Advertisement
MIRROR FOCUS

#Chandrayana3 | ಚಂದ್ರನ ಅಂಗಳಕ್ಕೆ ಹತ್ತಿರವಾದಾಗ ಗೆಳೆಯನನ್ನು ಸ್ವಾಗತಿಸಿದ ಚಂದ್ರಯಾನ2 |

Share

ಭಾರತದ ಮಹತ್ವಾಕಾಂಕ್ಷಿಯ ಯೋಜನೆ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್‌ಗೆ ಪ್ರಯತ್ನಿಸಲು ಕೇವಲ ಎರಡು ದಿನಗಳು ಬಾಕಿ ಇರುವ ವೇಳೆ ಲ್ಯಾಂಡರ್ ಮಾಡ್ಯೂಲ್ (ಎಲ್‌ಎಂ) ಆರ್ಬಿಟರ್‌ನೊಂದಿಗೆ ದ್ವಿಮುಖ ಸಂವಹನವನ್ನು ಸ್ಥಾಪಿಸಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ಹೇಳಿದೆ.  ಚಂದ್ರಯಾನ-3 ಮತ್ತು ಚಂದ್ರಯಾನ-2 ಆರ್ಬಿಟರ್ ನಡುವೆ ಸಂವಹನವನ್ನು ಯಶಸ್ವಿಯಾಗಿ ಸ್ಥಾಪಿಸಲಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

Advertisement
Advertisement
Advertisement
Advertisement
Advertisement

ಚಂದ್ರಯಾನ-2 ಮಿಷನ್‌ನ ಲ್ಯಾಂಡರ್ ಕಳೆದುಹೋದರೂ, ಪ್ರದಾನ, ಆರ್ಬಿಟರ್, ಪ್ರಸ್ತುತ ಚಂದ್ರನ ಸುತ್ತ 100 ಕಿಮೀ x 100 ಕಿಮೀ ಕಕ್ಷೆಯಲ್ಲಿತ್ತು. ಹೀಗಾಗಿ ಚಂದ್ರಯಾನ-2ನ ಆರ್ಬಿಟರ್ ವಾಹನ-ಚಂದ್ರಯಾನ 3ನ್ನು ಸ್ವಾಗತಿಸಿದೆ. ಇಬ್ಬರ ನಡುವೆ ದ್ವಿಮುಖ ಸಂವಹನ ನಡೆದಿದೆ. ಇಸ್ರೋ ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವ ಇತ್ತೀಚಿನ ಹೊಸ ಅಪ್ಡೇಟ್ ಇದಾಗಿದೆ. ಕಳೆದ 5 ವರ್ಷಗಳಿಂದ ಏಕಾಂಗಿಯಾಗಿ ಚಂದ್ರನ ಕಕ್ಷೆ ಸುತ್ತುತ್ತಿದ್ದ ಈ ಆರ್ಬಿಟರ್ ವಿಕ್ರಮ್‌ ಲ್ಯಾಂಡರ್‌ನ  ಸಂಪರ್ಕ ಸಿಕ್ಕಿದೆ. ಕಳೆದ ಬಾರಿ ಕಳುಹಿಸಿದ್ದ ಆರ್ಬಿಟರ್ ಸುಸ್ಥಿತಿಯಲ್ಲಿದ್ದ ಕಾರಣ ಈ ಬಾರಿ ಕೇವಲ ಲ್ಯಾಂಡರ್‌ ಮತ್ತು ರೋವರ್ ಅನ್ನು ಕಳುಹಿಸಿತ್ತು.

Advertisement

ಆಗಸ್ಟ್ 21ರಂದು ಚಂದ್ರಯಾನ-3 ಲ್ಯಾಂಡಿಂಗ್ ಕುರಿತು ಇಸ್ರೋ ಇತ್ತೀಚಿನ ನವೀಕರಣವನ್ನು ಬಿಡುಗಡೆ ಮಾಡಿದೆ. ಲ್ಯಾಂಡಿಂಗ್ ಸಮಯವನ್ನು ಆಗಸ್ಟ್ 23ರಂದು ಸಂಜೆ 6.04ಕ್ಕೆ ಇರಿಸಲಾಗಿದೆ. ಈ ಬಾರಿ ಲ್ಯಾಂಡಿಂಗ್‌ ವೇಳೆ ಯಾವುದೇ ಅಪಾಯವನ್ನು ತಪ್ಪಿಸಲು ಕ್ಯಾಮಾರ ಬಳಸಿ ಫೋಟೋಗಳನ್ನು ಕ್ಲಿಕ್ಕಿಸಲಾಗಿದೆ. ಬಂಡೆಗಳು ಅಥವಾ ಆಳವಾದ ಕಂದಕಗಳಿಲ್ಲದೆ ಸುರಕ್ಷಿತ ಲ್ಯಾಂಡಿಂಗ್ ಪ್ರದೇಶವನ್ನು ಪತ್ತೆಹಚ್ಚಲು ಸಹಾಯ ಮಾಡುವ ಈ ಕ್ಯಾಮೆರಾವನ್ನು ಇಸ್ರೋ ಬಳಕೆ ಮಾಡುತ್ತಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

3 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

5 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago