ಭಾರತ ಸರ್ಕಾರವು ವಿಶ್ವಸಂಸ್ಥೆ ಆಹಾರ ನೆರವು ಯೋಜನೆಯ ಪ್ರಕಾರ ಪಂಜಾಬ್ ವಿಧಾನಸಭೆ ಚುನಾವಣೆ ಬಳಿಕ ಪಾಕಿಸ್ತಾನದ ರಸ್ತೆಯ ಮೂಲಕ ಗೋಧಿಯನ್ನು ಲಾರಿಗಳ ಮೂಲಕ ಬೆಂಗಾವಲು ಪಡೆಯೊಂದಿಗೆ ಕಳುಹಿಸಿಕೊಡಲಿದೆ. ಮಾತ್ರವಲ್ಲದೆ ಒಪ್ಪಂದದ ಪ್ರಕಾರ ಮಾನವೀಯ ನೆರವಿನ ಅನ್ವಯ ಅಫ್ಫಾನಿಸ್ತಾನಕ್ಕೆ 50,000 ಮೆಟ್ರಿಕ್ ಟನ್ ಗೋಧಿಯನ್ನು ಸರಬರಾಜು ಮಾಡಲಿದೆ.
ಆಹಾರದ ಕೊರತೆ ಎದುರಿಸುತ್ತಿರುವ ಅಫ್ಘಾನಿಸ್ತಾನಕ್ಕೆ ಗೋಧಿ ಪೂರೈಕೆ ಮಾಡುವುದು ಮಾನವೀಯ ನೆರವಿನ ಹೆಗ್ಗುರುತು ಆಗಲಿದೆ ಎಂದು ರೋಮ್ನಲ್ಲಿರುವ ಡಬ್ಲ್ಯೂಎಫ್ಟಿ ಮುಖ್ಯ ಕಚೇರಿ ಟ್ವೀಟ್ ಮಾಡಿದೆ. ವಿಶ್ವಸಂಸ್ಥೆ ಆಹಾರ ನೆರವು ಯೋಜನೆಗೆ ಭಾರತ ಸಹಿ ಹಾಕಿರುವ ಒಪ್ಪಂದದ ಪ್ರಕಾರ ಫೆಬ್ರವರಿ 20 ರ ಬಳಿಕ ಗೋಧಿ ರವಾನೆ ಮಾಡುವ ಕಾರ್ಯ ಆರಂಭವಾಗಲಿದೆ. ಪಾಕಿಸ್ತಾನದ ಮೂಲಕ ಅಫ್ಘಾನ್ ಗಡಿ ದಾಟಿ, ಕಂದಹಾರ್ನಲ್ಲಿ ಡಬ್ಲ್ಯೂಎಫ್ಪಿ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗುತ್ತದೆ.
ಸುಮಾರು ಒಂದು ದಶಕದ ಬಳಿಕ NCDEX ಕಾಳುಮೆಣಸು ಫ್ಯೂಚರ್ಸ್ ವಹಿವಾಟನ್ನು ಜೂನ್ ಅಂತ್ಯದೊಳಗೆ…
ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…
ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…
ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…
ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…
ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…