Advertisement
MIRROR FOCUS

#Chandrayana3 | ಚಂದ್ರನ ಅಂಗಳಕ್ಕೆ ಹತ್ತಿರವಾದಾಗ ಗೆಳೆಯನನ್ನು ಸ್ವಾಗತಿಸಿದ ಚಂದ್ರಯಾನ2 |

Share

ಭಾರತದ ಮಹತ್ವಾಕಾಂಕ್ಷಿಯ ಯೋಜನೆ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್‌ಗೆ ಪ್ರಯತ್ನಿಸಲು ಕೇವಲ ಎರಡು ದಿನಗಳು ಬಾಕಿ ಇರುವ ವೇಳೆ ಲ್ಯಾಂಡರ್ ಮಾಡ್ಯೂಲ್ (ಎಲ್‌ಎಂ) ಆರ್ಬಿಟರ್‌ನೊಂದಿಗೆ ದ್ವಿಮುಖ ಸಂವಹನವನ್ನು ಸ್ಥಾಪಿಸಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ಹೇಳಿದೆ.  ಚಂದ್ರಯಾನ-3 ಮತ್ತು ಚಂದ್ರಯಾನ-2 ಆರ್ಬಿಟರ್ ನಡುವೆ ಸಂವಹನವನ್ನು ಯಶಸ್ವಿಯಾಗಿ ಸ್ಥಾಪಿಸಲಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

ಚಂದ್ರಯಾನ-2 ಮಿಷನ್‌ನ ಲ್ಯಾಂಡರ್ ಕಳೆದುಹೋದರೂ, ಪ್ರದಾನ, ಆರ್ಬಿಟರ್, ಪ್ರಸ್ತುತ ಚಂದ್ರನ ಸುತ್ತ 100 ಕಿಮೀ x 100 ಕಿಮೀ ಕಕ್ಷೆಯಲ್ಲಿತ್ತು. ಹೀಗಾಗಿ ಚಂದ್ರಯಾನ-2ನ ಆರ್ಬಿಟರ್ ವಾಹನ-ಚಂದ್ರಯಾನ 3ನ್ನು ಸ್ವಾಗತಿಸಿದೆ. ಇಬ್ಬರ ನಡುವೆ ದ್ವಿಮುಖ ಸಂವಹನ ನಡೆದಿದೆ. ಇಸ್ರೋ ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವ ಇತ್ತೀಚಿನ ಹೊಸ ಅಪ್ಡೇಟ್ ಇದಾಗಿದೆ. ಕಳೆದ 5 ವರ್ಷಗಳಿಂದ ಏಕಾಂಗಿಯಾಗಿ ಚಂದ್ರನ ಕಕ್ಷೆ ಸುತ್ತುತ್ತಿದ್ದ ಈ ಆರ್ಬಿಟರ್ ವಿಕ್ರಮ್‌ ಲ್ಯಾಂಡರ್‌ನ  ಸಂಪರ್ಕ ಸಿಕ್ಕಿದೆ. ಕಳೆದ ಬಾರಿ ಕಳುಹಿಸಿದ್ದ ಆರ್ಬಿಟರ್ ಸುಸ್ಥಿತಿಯಲ್ಲಿದ್ದ ಕಾರಣ ಈ ಬಾರಿ ಕೇವಲ ಲ್ಯಾಂಡರ್‌ ಮತ್ತು ರೋವರ್ ಅನ್ನು ಕಳುಹಿಸಿತ್ತು.

ಆಗಸ್ಟ್ 21ರಂದು ಚಂದ್ರಯಾನ-3 ಲ್ಯಾಂಡಿಂಗ್ ಕುರಿತು ಇಸ್ರೋ ಇತ್ತೀಚಿನ ನವೀಕರಣವನ್ನು ಬಿಡುಗಡೆ ಮಾಡಿದೆ. ಲ್ಯಾಂಡಿಂಗ್ ಸಮಯವನ್ನು ಆಗಸ್ಟ್ 23ರಂದು ಸಂಜೆ 6.04ಕ್ಕೆ ಇರಿಸಲಾಗಿದೆ. ಈ ಬಾರಿ ಲ್ಯಾಂಡಿಂಗ್‌ ವೇಳೆ ಯಾವುದೇ ಅಪಾಯವನ್ನು ತಪ್ಪಿಸಲು ಕ್ಯಾಮಾರ ಬಳಸಿ ಫೋಟೋಗಳನ್ನು ಕ್ಲಿಕ್ಕಿಸಲಾಗಿದೆ. ಬಂಡೆಗಳು ಅಥವಾ ಆಳವಾದ ಕಂದಕಗಳಿಲ್ಲದೆ ಸುರಕ್ಷಿತ ಲ್ಯಾಂಡಿಂಗ್ ಪ್ರದೇಶವನ್ನು ಪತ್ತೆಹಚ್ಚಲು ಸಹಾಯ ಮಾಡುವ ಈ ಕ್ಯಾಮೆರಾವನ್ನು ಇಸ್ರೋ ಬಳಕೆ ಮಾಡುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

7 hours ago

ಬಾಂಗ್ಲಾದೇಶದಲ್ಲಿ ಭೀಕರ ಪ್ರವಾಹ – ಭಾರಿ ಮಳೆಯಿಂದ 50 ಕ್ಕೂ ಅಧಿಕ ಮಂದಿ ಸಾವು ; 10 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ

ಬಾಂಗ್ಲಾದೇಶದಲ್ಲಿ ಭಾರೀ ಮಳೆಯಿಂದ 44 ಮಂದಿ ಮೃತಪಟ್ಟಿದ್ದು, 10 ಲಕ್ಷಕ್ಕೂ ಹೆಚ್ಚು ಜನರು…

8 hours ago

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…

15 hours ago

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

23 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

1 day ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

1 day ago