ನಾವು ದೇವರಿಗೆ ದೀಪ ಹಚ್ಚುವುದರಿಂದ ಆಗುವ ಲಾಭಗಳೇನು..?

January 17, 2024
6:55 PM

ದೀಪ(Diya) ಅನ್ನುವುದು ಬರೇ ಬೆಳಕಿಗಾಗಿ ಇಡುವುದಲ್ಲ. ಬದಲಿಗೆ ನಮ್ಮ ಪ್ರಾರ್ಥನೆ(Prayer) ಮತ್ತು ಹರಕೆಗನ್ನು ದೇವರಿಗೆ(God) ತಲುಪಿಸುವ ವಾಹಕ. ದೀಪ ಅನ್ನುವುದು ಅಗ್ನಿಯಿಂದ(Fire) ಪ್ರಜ್ವಲಿತವಾಗಿದೆ. ನಾವು ಮಾಡುವ ಯಾಗದ ಹವಿಸನ್ನು ಹೇಗೆ ಅಗ್ನಿಯು ಆಯ ದೇವತೆಗಳಿಗೆ ಕೊಂಡೊಯ್ದು ಒಪ್ಪಿಸುತ್ತದೋ ಅದೇ ತೆರನಾಗಿ ದೀಪವೂ ಸಹ ನಮ್ಮ ಪ್ರಾರ್ಥನೆಯನ್ನು ಭಗವಂತನ(God) ಬಳಿಗೆ ಕೊಂಡೊಯ್ಯುವ ಸಾಧನವಾಗಿದೆ.

ನಾವು ಯಾವ ದೇವರನ್ನು ಪ್ರಾರ್ಥನೆ ಮಾಡುತ್ತಿರೋ ಆ ಪ್ರಾರ್ಥನೆ ನಮ್ಮ ಆ ದೇವರ ಬಳಿ ತಲುಪಲು ದೀಪ ಒಂದು ಮಾಧ್ಯಮ. ದೀಪವಿಲ್ಲದೆ ನಮ್ಮ ಪ್ರಾರ್ಥನೆ ತಲುಪಬೇಕಾದ ಜಾಗವನ್ನು ತಲುಪುವುದಿಲ್ಲ. ಹಿಂದೊಮ್ಮೆ ನಾವು ಪ್ರಾರ್ಥನೆ ಮಾಡುವಾಗ ದೀಪ ನಂದಿ ಹೋದರೆ ಅಪಶಕುನ ಅನ್ನುತ್ತಿದ್ದರು.ಯಾಕೆಂದರೆ ನಮ್ಮ ಪ್ರಾರ್ಥನೆ ಭಗವಂತನನ್ನು ತಲುಪಲಿಲ್ಲ ಅನ್ನುವುದೇಅದರತಾತ್ಪರ್ಯ.ಆತ್ಮ ಮತ್ತು ಪರಮಾತ್ಮನ ಮಧ್ಯೆ ಸಂಬಂಧ ಸೇತುವೆ ಒಂದುಪುಟ್ಟದೀಪವಾಗಬಲ್ಲುದು.

ನಾವು ನೀವು ನಿತ್ಯ ಮನೆಯಲ್ಲಿ ದೇವರಿಗೆ ಅಥವಾ ದೈವಗಳಿಗೆ ಕೈ ಮುಗಿಯುವಾಗ ಪುಟ್ಟ ದೀಪವೊಂದನ್ನು ಪ್ರಜ್ವಲಿಸುವ ಪರಿಪಾಟವನ್ನು ಇಟ್ಟುಕೊಳ್ಳಿ. ನಮ್ಮ ಪ್ರತಿ ಪ್ರಾರ್ಥನೆ ಮುಟ್ಟಬೇಕಾದ ಜಾಗವನ್ನು ತಟ್ಟುತ್ತದೆ. ಪ್ರಾರ್ಥನೆಗಳು ಫಲಿಸುತ್ತವೆ. ದೇವರಮತ್ತು ನಮ್ಮ ಸಂಬಂಧಗಳು ಹತ್ತಿರ ಮತ್ತು,ಗಟ್ಟಿಯಾಗುತ್ತದೆ.ಕಾರಣಿಕಗಳು, ಮಾತಾಡುತ್ತವೆ ಇನ್ನು ಮಕ್ಕಳ ಜನ್ಮ ದಿನಾಚರಣೆಯ ಸಮಯದಲ್ಲಿ {ಕ್ಯಾಂಡಲ್} ನಂದಿಸುವುದಕ್ಕಿಂತ ದೀಪ ಪ್ರಜ್ವಲಿಸುವುದು ತುಂಬಾ ಸೂಕ್ತವಾದ ಆಚರವಾಗಿದೆ. ಉರಿಯುತ್ತಿರುವ ಪುಟ್ಟ ದೀಪ ನಮ್ಮಬಂಧುಗಳಹಾರೈಕೆಯನ್ನು ಭಗವಂತನ ಬಳಿಗೆ ಕೊಂಡೊಯ್ಯುತ್ತದೆ.ಯಾರಾದರೂ ಕೆಟ್ಟ ಹಾರೈಕೆಯನ್ನು ಮಾಡಿದರೆ ಅವನ್ನು ಅಲ್ಲೇ ಸುಟ್ಟು ಒಳ್ಳೆಯ ಆರೈಕೆಗಳನ್ನು ಮಾತ್ರ ದೇವರ ಪಾದ ತಳದಲ್ಲಿಡುವ, ಗುಣ ಒಂದು ಪುಟ್ಟ ಹಣತೆಗಿದೆ.

Source: ಧಾರ್ಮಿಕ ಆಚರಣೆ ಪುಸ್ತಕ

A lamp (Diya) is not just kept for light. Rather, it is the conduit that conveys our prayers and wishes to God. A lamp is lit by fire. Just as the fire takes the desire of the Yagya to the respective deities, the lamp is also a means of taking our prayers to God.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror