ಎಲ್ಲೆಲ್ಲೂ ಬಿಸಿಲೋ ಬಿಸಿಲು! ಈ ಧಗೆಯನ್ನು ತಡೆಯೋಕೆ ಸಾಧ್ಯವೇ ಇಲ್ಲ ಎಂಬಷ್ಟು ಮೈಸುಡುವ ಬಿಸಿಲು ಎಲ್ರನ್ನೂ ಸುಸ್ತು ಮಾಡಿಸಿದೆ. ಇದರ ಜೊತೆಗೆ ಕರ್ನಾಟಕದ ಈ ನಗರದಲ್ಲಿ ಇಡೀ ದೇಶದಲ್ಲೇ ಹೆಚ್ಚು ಉಷ್ಣಾಂಶ ದಾಖಲಾದ ಸುದ್ದಿ ಹೊರಬಿದ್ದಿದೆ.
ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಬಿಸಿಗಾಳಿ ಬೀಸುವ ಗಂಭೀರ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಪ್ರದೇಶಗಳಲ್ಲಿ ಸೆಖೆ ದಿನೇ ದಿನೇ ಹೆಚ್ಚುತ್ತಿದ್ದರೆ ಬೆಂಗಳೂರಿನ ಹವಾಮಾನ ಆಶ್ವರ್ಯ ಹುಟ್ಟಿಸುವಂತಿದೆ.
ಬೆಂಗಳೂರು ನಗರ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದೆ. ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮಳೆ ಸುರಿಯುವ ವಾತಾವರಣವೂ ನಿರ್ಮಾಣವಾಗಿದೆ.
ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿ ಬೀಸುವ ಎಚ್ಚರಿಕೆಯನ್ನು ಸಹ ಹವಾಮಾನ ಇಲಾಖೆ ನೀಡಿದೆ. ಇಡೀ ದೇಶದಲ್ಲೇ ಮಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. ಮಾರ್ಚ್ 8ರಂದು ಕರ್ನಾಟಕದ ಕರಾವಳಿ ನಗರದಲ್ಲಿ ಬರೋಬ್ಬರಿ 38.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಅಂದಹಾಗೆ ಮಂಗಳೂರಿನಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚಿನ ತಾಪಮಾನ ದಾಖಲಾಗಿರುವುದು ಇದೇ ಮೊದಲೇನೂ ಅಲ್ಲ. ಈ ಮುನ್ನವೇ ಮಂಗಳೂರಿನಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾಗಿತ್ತು. ಮುಂದಿನ ದಿನಗಳಲ್ಲಿ ಮಂಗಳೂರಿನ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಸುಮಾರು ಎರಡರಿಂದ ಮೂರು ಡಿಗ್ರಿಗಳಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಯಿದೆ ಎಂದು Iಒಆ ಎಚ್ಚರಿಕೆ ನೀಡಿದೆ.
ಮಂಗಳೂರಿನಲ್ಲಿ ಮಾರ್ಚ್ 8ರಂದು ದಾಖಲಾದ ತಾಪಮಾನವು 2010 ರ ನಂತರ ದಾಖಲಾದ ಅತಿ ಹೆಚ್ಚಿನ ಉಷ್ಣಾಂಶವಾಗಿದೆ. 2017 ರಲ್ಲಿ ಮಂಗಳೂರಿನಲ್ಲಿ 37.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…