ಎಲ್ಲೆಲ್ಲೂ ಬಿಸಿಲೋ ಬಿಸಿಲು! ಈ ಧಗೆಯನ್ನು ತಡೆಯೋಕೆ ಸಾಧ್ಯವೇ ಇಲ್ಲ ಎಂಬಷ್ಟು ಮೈಸುಡುವ ಬಿಸಿಲು ಎಲ್ರನ್ನೂ ಸುಸ್ತು ಮಾಡಿಸಿದೆ. ಇದರ ಜೊತೆಗೆ ಕರ್ನಾಟಕದ ಈ ನಗರದಲ್ಲಿ ಇಡೀ ದೇಶದಲ್ಲೇ ಹೆಚ್ಚು ಉಷ್ಣಾಂಶ ದಾಖಲಾದ ಸುದ್ದಿ ಹೊರಬಿದ್ದಿದೆ.
ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಬಿಸಿಗಾಳಿ ಬೀಸುವ ಗಂಭೀರ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಪ್ರದೇಶಗಳಲ್ಲಿ ಸೆಖೆ ದಿನೇ ದಿನೇ ಹೆಚ್ಚುತ್ತಿದ್ದರೆ ಬೆಂಗಳೂರಿನ ಹವಾಮಾನ ಆಶ್ವರ್ಯ ಹುಟ್ಟಿಸುವಂತಿದೆ.
ಬೆಂಗಳೂರು ನಗರ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದೆ. ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮಳೆ ಸುರಿಯುವ ವಾತಾವರಣವೂ ನಿರ್ಮಾಣವಾಗಿದೆ.
ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿ ಬೀಸುವ ಎಚ್ಚರಿಕೆಯನ್ನು ಸಹ ಹವಾಮಾನ ಇಲಾಖೆ ನೀಡಿದೆ. ಇಡೀ ದೇಶದಲ್ಲೇ ಮಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. ಮಾರ್ಚ್ 8ರಂದು ಕರ್ನಾಟಕದ ಕರಾವಳಿ ನಗರದಲ್ಲಿ ಬರೋಬ್ಬರಿ 38.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಅಂದಹಾಗೆ ಮಂಗಳೂರಿನಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚಿನ ತಾಪಮಾನ ದಾಖಲಾಗಿರುವುದು ಇದೇ ಮೊದಲೇನೂ ಅಲ್ಲ. ಈ ಮುನ್ನವೇ ಮಂಗಳೂರಿನಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾಗಿತ್ತು. ಮುಂದಿನ ದಿನಗಳಲ್ಲಿ ಮಂಗಳೂರಿನ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಸುಮಾರು ಎರಡರಿಂದ ಮೂರು ಡಿಗ್ರಿಗಳಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಯಿದೆ ಎಂದು Iಒಆ ಎಚ್ಚರಿಕೆ ನೀಡಿದೆ.
ಮಂಗಳೂರಿನಲ್ಲಿ ಮಾರ್ಚ್ 8ರಂದು ದಾಖಲಾದ ತಾಪಮಾನವು 2010 ರ ನಂತರ ದಾಖಲಾದ ಅತಿ ಹೆಚ್ಚಿನ ಉಷ್ಣಾಂಶವಾಗಿದೆ. 2017 ರಲ್ಲಿ ಮಂಗಳೂರಿನಲ್ಲಿ 37.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…