Advertisement
The Rural Mirror ವಾರದ ವಿಶೇಷ

ವೀಕೆಂಡ್‌ ಚಾರಣ…! | ಒಮ್ಮೆಲೇ ಏಕೆ ಕುಮಾರ ಪರ್ವತ ಚಾರಣಕ್ಕೆ ಬರುತ್ತಿದ್ದಾರೆ…? | ಕಾಡು ಉಳಿಯಲಿ, ಕುಮಾರಪರ್ವತದ ರಕ್ಷಣೆಯ ಅಗತ್ಯವೂ ಇದೆ |

Share

ಕಳೆದ ಎರಡು ವಾರಗಳಿಂದ ಕುಕ್ಕೆ ಸುಬ್ರಹ್ಮಣ್ಯದ ಕುಮಾರಪರ್ವತ ಚಾರಣಕ್ಕೆ ವಿಪರೀತ ಮಂದಿ ಆಗಮಿಸುತ್ತಿದ್ದಾರೆ. ಅಷ್ಟೂ ಜನರೂ ಪರಿಸರ ಪ್ರೇಮಿಗಳೇ…!?. ಟ್ರೆಕಿಂಗ್‌ ಹೆಸರಲ್ಲಿ ಮಜಾ ಮಾಡಲು ಬರುತ್ತಿದ್ದಾರೆಯೇ..? ಇದೆರಡೂ ಪ್ರಶ್ನೆಗಳ ನಡುವೆ ಈಗ ಯಾಕಿಷ್ಟು ಮಂದಿ ಕುಮಾರಪರ್ವತ ಚಾರಣಕ್ಕೆ ಬರುತ್ತಿದ್ದಾರೆ…?ಮುಂದೆ ಓದಿ

ರಾಜ್ಯದ ಬೇರೆ ಬೇರೆ ಕಡೆಯಿಂದ  ಕುಮಾರಪರ್ವತ ಚಾರಣಕ್ಕೆ ಒಮ್ಮೆಲೇ ಹೆಚ್ಚಾಗಿ ಜನರು ಆಗಮಿಸುತ್ತಿದ್ದಾರೆ. ರಜಾ ದಿನಗಳಲ್ಲಂತೂ ಹೆಚ್ಚಿನ ಸಂಖ್ಯೆಯಲ್ಲಿ ಚಾರಣಿಗರು ಕಾಣಸಿಗುತ್ತಾರೆ. ಕಳೆದ ಎರಡು-ಮೂರು ವಾರಗಳಿಂದ ವಿಪರೀತ ಜನಸಂದಣಿಯಲ್ಲಿ ಚಾರಣಿಗರು ಕಾಣುತ್ತಿದ್ದಾರೆ. ಈಗಾಗಲೇ ಅಂತರ್ಜಾಲದ ಮೂಲಕ ಕುಮಾರಪರ್ವತದ ಬಗ್ಗೆ ಸಾಕಷ್ಟು ಮಾಹಿತಿ ರವಾನೆಯಾಗಿದೆ. ಹೀಗಾಗಿ ಬಹಳ ಆಸಕ್ತಿಯಿಂದ ಚಾರಣಿಗರು ಬರುತ್ತಿದ್ದಾರೆ.ಮುಂದೆ ಓದಿ

ಕುಮಾರಪರ್ವತ ಚಾರಣ ಮುಂಜಾನೆ

ಈಚೆಗೆ ಗಿರಿಗದ್ದೆಯ ಭಟ್ಟರು ನಿಧನವಾದ ಸಂದರ್ಭ ಕುಮಾರಪರ್ವತ ಹಾಗೂ ಗಿರಿಗದ್ದೆಯ ಬಗ್ಗೆ ಸಾಕಷ್ಟು ಮಾಹಿತಿ ರವಾನೆಯಾಗಿತ್ತು. ಅದರ ಜೊತೆಗೇ ಕುಮಾರಪರ್ವತ ಹಾಗೂ ಕುಕ್ಕೆ ಸುಬ್ರಹ್ಮಣ್ಯದ ಹಿನ್ನೆಲೆಯ ಬಗ್ಗೆಯೂ ಸಾಕಷ್ಟು ಮಾಹಿತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತು. ಸಹಜವಾಗಿಯೇ ಕುಮಾರಪರ್ವತದ ಬಗ್ಗೆ ಕುತೂಹಲ ಹೆಚ್ಚಾಯಿತು. ಕುಮಾರ ಪರ್ವತದಲ್ಲಿ ಪೂಜೆ ನಡೆಯುತ್ತದೆ ಎನ್ನುವುದು  ಸಾಕಷ್ಟು ಜನರಿಗೆ ಮಾಹಿತಿಯೇ ಇರಲಿಲ್ಲ. ಕಳೆದ  ಎರಡು ವರ್ಷಗಳಿಂದ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮಾಹಿತಿ ವೈರಲ್‌ ಆಗಿದೆ. ಇದೆಲ್ಲವೂ ಕುಮಾರಪರ್ವತ ಚಾರಣಿಗರ ಸಂಖ್ಯೆ ಏರಿಕೆಗೆ ಕಾರಣವಾಗಿದೆ.ಮುಂದೆ ಓದಿ

ಕಾಡು ದಾರಿಯ ನಡುವಿನ ಪಯಣ ಹಾಗೂ ಸುಂದರ ಪರಿಸರದ ನಡುವಿನ ಪಯಣ ಈ ಚಾರಣ. ಪರ್ವತ ಏರುವ ಮೊದಲೇ ಅರಣ್ಯ ಇಲಾಖೆ ಸಾಕಷ್ಟು ತಪಾಸಣೆ ಮಾಡುತ್ತಿದ್ದರೂ, ಕಾಡು ಹಾದಿಯ ನಡುವೆ ಪ್ಲಾಸ್ಟಿಕ್‌ ಹಾಗೂ ಪರಿಸರ ಕೆಡಿಸುವ ಪ್ರಕ್ರಿಯೆ ನಡೆಯುತ್ತದೆ. ಒಮ್ಮೆಲೇ ವಿಪರೀತ ಚಾರಣಿಗರು ತೆರಳಿದರೆ, ಕಾಡಿನ ಒಳಗಿನ ಗಲಾಟೆ, ಬೊಬ್ಬೆಗಳಿಂದ ಕಾಡು ಪ್ರಾಣಿಗಳೂ ಭಯಗೊಂಡು ತೊಂದರೆ ನೀಡುವ ಸಂಭವವೂ ಇದೆ. ಪರಿಸರವೂ ಬೇಗನೆ ಕಲುಷಿತವಾಗುವುದು ಸಾಧ್ಯತೆ ಇದೆ. ಹೀಗಾಗಿ ಇಲಾಖೆಯು ಈ ಬಗ್ಗೆ ಗಮನಹರಿಸಬೇಕಾದ್ದು ಅಗತ್ಯ ಇದೆ.

Kumara Parvatha

ಕುಮಾರಪರ್ವತ

More and more people are coming from different parts of the state for the Kumara Parvata trek. A large number of trekkers come even on holidays. For the last two-three weeks, there has been a huge numbers of trekkers. Now environmental protection is a big challenge.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago