Advertisement
MIRROR FOCUS

ಕೃಷಿ ಕ್ಷೇತ್ರಕ್ಕೆ ಪಶ್ಚಿಮ ಏಷ್ಯಾ ನಿರ್ಣಾಯಕ ಪಾತ್ರ | ಮನಾಮ ಸಂವಾದದಲ್ಲಿ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ |

Share

ಪಶ್ಚಿಮ ಏಷ್ಯಾಕ್ಕಾಗಿ ಭಾರತದ ಸಮಗ್ರ ಕಾರ್ಯತಂತ್ರವನ್ನು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಅವರು ಮನಾಮ ಸಂವಾದದಲ್ಲಿ ಪ್ರಸ್ತುತಪಡಿಸಿದರು.…..ಮುಂದೆ ಓದಿ….

Advertisement
Advertisement
Advertisement
Advertisement

ಸಂವಾದದ ಸಮಾರೋಪದಲ್ಲಿ ಅವರು, ಭಾರತದ ಆರ್ಥಿಕ ಮತ್ತು ಕಾರ್ಯತಂತ್ರದ ಹಿತಾಸಕ್ತಿಗಳಿಗೆ ಈ ಪ್ರದೇಶದ ನಿರ್ಣಾಯಕ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು. ಭಾರತ ಕೊಲ್ಲಿ ಸಹಕಾರ ಮಂಡಳಿ -ಜಿಸಿಸಿ, ಇರಾನ್ ಮತ್ತು ಇರಾಕ್‌ನೊಂದಿಗೆ ವಾರ್ಷಿಕ 170 ರಿಂದ 180 ಶತಕೋಟಿ ಡಾಲರ್ ಮೌಲ್ಯದ ವಹಿವಾಟು ನಡೆಸುತ್ತದೆ. ಅಲ್ಲದೆ,  ಮೆಡಿಟರೇನಿಯನ್ ರಾಷ್ಟ್ರಗಳೊಂದಿಗಿನ ವಹಿವಾಟು ಪ್ರಮಾಣ 80 ರಿಂದ 90 ಶತಕೋಟಿ ಡಾಲರ್ ನಷ್ಟಿದೆ ಎಂದು ಹೇಳಿದರು. ಗಲ್ಫ್ ಪ್ರದೇಶದಲ್ಲಿ 10 ದಶಲಕ್ಷ ಭಾರತೀಯರು ಮತ್ತು ಮೆಡಿಟರೇನಿಯನ್ ದೇಶಗಳಲ್ಲಿ ಐದು ಲಕ್ಷ ಭಾರತೀಯರು ನೆಲೆಸಿದ್ದು, ಭಾರತ ಮತ್ತು ಪಶ್ಚಿಮ ಏಷ್ಯಾ ನಡುವೆ ಪ್ರಮುಖ ಮಾನವ ಸಂಪರ್ಕ ಸೇತುವೆಯಾಗಿ ಪ್ರತಿನಿಧಿಸುತ್ತಿದ್ದಾರೆ. ದ್ವಿಪಕ್ಷೀಯ ಸಂಬಂಧಗಳು ಮತ್ತು ಆರ್ಥಿಕ ಬೆಳವಣಿಗೆಗೆ ಅವರು  ಗಮನಾರ್ಹ ಕೊಡುಗೆ ನೀಡಿದ್ದಾರೆ ಎಂದು ಡಾ. ಎಸ್  ಜೈಶಂಕರ್ ಹೇಳಿದರು.…..ಮುಂದೆ ಓದಿ….

Advertisement

ಭಾರತದ ಭವಿಷ್ಯದ ಇಂಧನ ಭದ್ರತೆಯಲ್ಲಿ ವಿಶೇಷವಾಗಿ ಹಸಿರು ಜಲಜನಕ ಮತ್ತು ಹಸಿರು ಅಮೋನಿಯದಂತಹ ಉದಯೋನ್ಮುಖ ವಲಯಗಳಲ್ಲಿ ಪಶ್ಚಿಮ ಏಷ್ಯಾ ಪ್ರದೇಶದ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದ ಸಚಿವರು,  ಸಾಂಪ್ರದಾಯಿಕ ಇಂಧನ ಸಂಪನ್ಮೂಲಗಳನ್ನು ಮೀರಿ, ರಸಗೊಬ್ಬರ ಆಮದಿನ ಮೂಲಕ ಭಾರತದ ಕೃಷಿ ಕ್ಷೇತ್ರಕ್ಕೆ ಈ ಪ್ರದೇಶವು ನಿರ್ಣಾಯಕವಾಗಿದೆ. ತಂತ್ರಜ್ಞಾನ ಮತ್ತು ಹೂಡಿಕೆಯ ಸಹಯೋಗದಲ್ಲಿ ಪ್ರಮುಖ ಪಾಲುದಾರನಾಗಿ ಹೊರಹೊಮ್ಮುತ್ತಿದೆ ಎಂದು ಅಭಿಪ್ರಾಯಪಟ್ಟರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

4 days ago