಂಶವಾಗಿದೆ. 2017 ರಲ್ಲಿ ಮಂಗಳೂರಿನಲ್ಲಿ 37.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಈಚೆಗೆ…
ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ…