ವೆದರ್ ಮಿರರ್

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಉತ್ತರ ಕನ್ನಡ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮುಂಗಾರು ಮಾರುತಗಳ ನೈಜ ಸ್ವರೂಪ ನಿನ್ನೆಯಿಂದ ಕರಾವಳಿ ಭಾಗಗಳಲ್ಲಿ ತೋರುತ್ತಿದೆ. ಜೂನ್ 14ರಿಂದ ಸ್ವಾಭಾವಿಕ ಹಾದಿಯಲ್ಲಿ ಸಾಗುತ್ತಿರುವುದೇ ಇದಕ್ಕೆ ಕಾರಣ. ಜೂನ್ 13ರ ತನಕ ವಾಯವ್ಯದಿಂದ ಆಗ್ನೇಯಕ್ಕೆ ಚಲಿಸಿರುವ ಪರಿಣಾಮದಿಂದ ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಭಾರಿ ಮಳೆಯಾಗಿತ್ತು. ಈಗಿನಂತೆ ಜೂನ್ 18ರಿಂದ ಕರಾವಳಿಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 17ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಸೂಚನೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಒಳನಾಡಿನ ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.

ಮಹಾರಾಷ್ಟ್ರದ ಮುಂಬೈ ಕಡಲ ತೀರದಲ್ಲಿ ಅಲ್ಪ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮಹಾರಾಷ್ಟ್ರ ಕರಾವಳಿಯಲ್ಲೆ ಭೂ ಪ್ರವೇಶಿಸುವ ಸಾಧ್ಯತೆಗಳಿದ್ದು, ಮುಂಬೈ ಭಾರಿ ಮಳೆಯ ಸಾಧ್ಯತೆಗಳಿವೆ. ಇದೇ ಸಮಯದಲ್ಲಿ ಬಂಗಾಳಕೊಲ್ಲಿಯ ಬಾಂಗ್ಲಾ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಆರಂಭವಾಗಿದ್ದು, ಮುಂಗಾರು ಮತ್ತಷ್ಟು ಬಲಗೊಳ್ಳುಲು ಕಾರಣವಾಗಿದೆ.
ಈ ಎರಡೂ ತಿರುಗುವಿಕೆಯು ದುರ್ಬಲಗೊಂಡಂತಯೇ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

13 minutes ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

1 hour ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

2 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

3 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಬದುಕು ಪುರಾಣ | ನಾವ್ಯಾಕೆ ‘ಶಕುನಿ’ಗಳಾಗುತ್ತಿದ್ದೇವೆ?

ಎಲ್ಲಾದರೂ ನೋಡಿದ್ದೀರಾ.. ಧರ್ಮರಾಯ, ಕೃಷ್ಣ, ಕರ್ಣ, ಭೀಷ್ಮ.. ಮೊದಲಾದ ಹೆಸರುಗಳನ್ನು ನಂನಮ್ಮ ಸಾಧನೆಗಳಿಗೆ…

5 hours ago