Advertisement
ವೆದರ್ ಮಿರರ್

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

24.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಕಾಸರಗೋಡು ತನಕವೂ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿಯ ಗಾಳಿಯ ಒತ್ತಡ ಹೆಚ್ಚಿದ್ದರೆ ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆಯ ಸಾಧ್ಯತೆಗಳವೆ.
ಈಗಿನಂತೆ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಎಪ್ರಿಲ್ 27 ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 27ರ ನಂತರ ಮಳೆ ಹೆಚ್ಚಾಗುವ ಲಕ್ಷಣಗಳಿವೆ. ಅಲ್ಲಿಯ ತನಕ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಕೊಪ್ಪಳ, ಹಾವೇರಿ ಜಿಲ್ಲೆಯಲ್ಲೂ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಅನಿರೀಕ್ಷಿತ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಎಪ್ರಿಲ್ 27ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಣದ ಆಕರ್ಷಣೆ ಮತ್ತು ಮೌಲ್ಯದ ಕುಸಿತ

ಮಾನವ ಸಮಾಜದಲ್ಲಿ ಹಣವು ಆವಶ್ಯಕತೆಯ ಆಧಾರಶಿಲೆ.  “ಅನ್ನಂ ನ ನಿತ್ಯಂ, ಧನಂ ನ…

22 minutes ago

ಹವಾಮಾನ ವರದಿ | 30-10-2025 | ನವೆಂಬರ್‌ ಮೊದಲ ವಾರದಿಂದ ಮತ್ತೆ ಗುಡುಗು ಸಹಿತ ಮಳೆ…?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಂಡಿದ್ದು, ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೂ 3…

1 day ago

ಶಾಲೆಯ ವಾರ್ಷಿಕೋತ್ಸವದಲ್ಲಿ ಕೃಷಿಕನಿಗೆ ಸನ್ಮಾನ… | ಕೃಷಿ ಬದುಕಿನ ಸಾಧನೆಯ ಪರಿಚಯಿಸುವ ಶಾಲೆ

ಶಾಲೆಯ ವಾರ್ಷಿಕೋತ್ಸವದಲ್ಲಿ ಕೃಷಿ ಸಾಧಕನಿಗೆ ಸನ್ಮಾನ. ಇಂತದೊಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿರುವುದು ಕುಕ್ಕೆ…

1 day ago

ರಸಗೊಬ್ಬರ ಸಬ್ಸಿಡಿ 37,952 ಕೋಟಿ ರೂಪಾಯಿ

ಮಂಗಳವಾರದಂದು ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಹಿಂಗಾರು ಹಂಗಾಮಿನ ಬೆಳೆಗಳಿಗಾಗಿ ಒಟ್ಟು 37,952…

2 days ago

ಮಹಿಳೆಯರಿಗೆ ಸ್ವಉದ್ಯೋಗ | ಉಚಿತ ನಾಟಿ ಕೋಳಿಮರಿ ಯೋಜನೆಗೆ ಸರ್ಕಾರ ನಿರ್ಧಾರ

ಮಹಿಳೆಯರ ಜೀವನದಲ್ಲಿ ಆರ್ಥಿಕ ಬದಲಾವಣೆ ತರಲು ಹಾಗೂ ಸ್ವಾವಲಂಬನೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

2 days ago

ಒಂದು ಎಕರೆ ಬದನೆ ತೋಟ – 6 ಲಕ್ಷ ಆದಾಯ | ಯುವ ಕೃಷಿಕನ ಸಾಧನೆ

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಅಶೋಕ ಮಾಸಾಳ ಅವರು ಜಮೀನಿನಲ್ಲಿ…

2 days ago