Advertisement
MIRROR FOCUS

ಕೃಷಿ ಕ್ಷೇತ್ರಕ್ಕೆ ಪಶ್ಚಿಮ ಏಷ್ಯಾ ನಿರ್ಣಾಯಕ ಪಾತ್ರ | ಮನಾಮ ಸಂವಾದದಲ್ಲಿ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ |

Share

ಪಶ್ಚಿಮ ಏಷ್ಯಾಕ್ಕಾಗಿ ಭಾರತದ ಸಮಗ್ರ ಕಾರ್ಯತಂತ್ರವನ್ನು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಅವರು ಮನಾಮ ಸಂವಾದದಲ್ಲಿ ಪ್ರಸ್ತುತಪಡಿಸಿದರು.…..ಮುಂದೆ ಓದಿ….

Advertisement
Advertisement

ಸಂವಾದದ ಸಮಾರೋಪದಲ್ಲಿ ಅವರು, ಭಾರತದ ಆರ್ಥಿಕ ಮತ್ತು ಕಾರ್ಯತಂತ್ರದ ಹಿತಾಸಕ್ತಿಗಳಿಗೆ ಈ ಪ್ರದೇಶದ ನಿರ್ಣಾಯಕ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು. ಭಾರತ ಕೊಲ್ಲಿ ಸಹಕಾರ ಮಂಡಳಿ -ಜಿಸಿಸಿ, ಇರಾನ್ ಮತ್ತು ಇರಾಕ್‌ನೊಂದಿಗೆ ವಾರ್ಷಿಕ 170 ರಿಂದ 180 ಶತಕೋಟಿ ಡಾಲರ್ ಮೌಲ್ಯದ ವಹಿವಾಟು ನಡೆಸುತ್ತದೆ. ಅಲ್ಲದೆ,  ಮೆಡಿಟರೇನಿಯನ್ ರಾಷ್ಟ್ರಗಳೊಂದಿಗಿನ ವಹಿವಾಟು ಪ್ರಮಾಣ 80 ರಿಂದ 90 ಶತಕೋಟಿ ಡಾಲರ್ ನಷ್ಟಿದೆ ಎಂದು ಹೇಳಿದರು. ಗಲ್ಫ್ ಪ್ರದೇಶದಲ್ಲಿ 10 ದಶಲಕ್ಷ ಭಾರತೀಯರು ಮತ್ತು ಮೆಡಿಟರೇನಿಯನ್ ದೇಶಗಳಲ್ಲಿ ಐದು ಲಕ್ಷ ಭಾರತೀಯರು ನೆಲೆಸಿದ್ದು, ಭಾರತ ಮತ್ತು ಪಶ್ಚಿಮ ಏಷ್ಯಾ ನಡುವೆ ಪ್ರಮುಖ ಮಾನವ ಸಂಪರ್ಕ ಸೇತುವೆಯಾಗಿ ಪ್ರತಿನಿಧಿಸುತ್ತಿದ್ದಾರೆ. ದ್ವಿಪಕ್ಷೀಯ ಸಂಬಂಧಗಳು ಮತ್ತು ಆರ್ಥಿಕ ಬೆಳವಣಿಗೆಗೆ ಅವರು  ಗಮನಾರ್ಹ ಕೊಡುಗೆ ನೀಡಿದ್ದಾರೆ ಎಂದು ಡಾ. ಎಸ್  ಜೈಶಂಕರ್ ಹೇಳಿದರು.…..ಮುಂದೆ ಓದಿ….

ಭಾರತದ ಭವಿಷ್ಯದ ಇಂಧನ ಭದ್ರತೆಯಲ್ಲಿ ವಿಶೇಷವಾಗಿ ಹಸಿರು ಜಲಜನಕ ಮತ್ತು ಹಸಿರು ಅಮೋನಿಯದಂತಹ ಉದಯೋನ್ಮುಖ ವಲಯಗಳಲ್ಲಿ ಪಶ್ಚಿಮ ಏಷ್ಯಾ ಪ್ರದೇಶದ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದ ಸಚಿವರು,  ಸಾಂಪ್ರದಾಯಿಕ ಇಂಧನ ಸಂಪನ್ಮೂಲಗಳನ್ನು ಮೀರಿ, ರಸಗೊಬ್ಬರ ಆಮದಿನ ಮೂಲಕ ಭಾರತದ ಕೃಷಿ ಕ್ಷೇತ್ರಕ್ಕೆ ಈ ಪ್ರದೇಶವು ನಿರ್ಣಾಯಕವಾಗಿದೆ. ತಂತ್ರಜ್ಞಾನ ಮತ್ತು ಹೂಡಿಕೆಯ ಸಹಯೋಗದಲ್ಲಿ ಪ್ರಮುಖ ಪಾಲುದಾರನಾಗಿ ಹೊರಹೊಮ್ಮುತ್ತಿದೆ ಎಂದು ಅಭಿಪ್ರಾಯಪಟ್ಟರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

6 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago