Advertisement
MIRROR FOCUS

ಕೃಷಿ ಕ್ಷೇತ್ರಕ್ಕೆ ಪಶ್ಚಿಮ ಏಷ್ಯಾ ನಿರ್ಣಾಯಕ ಪಾತ್ರ | ಮನಾಮ ಸಂವಾದದಲ್ಲಿ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ |

Share

ಪಶ್ಚಿಮ ಏಷ್ಯಾಕ್ಕಾಗಿ ಭಾರತದ ಸಮಗ್ರ ಕಾರ್ಯತಂತ್ರವನ್ನು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಅವರು ಮನಾಮ ಸಂವಾದದಲ್ಲಿ ಪ್ರಸ್ತುತಪಡಿಸಿದರು.…..ಮುಂದೆ ಓದಿ….

ಸಂವಾದದ ಸಮಾರೋಪದಲ್ಲಿ ಅವರು, ಭಾರತದ ಆರ್ಥಿಕ ಮತ್ತು ಕಾರ್ಯತಂತ್ರದ ಹಿತಾಸಕ್ತಿಗಳಿಗೆ ಈ ಪ್ರದೇಶದ ನಿರ್ಣಾಯಕ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು. ಭಾರತ ಕೊಲ್ಲಿ ಸಹಕಾರ ಮಂಡಳಿ -ಜಿಸಿಸಿ, ಇರಾನ್ ಮತ್ತು ಇರಾಕ್‌ನೊಂದಿಗೆ ವಾರ್ಷಿಕ 170 ರಿಂದ 180 ಶತಕೋಟಿ ಡಾಲರ್ ಮೌಲ್ಯದ ವಹಿವಾಟು ನಡೆಸುತ್ತದೆ. ಅಲ್ಲದೆ,  ಮೆಡಿಟರೇನಿಯನ್ ರಾಷ್ಟ್ರಗಳೊಂದಿಗಿನ ವಹಿವಾಟು ಪ್ರಮಾಣ 80 ರಿಂದ 90 ಶತಕೋಟಿ ಡಾಲರ್ ನಷ್ಟಿದೆ ಎಂದು ಹೇಳಿದರು. ಗಲ್ಫ್ ಪ್ರದೇಶದಲ್ಲಿ 10 ದಶಲಕ್ಷ ಭಾರತೀಯರು ಮತ್ತು ಮೆಡಿಟರೇನಿಯನ್ ದೇಶಗಳಲ್ಲಿ ಐದು ಲಕ್ಷ ಭಾರತೀಯರು ನೆಲೆಸಿದ್ದು, ಭಾರತ ಮತ್ತು ಪಶ್ಚಿಮ ಏಷ್ಯಾ ನಡುವೆ ಪ್ರಮುಖ ಮಾನವ ಸಂಪರ್ಕ ಸೇತುವೆಯಾಗಿ ಪ್ರತಿನಿಧಿಸುತ್ತಿದ್ದಾರೆ. ದ್ವಿಪಕ್ಷೀಯ ಸಂಬಂಧಗಳು ಮತ್ತು ಆರ್ಥಿಕ ಬೆಳವಣಿಗೆಗೆ ಅವರು  ಗಮನಾರ್ಹ ಕೊಡುಗೆ ನೀಡಿದ್ದಾರೆ ಎಂದು ಡಾ. ಎಸ್  ಜೈಶಂಕರ್ ಹೇಳಿದರು.…..ಮುಂದೆ ಓದಿ….

ಭಾರತದ ಭವಿಷ್ಯದ ಇಂಧನ ಭದ್ರತೆಯಲ್ಲಿ ವಿಶೇಷವಾಗಿ ಹಸಿರು ಜಲಜನಕ ಮತ್ತು ಹಸಿರು ಅಮೋನಿಯದಂತಹ ಉದಯೋನ್ಮುಖ ವಲಯಗಳಲ್ಲಿ ಪಶ್ಚಿಮ ಏಷ್ಯಾ ಪ್ರದೇಶದ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದ ಸಚಿವರು,  ಸಾಂಪ್ರದಾಯಿಕ ಇಂಧನ ಸಂಪನ್ಮೂಲಗಳನ್ನು ಮೀರಿ, ರಸಗೊಬ್ಬರ ಆಮದಿನ ಮೂಲಕ ಭಾರತದ ಕೃಷಿ ಕ್ಷೇತ್ರಕ್ಕೆ ಈ ಪ್ರದೇಶವು ನಿರ್ಣಾಯಕವಾಗಿದೆ. ತಂತ್ರಜ್ಞಾನ ಮತ್ತು ಹೂಡಿಕೆಯ ಸಹಯೋಗದಲ್ಲಿ ಪ್ರಮುಖ ಪಾಲುದಾರನಾಗಿ ಹೊರಹೊಮ್ಮುತ್ತಿದೆ ಎಂದು ಅಭಿಪ್ರಾಯಪಟ್ಟರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

18 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

23 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago