Advertisement
MIRROR FOCUS

#Chandrayana3 | ಚಂದ್ರನ ಅಂಗಳಕ್ಕೆ ಹತ್ತಿರವಾದಾಗ ಗೆಳೆಯನನ್ನು ಸ್ವಾಗತಿಸಿದ ಚಂದ್ರಯಾನ2 |

Share

ಭಾರತದ ಮಹತ್ವಾಕಾಂಕ್ಷಿಯ ಯೋಜನೆ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್‌ಗೆ ಪ್ರಯತ್ನಿಸಲು ಕೇವಲ ಎರಡು ದಿನಗಳು ಬಾಕಿ ಇರುವ ವೇಳೆ ಲ್ಯಾಂಡರ್ ಮಾಡ್ಯೂಲ್ (ಎಲ್‌ಎಂ) ಆರ್ಬಿಟರ್‌ನೊಂದಿಗೆ ದ್ವಿಮುಖ ಸಂವಹನವನ್ನು ಸ್ಥಾಪಿಸಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ಹೇಳಿದೆ.  ಚಂದ್ರಯಾನ-3 ಮತ್ತು ಚಂದ್ರಯಾನ-2 ಆರ್ಬಿಟರ್ ನಡುವೆ ಸಂವಹನವನ್ನು ಯಶಸ್ವಿಯಾಗಿ ಸ್ಥಾಪಿಸಲಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

ಚಂದ್ರಯಾನ-2 ಮಿಷನ್‌ನ ಲ್ಯಾಂಡರ್ ಕಳೆದುಹೋದರೂ, ಪ್ರದಾನ, ಆರ್ಬಿಟರ್, ಪ್ರಸ್ತುತ ಚಂದ್ರನ ಸುತ್ತ 100 ಕಿಮೀ x 100 ಕಿಮೀ ಕಕ್ಷೆಯಲ್ಲಿತ್ತು. ಹೀಗಾಗಿ ಚಂದ್ರಯಾನ-2ನ ಆರ್ಬಿಟರ್ ವಾಹನ-ಚಂದ್ರಯಾನ 3ನ್ನು ಸ್ವಾಗತಿಸಿದೆ. ಇಬ್ಬರ ನಡುವೆ ದ್ವಿಮುಖ ಸಂವಹನ ನಡೆದಿದೆ. ಇಸ್ರೋ ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವ ಇತ್ತೀಚಿನ ಹೊಸ ಅಪ್ಡೇಟ್ ಇದಾಗಿದೆ. ಕಳೆದ 5 ವರ್ಷಗಳಿಂದ ಏಕಾಂಗಿಯಾಗಿ ಚಂದ್ರನ ಕಕ್ಷೆ ಸುತ್ತುತ್ತಿದ್ದ ಈ ಆರ್ಬಿಟರ್ ವಿಕ್ರಮ್‌ ಲ್ಯಾಂಡರ್‌ನ  ಸಂಪರ್ಕ ಸಿಕ್ಕಿದೆ. ಕಳೆದ ಬಾರಿ ಕಳುಹಿಸಿದ್ದ ಆರ್ಬಿಟರ್ ಸುಸ್ಥಿತಿಯಲ್ಲಿದ್ದ ಕಾರಣ ಈ ಬಾರಿ ಕೇವಲ ಲ್ಯಾಂಡರ್‌ ಮತ್ತು ರೋವರ್ ಅನ್ನು ಕಳುಹಿಸಿತ್ತು.

ಆಗಸ್ಟ್ 21ರಂದು ಚಂದ್ರಯಾನ-3 ಲ್ಯಾಂಡಿಂಗ್ ಕುರಿತು ಇಸ್ರೋ ಇತ್ತೀಚಿನ ನವೀಕರಣವನ್ನು ಬಿಡುಗಡೆ ಮಾಡಿದೆ. ಲ್ಯಾಂಡಿಂಗ್ ಸಮಯವನ್ನು ಆಗಸ್ಟ್ 23ರಂದು ಸಂಜೆ 6.04ಕ್ಕೆ ಇರಿಸಲಾಗಿದೆ. ಈ ಬಾರಿ ಲ್ಯಾಂಡಿಂಗ್‌ ವೇಳೆ ಯಾವುದೇ ಅಪಾಯವನ್ನು ತಪ್ಪಿಸಲು ಕ್ಯಾಮಾರ ಬಳಸಿ ಫೋಟೋಗಳನ್ನು ಕ್ಲಿಕ್ಕಿಸಲಾಗಿದೆ. ಬಂಡೆಗಳು ಅಥವಾ ಆಳವಾದ ಕಂದಕಗಳಿಲ್ಲದೆ ಸುರಕ್ಷಿತ ಲ್ಯಾಂಡಿಂಗ್ ಪ್ರದೇಶವನ್ನು ಪತ್ತೆಹಚ್ಚಲು ಸಹಾಯ ಮಾಡುವ ಈ ಕ್ಯಾಮೆರಾವನ್ನು ಇಸ್ರೋ ಬಳಕೆ ಮಾಡುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

7 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

8 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

17 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

21 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

21 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

1 day ago