ಭಾರತ ಸರ್ಕಾರವು ವಿಶ್ವಸಂಸ್ಥೆ ಆಹಾರ ನೆರವು ಯೋಜನೆಯ ಪ್ರಕಾರ ಪಂಜಾಬ್ ವಿಧಾನಸಭೆ ಚುನಾವಣೆ ಬಳಿಕ ಪಾಕಿಸ್ತಾನದ ರಸ್ತೆಯ ಮೂಲಕ ಗೋಧಿಯನ್ನು ಲಾರಿಗಳ ಮೂಲಕ ಬೆಂಗಾವಲು ಪಡೆಯೊಂದಿಗೆ ಕಳುಹಿಸಿಕೊಡಲಿದೆ. ಮಾತ್ರವಲ್ಲದೆ ಒಪ್ಪಂದದ ಪ್ರಕಾರ ಮಾನವೀಯ ನೆರವಿನ ಅನ್ವಯ ಅಫ್ಫಾನಿಸ್ತಾನಕ್ಕೆ 50,000 ಮೆಟ್ರಿಕ್ ಟನ್ ಗೋಧಿಯನ್ನು ಸರಬರಾಜು ಮಾಡಲಿದೆ.
ಆಹಾರದ ಕೊರತೆ ಎದುರಿಸುತ್ತಿರುವ ಅಫ್ಘಾನಿಸ್ತಾನಕ್ಕೆ ಗೋಧಿ ಪೂರೈಕೆ ಮಾಡುವುದು ಮಾನವೀಯ ನೆರವಿನ ಹೆಗ್ಗುರುತು ಆಗಲಿದೆ ಎಂದು ರೋಮ್ನಲ್ಲಿರುವ ಡಬ್ಲ್ಯೂಎಫ್ಟಿ ಮುಖ್ಯ ಕಚೇರಿ ಟ್ವೀಟ್ ಮಾಡಿದೆ. ವಿಶ್ವಸಂಸ್ಥೆ ಆಹಾರ ನೆರವು ಯೋಜನೆಗೆ ಭಾರತ ಸಹಿ ಹಾಕಿರುವ ಒಪ್ಪಂದದ ಪ್ರಕಾರ ಫೆಬ್ರವರಿ 20 ರ ಬಳಿಕ ಗೋಧಿ ರವಾನೆ ಮಾಡುವ ಕಾರ್ಯ ಆರಂಭವಾಗಲಿದೆ. ಪಾಕಿಸ್ತಾನದ ಮೂಲಕ ಅಫ್ಘಾನ್ ಗಡಿ ದಾಟಿ, ಕಂದಹಾರ್ನಲ್ಲಿ ಡಬ್ಲ್ಯೂಎಫ್ಪಿ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಾಗುತ್ತದೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…