05.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಸೆಖೆಯ ಅನುಭವ ಹೆಚ್ಚಾಗಲಿದೆ. ಗರಿಷ್ಠ ತಾಪಮಾನದಲ್ಲಿ ಒಂದೆರಡು ಡಿಗ್ರಿ ಕಡಿಯಾದರೂ, ಅಧಿಕ ತೇವಾಂಶದಿಂದ ಸೆಖೆ ಹೆಚ್ಚಾಗಬಹುದು. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಈ ವಾತಾವರಣವು ಮಾರ್ಚ್ 8ರ ತನಕ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಮೋಡ ಕಡಿಮೆಯಾಗಿ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ. ಮಾರ್ಚ್ 8ರ ತನಕ ಮುಂದುವರಿಯುವ ಈ ವಾತಾವರಣವು, ನಂತರ ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಮಳೆಯ ಸಾಧ್ಯತೆಗಳಿಲ್ಲ.
ಅಲ್ಲಲ್ಲಿ ಮೋಡದ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.
ದಕ್ಷಿಣ ಶ್ರೀಲಂಕಾ ಕರಾವಳಿ ಬಳಿಯಿರುವ ತಿರುಗುವಿಕೆಯು ಶ್ರೀಲಂಕಾದ ಆಗ್ನೇಯಕ್ಕೆ ಚಲಿಸಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಬಂಗಾಳಕೊಲ್ಲಿಯ ಭಾಗದಿಂದ ಆಂದ್ರಾ ಮೂಲಕ ರಾಜ್ಯಕ್ಕೆ ಬೀಸುತ್ತಿರುವ ಗಾಳಿಯ ಪ್ರಮಾಣವೂ ಕಡಿಮೆಯಾಗಲಿದ್ದು, ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…
ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…
ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…