Advertisement
MIRROR FOCUS

ಕೃಷಿ ಕ್ಷೇತ್ರಕ್ಕೆ ಪಶ್ಚಿಮ ಏಷ್ಯಾ ನಿರ್ಣಾಯಕ ಪಾತ್ರ | ಮನಾಮ ಸಂವಾದದಲ್ಲಿ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ |

Share

ಪಶ್ಚಿಮ ಏಷ್ಯಾಕ್ಕಾಗಿ ಭಾರತದ ಸಮಗ್ರ ಕಾರ್ಯತಂತ್ರವನ್ನು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಅವರು ಮನಾಮ ಸಂವಾದದಲ್ಲಿ ಪ್ರಸ್ತುತಪಡಿಸಿದರು.…..ಮುಂದೆ ಓದಿ….

ಸಂವಾದದ ಸಮಾರೋಪದಲ್ಲಿ ಅವರು, ಭಾರತದ ಆರ್ಥಿಕ ಮತ್ತು ಕಾರ್ಯತಂತ್ರದ ಹಿತಾಸಕ್ತಿಗಳಿಗೆ ಈ ಪ್ರದೇಶದ ನಿರ್ಣಾಯಕ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು. ಭಾರತ ಕೊಲ್ಲಿ ಸಹಕಾರ ಮಂಡಳಿ -ಜಿಸಿಸಿ, ಇರಾನ್ ಮತ್ತು ಇರಾಕ್‌ನೊಂದಿಗೆ ವಾರ್ಷಿಕ 170 ರಿಂದ 180 ಶತಕೋಟಿ ಡಾಲರ್ ಮೌಲ್ಯದ ವಹಿವಾಟು ನಡೆಸುತ್ತದೆ. ಅಲ್ಲದೆ,  ಮೆಡಿಟರೇನಿಯನ್ ರಾಷ್ಟ್ರಗಳೊಂದಿಗಿನ ವಹಿವಾಟು ಪ್ರಮಾಣ 80 ರಿಂದ 90 ಶತಕೋಟಿ ಡಾಲರ್ ನಷ್ಟಿದೆ ಎಂದು ಹೇಳಿದರು. ಗಲ್ಫ್ ಪ್ರದೇಶದಲ್ಲಿ 10 ದಶಲಕ್ಷ ಭಾರತೀಯರು ಮತ್ತು ಮೆಡಿಟರೇನಿಯನ್ ದೇಶಗಳಲ್ಲಿ ಐದು ಲಕ್ಷ ಭಾರತೀಯರು ನೆಲೆಸಿದ್ದು, ಭಾರತ ಮತ್ತು ಪಶ್ಚಿಮ ಏಷ್ಯಾ ನಡುವೆ ಪ್ರಮುಖ ಮಾನವ ಸಂಪರ್ಕ ಸೇತುವೆಯಾಗಿ ಪ್ರತಿನಿಧಿಸುತ್ತಿದ್ದಾರೆ. ದ್ವಿಪಕ್ಷೀಯ ಸಂಬಂಧಗಳು ಮತ್ತು ಆರ್ಥಿಕ ಬೆಳವಣಿಗೆಗೆ ಅವರು  ಗಮನಾರ್ಹ ಕೊಡುಗೆ ನೀಡಿದ್ದಾರೆ ಎಂದು ಡಾ. ಎಸ್  ಜೈಶಂಕರ್ ಹೇಳಿದರು.…..ಮುಂದೆ ಓದಿ….

ಭಾರತದ ಭವಿಷ್ಯದ ಇಂಧನ ಭದ್ರತೆಯಲ್ಲಿ ವಿಶೇಷವಾಗಿ ಹಸಿರು ಜಲಜನಕ ಮತ್ತು ಹಸಿರು ಅಮೋನಿಯದಂತಹ ಉದಯೋನ್ಮುಖ ವಲಯಗಳಲ್ಲಿ ಪಶ್ಚಿಮ ಏಷ್ಯಾ ಪ್ರದೇಶದ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದ ಸಚಿವರು,  ಸಾಂಪ್ರದಾಯಿಕ ಇಂಧನ ಸಂಪನ್ಮೂಲಗಳನ್ನು ಮೀರಿ, ರಸಗೊಬ್ಬರ ಆಮದಿನ ಮೂಲಕ ಭಾರತದ ಕೃಷಿ ಕ್ಷೇತ್ರಕ್ಕೆ ಈ ಪ್ರದೇಶವು ನಿರ್ಣಾಯಕವಾಗಿದೆ. ತಂತ್ರಜ್ಞಾನ ಮತ್ತು ಹೂಡಿಕೆಯ ಸಹಯೋಗದಲ್ಲಿ ಪ್ರಮುಖ ಪಾಲುದಾರನಾಗಿ ಹೊರಹೊಮ್ಮುತ್ತಿದೆ ಎಂದು ಅಭಿಪ್ರಾಯಪಟ್ಟರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

6 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

12 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

24 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

1 day ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

2 days ago