Advertisement
ಸುದ್ದಿಗಳು

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

Share

05.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಸೆಖೆಯ ಅನುಭವ ಹೆಚ್ಚಾಗಲಿದೆ. ಗರಿಷ್ಠ ತಾಪಮಾನದಲ್ಲಿ ಒಂದೆರಡು ಡಿಗ್ರಿ ಕಡಿಯಾದರೂ, ಅಧಿಕ ತೇವಾಂಶದಿಂದ ಸೆಖೆ ಹೆಚ್ಚಾಗಬಹುದು. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಈ ವಾತಾವರಣವು ಮಾರ್ಚ್ 8ರ ತನಕ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಮೋಡ ಕಡಿಮೆಯಾಗಿ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ. ಮಾರ್ಚ್ 8ರ ತನಕ ಮುಂದುವರಿಯುವ ಈ ವಾತಾವರಣವು, ನಂತರ ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಮಳೆಯ ಸಾಧ್ಯತೆಗಳಿಲ್ಲ.
ಅಲ್ಲಲ್ಲಿ ಮೋಡದ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.

ದಕ್ಷಿಣ ಶ್ರೀಲಂಕಾ ಕರಾವಳಿ ಬಳಿಯಿರುವ ತಿರುಗುವಿಕೆಯು ಶ್ರೀಲಂಕಾದ ಆಗ್ನೇಯಕ್ಕೆ ಚಲಿಸಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಬಂಗಾಳಕೊಲ್ಲಿಯ ಭಾಗದಿಂದ ಆಂದ್ರಾ ಮೂಲಕ ರಾಜ್ಯಕ್ಕೆ ಬೀಸುತ್ತಿರುವ ಗಾಳಿಯ ಪ್ರಮಾಣವೂ ಕಡಿಮೆಯಾಗಲಿದ್ದು, ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

2 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

16 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

17 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

17 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

17 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

17 hours ago