Advertisement
The Rural Mirror ವಾರದ ವಿಶೇಷ

ವೀಕೆಂಡ್‌ ಚಾರಣ…! | ಒಮ್ಮೆಲೇ ಏಕೆ ಕುಮಾರ ಪರ್ವತ ಚಾರಣಕ್ಕೆ ಬರುತ್ತಿದ್ದಾರೆ…? | ಕಾಡು ಉಳಿಯಲಿ, ಕುಮಾರಪರ್ವತದ ರಕ್ಷಣೆಯ ಅಗತ್ಯವೂ ಇದೆ |

Share

ಕಳೆದ ಎರಡು ವಾರಗಳಿಂದ ಕುಕ್ಕೆ ಸುಬ್ರಹ್ಮಣ್ಯದ ಕುಮಾರಪರ್ವತ ಚಾರಣಕ್ಕೆ ವಿಪರೀತ ಮಂದಿ ಆಗಮಿಸುತ್ತಿದ್ದಾರೆ. ಅಷ್ಟೂ ಜನರೂ ಪರಿಸರ ಪ್ರೇಮಿಗಳೇ…!?. ಟ್ರೆಕಿಂಗ್‌ ಹೆಸರಲ್ಲಿ ಮಜಾ ಮಾಡಲು ಬರುತ್ತಿದ್ದಾರೆಯೇ..? ಇದೆರಡೂ ಪ್ರಶ್ನೆಗಳ ನಡುವೆ ಈಗ ಯಾಕಿಷ್ಟು ಮಂದಿ ಕುಮಾರಪರ್ವತ ಚಾರಣಕ್ಕೆ ಬರುತ್ತಿದ್ದಾರೆ…?ಮುಂದೆ ಓದಿ

ರಾಜ್ಯದ ಬೇರೆ ಬೇರೆ ಕಡೆಯಿಂದ  ಕುಮಾರಪರ್ವತ ಚಾರಣಕ್ಕೆ ಒಮ್ಮೆಲೇ ಹೆಚ್ಚಾಗಿ ಜನರು ಆಗಮಿಸುತ್ತಿದ್ದಾರೆ. ರಜಾ ದಿನಗಳಲ್ಲಂತೂ ಹೆಚ್ಚಿನ ಸಂಖ್ಯೆಯಲ್ಲಿ ಚಾರಣಿಗರು ಕಾಣಸಿಗುತ್ತಾರೆ. ಕಳೆದ ಎರಡು-ಮೂರು ವಾರಗಳಿಂದ ವಿಪರೀತ ಜನಸಂದಣಿಯಲ್ಲಿ ಚಾರಣಿಗರು ಕಾಣುತ್ತಿದ್ದಾರೆ. ಈಗಾಗಲೇ ಅಂತರ್ಜಾಲದ ಮೂಲಕ ಕುಮಾರಪರ್ವತದ ಬಗ್ಗೆ ಸಾಕಷ್ಟು ಮಾಹಿತಿ ರವಾನೆಯಾಗಿದೆ. ಹೀಗಾಗಿ ಬಹಳ ಆಸಕ್ತಿಯಿಂದ ಚಾರಣಿಗರು ಬರುತ್ತಿದ್ದಾರೆ.ಮುಂದೆ ಓದಿ

ಕುಮಾರಪರ್ವತ ಚಾರಣ ಮುಂಜಾನೆ

ಈಚೆಗೆ ಗಿರಿಗದ್ದೆಯ ಭಟ್ಟರು ನಿಧನವಾದ ಸಂದರ್ಭ ಕುಮಾರಪರ್ವತ ಹಾಗೂ ಗಿರಿಗದ್ದೆಯ ಬಗ್ಗೆ ಸಾಕಷ್ಟು ಮಾಹಿತಿ ರವಾನೆಯಾಗಿತ್ತು. ಅದರ ಜೊತೆಗೇ ಕುಮಾರಪರ್ವತ ಹಾಗೂ ಕುಕ್ಕೆ ಸುಬ್ರಹ್ಮಣ್ಯದ ಹಿನ್ನೆಲೆಯ ಬಗ್ಗೆಯೂ ಸಾಕಷ್ಟು ಮಾಹಿತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತು. ಸಹಜವಾಗಿಯೇ ಕುಮಾರಪರ್ವತದ ಬಗ್ಗೆ ಕುತೂಹಲ ಹೆಚ್ಚಾಯಿತು. ಕುಮಾರ ಪರ್ವತದಲ್ಲಿ ಪೂಜೆ ನಡೆಯುತ್ತದೆ ಎನ್ನುವುದು  ಸಾಕಷ್ಟು ಜನರಿಗೆ ಮಾಹಿತಿಯೇ ಇರಲಿಲ್ಲ. ಕಳೆದ  ಎರಡು ವರ್ಷಗಳಿಂದ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮಾಹಿತಿ ವೈರಲ್‌ ಆಗಿದೆ. ಇದೆಲ್ಲವೂ ಕುಮಾರಪರ್ವತ ಚಾರಣಿಗರ ಸಂಖ್ಯೆ ಏರಿಕೆಗೆ ಕಾರಣವಾಗಿದೆ.ಮುಂದೆ ಓದಿ

ಕಾಡು ದಾರಿಯ ನಡುವಿನ ಪಯಣ ಹಾಗೂ ಸುಂದರ ಪರಿಸರದ ನಡುವಿನ ಪಯಣ ಈ ಚಾರಣ. ಪರ್ವತ ಏರುವ ಮೊದಲೇ ಅರಣ್ಯ ಇಲಾಖೆ ಸಾಕಷ್ಟು ತಪಾಸಣೆ ಮಾಡುತ್ತಿದ್ದರೂ, ಕಾಡು ಹಾದಿಯ ನಡುವೆ ಪ್ಲಾಸ್ಟಿಕ್‌ ಹಾಗೂ ಪರಿಸರ ಕೆಡಿಸುವ ಪ್ರಕ್ರಿಯೆ ನಡೆಯುತ್ತದೆ. ಒಮ್ಮೆಲೇ ವಿಪರೀತ ಚಾರಣಿಗರು ತೆರಳಿದರೆ, ಕಾಡಿನ ಒಳಗಿನ ಗಲಾಟೆ, ಬೊಬ್ಬೆಗಳಿಂದ ಕಾಡು ಪ್ರಾಣಿಗಳೂ ಭಯಗೊಂಡು ತೊಂದರೆ ನೀಡುವ ಸಂಭವವೂ ಇದೆ. ಪರಿಸರವೂ ಬೇಗನೆ ಕಲುಷಿತವಾಗುವುದು ಸಾಧ್ಯತೆ ಇದೆ. ಹೀಗಾಗಿ ಇಲಾಖೆಯು ಈ ಬಗ್ಗೆ ಗಮನಹರಿಸಬೇಕಾದ್ದು ಅಗತ್ಯ ಇದೆ.

Kumara Parvatha

ಕುಮಾರಪರ್ವತ

More and more people are coming from different parts of the state for the Kumara Parvata trek. A large number of trekkers come even on holidays. For the last two-three weeks, there has been a huge numbers of trekkers. Now environmental protection is a big challenge.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

23 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

23 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago