Advertisement
ಪ್ರಮುಖ

ಅಡಿಕೆ ಬೆಳೆಯ ಮುಂದಿರುವ ಸವಾಲುಗಳು ಏನು ? | ಅಡಿಕೆ ಬೆಳೆಯ ಮೇಲೆ ಹವಾಮಾನದ ಪರಿಣಾಮಗಳು | ಸಿಪಿಸಿಆರ್‌ಐ ನಿರ್ದೇಶಕ ಡಾ.ಬಾಲಚಂದ್ರ ಹೆಬ್ಬಾರ್‌ ಹೇಳಿರುವ ವಾಸ್ತವ ಸಂಗತಿಗಳು |

Share

ಅಡಿಕೆ(Arecanut) ಬೆಳೆಯ ಮುಂದೆ ಹಲವು ಸವಾಲುಗಳು ಇವೆ. ಅಡಿಕೆಯನ್ನು ಇನ್ನೂ ಕೂಡಾ ಅಸಾಂಪ್ರದಾಯಿಕ ಪ್ರದೇಶಗಳಿಗೂ ವಿಸ್ತರಣೆ ಮಾಡುತ್ತಾ ಹೋದರೆ ಇನ್ನಷ್ಟು ರೋಗಗಳೂ ಕಾಡಲಿವೆ. ಹವಾಮಾನದ ವೈಪರೀತ್ಯವೂ ಅಡಿಕೆಯ ಮೇಲೆ ಗಂಭೀರವಾದ ಪರಿಣಾಮವನ್ನು ಉಂಟು ಮಾಡಲಿದೆ ಎಂದು ಸಿಪಿಸಿಆರ್‌ಐ ನಿರ್ದೇಶಕ ಡಾ.ಕೆ.ಬಾಲಚಂದ್ರ ಹೆಬ್ಬಾರ್‌ ಹೇಳಿದರು.

Photo Credit : Shyam CPCRI
Photo Credit : Shyam CPCRI

ವಿಟ್ಲದ ಸಿಪಿಸಿಆರ್‌ಐ ವಠಾರದಲ್ಲಿ ಸಿಪಿಸಿಆರ್‌ಐ ವಿಟ್ಲ ಹಾಗೂ ವಿಜಯವಾಣಿ ಪತ್ರಿಕೆ ಆಶ್ರಯದಲ್ಲಿ  ನಡೆದ ಅಡಿಕೆ ತಳಿಗಳು ಹಾಗೂ ಅಡಿಕೆಯಲ್ಲಿನ ರೋಗ ಹಾಗೂ ಕೀಟಗಳ ನಿರ್ವಹಣೆಯ ಬಗ್ಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ  ಮಾತನಾಡಿದರು. ಅಡಿಕೆಯಲ್ಲಿ ತಳಿಗಳು ಹಾಗೂ ವೈವಿಧ್ಯತೆ ಈಗ ಅಗತ್ಯ ಇದೆ. ಈಗಾಗಲೇ ಅನೇಕ ತಳಿ ಬಿಡುಗಡೆಯಾಗಿದೆ. ಆದರೆ ಈಗ ಹವಾಮಾನ ಬದಲಾವಣೆ ಆಗುತ್ತಿದೆ. ಒಮ್ಮೆ ನೆಟ್ಟ ಗಿಡ 40 ವರ್ಷ ಇರುತ್ತದೆ. ಆದರೆ ಹವಾಮಾನ ಬದಲಾವಣೆಯ ಕಾರಣದಿಂದ ಫಸಲು ಬಾರದೇ ಇದ್ದರೆ ರೈತನಿಗೆ ನಷ್ಟವಾಗುತ್ತದೆ. ಹೀಗಾಗಿ ಈ ಹವಾಮಾನ ಬದಲಾವಣೆಗಳ ನಡುವೆಯೂ ಇಳುವರಿ ನೀಡುವ ತಳಿಯ ಅಗತ್ಯ ಇದೆ.ಈ ಬಗ್ಗೆ ಇಂದು ಅಧ್ಯಯನ ಆಗಬೇಕಾದ ವಿಷಯವಾಗಿದೆ.

ಅಡಿಕೆ ಹೂವು ಬಿಡುವ ವೇಳೆ ಕನಿಷ್ಟ ವ್ಯತ್ಯಾಸ ಹವಾಮಾನದಲ್ಲಿ ಬದಲಾವಣೆ ಆದರೂ ಕಷ್ಟ ಆಗುತ್ತದೆ. ಈ ಬಗ್ಗೆಯೂ ಸಂಶೋಧನೆಯ ಅಗತ್ಯ ಇದೆ. ಇದನ್ನೆಲ್ಲಾ ವಿಜ್ಞಾನಿಗಳು ಮಾತ್ರವೇ ಮಾಡಬೇಕಿದೆ. ಆದರೆ, ಕೃಷಿಕರೂ ಹಾಗೂ ಇತರ ವ್ಯವಸ್ಥೆಗಳೂ ಜತೆಯಾಗಬೇಕು. ವಿಜ್ಞಾನಿಗಳು ನಿರಂತರ ಅಧ್ಯಯನ , ಅನ್ವೇಷಣೆ ಮಾಡಬೇಕು. ರೈತರಿಗೆ ತಲಪಿಸುವ ವ್ಯವಸ್ಥೆ ಬೇರೆ ಇರಬೇಕು.

ಈಗ ಅಡಿಕೆ ಧಾರಣೆ ಇದೆ ಎಂದು ಅಡಿಕೆ ವಿಸ್ತರಣೆಯಾಗುತ್ತಿದೆ. ಆದರೆ ಅಲ್ಲಿನ ವಾತಾವರಣ ಅಡಿಕೆಗೆ ಸೂಕ್ತ ಅಲ್ಲ. ಅಲ್ಲಿ ಅಡಿಕೆ ಫಸಲು ಬರಬಹುದೇ ಎನ್ನುವುದು  ಪ್ರಶ್ನೆ.ಆದರೆ ಬೆಳೆ ವಿಸ್ತರಣೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ರೈತರೇ ಈ ಬಗ್ಗೆ ಗಮನಿಸಬೇಕಿದೆ.

ಈಗ ಇಳುವರಿ ಹೆಚ್ಚು ಬರುವ ಬಗ್ಗೆ ಯೋಚನೆ ಬೇಕಿಲ್ಲ. ಗುಣಮಟ್ಟದ ಬಗ್ಗೆ ಗಮನಹರಿಸಬೇಕು. ಹವಾಮಾನ ಬದಲಾವಣೆಯ ನಡುವೆಯೂ ಅಡಿಕೆ ಇಳುವರಿ ಬರಬೇಕು, ಅದು ಗುಣಮಟ್ಟದಿಂದ ಇರಬೇಕು, ಹೆಚ್ಚು ಇಳುವರಿ ಬಂದೂ ಪ್ರಯೋಜನ ಇಲ್ಲ. ವಿಜ್ಞಾನಿಗಳು ಇಂತಹ ವಿಷಯಗಳ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ. ಈಗ ನಾವು ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ಬಗ್ಗೆ ಮಾತ್ರವೇ ಅಧ್ಯಯನ ಮಾಡುತ್ತಿದ್ದರೆ ಸಾಲದು. ಇಂದು ಅಡಿಕೆ ವಿಸ್ತರಣೆ, ಅಡಿಕೆ ಮಾರುಕಟ್ಟೆ, ಹವಾಮಾನ ಬದಲಾವಣೆಯ ಬಗ್ಗೆ ಅತ್ಯಂತ ಗಂಭೀರವಾಗಿ ಗಮನಹರಿಸಬೇಕಿದೆ. ಇಲ್ಲದೇ ಇದ್ದರೆ ಅಡಿಕೆ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಡಾ.ಬಾಲಚಂದ್ರ ಹೆಬ್ಬಾರ್‌ ಹೇಳಿದರು.

CPCRI Director Dr. Balachandra Hebbar said that, Arecanut expansion, Arecanutmarketing and climate change should be taken very seriously. If not, it will have a serious impact on the future of the Arecanut.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 days ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago