ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ

July 4, 2025
12:56 PM

05.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ದಕ್ಷಿಣ ಧ್ರುವದ ಕಡೆಯಿಂದ ಬೀಸುತ್ತಿರುವ ಪ್ರಭಲ ಗಾಳಿಯ ಪ್ರಭಾವದಿಂದ (ಸೊಮಾಲಿಯಾನ್ ಜಟ್ ವೇವ್ಸ್ ರೀತಿಯ) ಕಳೆದ ಮೂರು ದಿನಗಳಿಂದ ಮುಂಗಾರು ಜೊತೆಗೂಡಿ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಕೇರಳದಲ್ಲಿ ಈಗಾಗಲೇ ಮುಂಗಾರು ದುರ್ಬಲಗೊಳ್ಳುತ್ತಿದೆ.

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ತೋಟಗಳಿಗೆ ಔಷಧಿ ಸಿಂಪಡಿಸಲು ಸಣ್ಣ ಸಣ್ಣ ಅವಕಾಶಗಳು ಮಾತ್ರ ಸಿಗಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಜುಲೈ 6ರಿಂದ ಔಷಧಿ ಸಿಂಪಡಿಸಲು ಸಣ್ಣ ಅವಕಾಶಗಳು ಸಿಗಬಹುದು.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಏನಾಗ್ತಾ ಇದೆ ಶಿಕ್ಷಣದಲ್ಲಿ ಎಂತ ಯಾರಾದ್ರೂ ಕೇಳ್ತಾರಾ?
October 8, 2025
9:53 PM
by: ಡಾ.ಚಂದ್ರಶೇಖರ ದಾಮ್ಲೆ
ಹವಾಮಾನ ವರದಿ | 08-10-2025 | ಎಲ್ಲೆಲ್ಲಿ ಹೇಗಿದೆ ಮಳೆಯ ಲಕ್ಷಣ..? | ವಾಯುಭಾರ ಕುಸಿತ ಏನಾಗುತ್ತಿದೆ…?
October 8, 2025
2:04 PM
by: ಸಾಯಿಶೇಖರ್ ಕರಿಕಳ
ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ | ರಾಸಾಯನಿಕ ಸಿಂಪಡಿಸದೆಯೇ ಉತ್ತಮ ಬೆಳೆ..!
October 8, 2025
7:47 AM
by: The Rural Mirror ಸುದ್ದಿಜಾಲ
ಸಸ್ಯ ಪರಿಚಯ | ಮರಳಿ ತನ್ನಿ ಮರೆತ ಸೊಪ್ಪು – ತುಂಬೆ ಗಿಡ
October 8, 2025
7:25 AM
by: ಜಯಲಕ್ಷ್ಮಿ ದಾಮ್ಲೆ

You cannot copy content of this page - Copyright -The Rural Mirror

Join Our Group