Advertisement
ವೆದರ್ ಮಿರರ್

ಮಳೆ ಸುರಿಯುವ ವಾತಾವರಣ, ಕರಾವಳಿಯಲ್ಲಿ ಬಿಸಿಗಾಳಿಯ ಎಚ್ಚರಿಕೆ

Share

ಎಲ್ಲೆಲ್ಲೂ ಬಿಸಿಲೋ ಬಿಸಿಲು! ಈ ಧಗೆಯನ್ನು ತಡೆಯೋಕೆ ಸಾಧ್ಯವೇ ಇಲ್ಲ ಎಂಬಷ್ಟು ಮೈಸುಡುವ ಬಿಸಿಲು ಎಲ್ರನ್ನೂ ಸುಸ್ತು ಮಾಡಿಸಿದೆ. ಇದರ ಜೊತೆಗೆ ಕರ್ನಾಟಕದ ಈ ನಗರದಲ್ಲಿ ಇಡೀ ದೇಶದಲ್ಲೇ ಹೆಚ್ಚು ಉಷ್ಣಾಂಶ ದಾಖಲಾದ ಸುದ್ದಿ ಹೊರಬಿದ್ದಿದೆ.

Advertisement
Advertisement

ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಬಿಸಿಗಾಳಿ ಬೀಸುವ ಗಂಭೀರ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಪ್ರದೇಶಗಳಲ್ಲಿ ಸೆಖೆ ದಿನೇ ದಿನೇ ಹೆಚ್ಚುತ್ತಿದ್ದರೆ ಬೆಂಗಳೂರಿನ ಹವಾಮಾನ ಆಶ್ವರ್ಯ ಹುಟ್ಟಿಸುವಂತಿದೆ.

Advertisement

ಬೆಂಗಳೂರು ನಗರ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದೆ. ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮಳೆ ಸುರಿಯುವ ವಾತಾವರಣವೂ ನಿರ್ಮಾಣವಾಗಿದೆ.

ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿ ಬೀಸುವ ಎಚ್ಚರಿಕೆಯನ್ನು ಸಹ ಹವಾಮಾನ ಇಲಾಖೆ ನೀಡಿದೆ. ಇಡೀ ದೇಶದಲ್ಲೇ ಮಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. ಮಾರ್ಚ್ 8ರಂದು ಕರ್ನಾಟಕದ ಕರಾವಳಿ ನಗರದಲ್ಲಿ ಬರೋಬ್ಬರಿ 38.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

Advertisement

ಅಂದಹಾಗೆ ಮಂಗಳೂರಿನಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚಿನ ತಾಪಮಾನ ದಾಖಲಾಗಿರುವುದು ಇದೇ ಮೊದಲೇನೂ ಅಲ್ಲ. ಈ ಮುನ್ನವೇ ಮಂಗಳೂರಿನಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾಗಿತ್ತು. ಮುಂದಿನ ದಿನಗಳಲ್ಲಿ ಮಂಗಳೂರಿನ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಸುಮಾರು ಎರಡರಿಂದ ಮೂರು ಡಿಗ್ರಿಗಳಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಯಿದೆ ಎಂದು Iಒಆ ಎಚ್ಚರಿಕೆ ನೀಡಿದೆ.

ಮಂಗಳೂರಿನಲ್ಲಿ ಮಾರ್ಚ್ 8ರಂದು ದಾಖಲಾದ ತಾಪಮಾನವು 2010 ರ ನಂತರ ದಾಖಲಾದ ಅತಿ ಹೆಚ್ಚಿನ ಉಷ್ಣಾಂಶವಾಗಿದೆ. 2017 ರಲ್ಲಿ ಮಂಗಳೂರಿನಲ್ಲಿ 37.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

4 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago