Advertisement
MIRROR FOCUS

#Chandrayana3 | ಚಂದ್ರನ ಅಂಗಳಕ್ಕೆ ಹತ್ತಿರವಾದಾಗ ಗೆಳೆಯನನ್ನು ಸ್ವಾಗತಿಸಿದ ಚಂದ್ರಯಾನ2 |

Share

ಭಾರತದ ಮಹತ್ವಾಕಾಂಕ್ಷಿಯ ಯೋಜನೆ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್‌ಗೆ ಪ್ರಯತ್ನಿಸಲು ಕೇವಲ ಎರಡು ದಿನಗಳು ಬಾಕಿ ಇರುವ ವೇಳೆ ಲ್ಯಾಂಡರ್ ಮಾಡ್ಯೂಲ್ (ಎಲ್‌ಎಂ) ಆರ್ಬಿಟರ್‌ನೊಂದಿಗೆ ದ್ವಿಮುಖ ಸಂವಹನವನ್ನು ಸ್ಥಾಪಿಸಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ಹೇಳಿದೆ.  ಚಂದ್ರಯಾನ-3 ಮತ್ತು ಚಂದ್ರಯಾನ-2 ಆರ್ಬಿಟರ್ ನಡುವೆ ಸಂವಹನವನ್ನು ಯಶಸ್ವಿಯಾಗಿ ಸ್ಥಾಪಿಸಲಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

ಚಂದ್ರಯಾನ-2 ಮಿಷನ್‌ನ ಲ್ಯಾಂಡರ್ ಕಳೆದುಹೋದರೂ, ಪ್ರದಾನ, ಆರ್ಬಿಟರ್, ಪ್ರಸ್ತುತ ಚಂದ್ರನ ಸುತ್ತ 100 ಕಿಮೀ x 100 ಕಿಮೀ ಕಕ್ಷೆಯಲ್ಲಿತ್ತು. ಹೀಗಾಗಿ ಚಂದ್ರಯಾನ-2ನ ಆರ್ಬಿಟರ್ ವಾಹನ-ಚಂದ್ರಯಾನ 3ನ್ನು ಸ್ವಾಗತಿಸಿದೆ. ಇಬ್ಬರ ನಡುವೆ ದ್ವಿಮುಖ ಸಂವಹನ ನಡೆದಿದೆ. ಇಸ್ರೋ ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವ ಇತ್ತೀಚಿನ ಹೊಸ ಅಪ್ಡೇಟ್ ಇದಾಗಿದೆ. ಕಳೆದ 5 ವರ್ಷಗಳಿಂದ ಏಕಾಂಗಿಯಾಗಿ ಚಂದ್ರನ ಕಕ್ಷೆ ಸುತ್ತುತ್ತಿದ್ದ ಈ ಆರ್ಬಿಟರ್ ವಿಕ್ರಮ್‌ ಲ್ಯಾಂಡರ್‌ನ  ಸಂಪರ್ಕ ಸಿಕ್ಕಿದೆ. ಕಳೆದ ಬಾರಿ ಕಳುಹಿಸಿದ್ದ ಆರ್ಬಿಟರ್ ಸುಸ್ಥಿತಿಯಲ್ಲಿದ್ದ ಕಾರಣ ಈ ಬಾರಿ ಕೇವಲ ಲ್ಯಾಂಡರ್‌ ಮತ್ತು ರೋವರ್ ಅನ್ನು ಕಳುಹಿಸಿತ್ತು.

ಆಗಸ್ಟ್ 21ರಂದು ಚಂದ್ರಯಾನ-3 ಲ್ಯಾಂಡಿಂಗ್ ಕುರಿತು ಇಸ್ರೋ ಇತ್ತೀಚಿನ ನವೀಕರಣವನ್ನು ಬಿಡುಗಡೆ ಮಾಡಿದೆ. ಲ್ಯಾಂಡಿಂಗ್ ಸಮಯವನ್ನು ಆಗಸ್ಟ್ 23ರಂದು ಸಂಜೆ 6.04ಕ್ಕೆ ಇರಿಸಲಾಗಿದೆ. ಈ ಬಾರಿ ಲ್ಯಾಂಡಿಂಗ್‌ ವೇಳೆ ಯಾವುದೇ ಅಪಾಯವನ್ನು ತಪ್ಪಿಸಲು ಕ್ಯಾಮಾರ ಬಳಸಿ ಫೋಟೋಗಳನ್ನು ಕ್ಲಿಕ್ಕಿಸಲಾಗಿದೆ. ಬಂಡೆಗಳು ಅಥವಾ ಆಳವಾದ ಕಂದಕಗಳಿಲ್ಲದೆ ಸುರಕ್ಷಿತ ಲ್ಯಾಂಡಿಂಗ್ ಪ್ರದೇಶವನ್ನು ಪತ್ತೆಹಚ್ಚಲು ಸಹಾಯ ಮಾಡುವ ಈ ಕ್ಯಾಮೆರಾವನ್ನು ಇಸ್ರೋ ಬಳಕೆ ಮಾಡುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

4 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

11 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

17 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago