Advertisement
MIRROR FOCUS

#Chandrayana3 | ಚಂದ್ರನ ಅಂಗಳಕ್ಕೆ ಹತ್ತಿರವಾದಾಗ ಗೆಳೆಯನನ್ನು ಸ್ವಾಗತಿಸಿದ ಚಂದ್ರಯಾನ2 |

Share

ಭಾರತದ ಮಹತ್ವಾಕಾಂಕ್ಷಿಯ ಯೋಜನೆ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್‌ಗೆ ಪ್ರಯತ್ನಿಸಲು ಕೇವಲ ಎರಡು ದಿನಗಳು ಬಾಕಿ ಇರುವ ವೇಳೆ ಲ್ಯಾಂಡರ್ ಮಾಡ್ಯೂಲ್ (ಎಲ್‌ಎಂ) ಆರ್ಬಿಟರ್‌ನೊಂದಿಗೆ ದ್ವಿಮುಖ ಸಂವಹನವನ್ನು ಸ್ಥಾಪಿಸಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ಹೇಳಿದೆ.  ಚಂದ್ರಯಾನ-3 ಮತ್ತು ಚಂದ್ರಯಾನ-2 ಆರ್ಬಿಟರ್ ನಡುವೆ ಸಂವಹನವನ್ನು ಯಶಸ್ವಿಯಾಗಿ ಸ್ಥಾಪಿಸಲಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

ಚಂದ್ರಯಾನ-2 ಮಿಷನ್‌ನ ಲ್ಯಾಂಡರ್ ಕಳೆದುಹೋದರೂ, ಪ್ರದಾನ, ಆರ್ಬಿಟರ್, ಪ್ರಸ್ತುತ ಚಂದ್ರನ ಸುತ್ತ 100 ಕಿಮೀ x 100 ಕಿಮೀ ಕಕ್ಷೆಯಲ್ಲಿತ್ತು. ಹೀಗಾಗಿ ಚಂದ್ರಯಾನ-2ನ ಆರ್ಬಿಟರ್ ವಾಹನ-ಚಂದ್ರಯಾನ 3ನ್ನು ಸ್ವಾಗತಿಸಿದೆ. ಇಬ್ಬರ ನಡುವೆ ದ್ವಿಮುಖ ಸಂವಹನ ನಡೆದಿದೆ. ಇಸ್ರೋ ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವ ಇತ್ತೀಚಿನ ಹೊಸ ಅಪ್ಡೇಟ್ ಇದಾಗಿದೆ. ಕಳೆದ 5 ವರ್ಷಗಳಿಂದ ಏಕಾಂಗಿಯಾಗಿ ಚಂದ್ರನ ಕಕ್ಷೆ ಸುತ್ತುತ್ತಿದ್ದ ಈ ಆರ್ಬಿಟರ್ ವಿಕ್ರಮ್‌ ಲ್ಯಾಂಡರ್‌ನ  ಸಂಪರ್ಕ ಸಿಕ್ಕಿದೆ. ಕಳೆದ ಬಾರಿ ಕಳುಹಿಸಿದ್ದ ಆರ್ಬಿಟರ್ ಸುಸ್ಥಿತಿಯಲ್ಲಿದ್ದ ಕಾರಣ ಈ ಬಾರಿ ಕೇವಲ ಲ್ಯಾಂಡರ್‌ ಮತ್ತು ರೋವರ್ ಅನ್ನು ಕಳುಹಿಸಿತ್ತು.

ಆಗಸ್ಟ್ 21ರಂದು ಚಂದ್ರಯಾನ-3 ಲ್ಯಾಂಡಿಂಗ್ ಕುರಿತು ಇಸ್ರೋ ಇತ್ತೀಚಿನ ನವೀಕರಣವನ್ನು ಬಿಡುಗಡೆ ಮಾಡಿದೆ. ಲ್ಯಾಂಡಿಂಗ್ ಸಮಯವನ್ನು ಆಗಸ್ಟ್ 23ರಂದು ಸಂಜೆ 6.04ಕ್ಕೆ ಇರಿಸಲಾಗಿದೆ. ಈ ಬಾರಿ ಲ್ಯಾಂಡಿಂಗ್‌ ವೇಳೆ ಯಾವುದೇ ಅಪಾಯವನ್ನು ತಪ್ಪಿಸಲು ಕ್ಯಾಮಾರ ಬಳಸಿ ಫೋಟೋಗಳನ್ನು ಕ್ಲಿಕ್ಕಿಸಲಾಗಿದೆ. ಬಂಡೆಗಳು ಅಥವಾ ಆಳವಾದ ಕಂದಕಗಳಿಲ್ಲದೆ ಸುರಕ್ಷಿತ ಲ್ಯಾಂಡಿಂಗ್ ಪ್ರದೇಶವನ್ನು ಪತ್ತೆಹಚ್ಚಲು ಸಹಾಯ ಮಾಡುವ ಈ ಕ್ಯಾಮೆರಾವನ್ನು ಇಸ್ರೋ ಬಳಕೆ ಮಾಡುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

9 minutes ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

52 minutes ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

1 hour ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

8 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

13 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

13 hours ago