Advertisement
ಸುದ್ದಿಗಳು

ಹೈನುಗಾರಿಕೆ ಮಾಡುವ ರೈತರಿಗೆ ಇರುವ ಸರ್ಕಾರದ ಯೋಜನೆ ಯಾವೆಲ್ಲಾ? ಸಂಪೂರ್ಣ ಮಾಹಿತಿ

Share

ಹೈನುಗಾರಿಕೆ, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಮಾಡುವ ರೈತರಿಗೆ ತಮಗಾಗಿ ಸರ್ಕಾರದಿಂದ ಯಾವೆಲ್ಲ ಸಹಾಯಧನ ಆದಾರಿತ ಯೋಜನೆಗಳು ಜಾರಿಯಾಗಿದೆ ಎಂಬ ಮಾಹಿತಿಗಳು ಸರಿಯಾಗಿ ತಿಳಿದಿರುವುದಿಲ್ಲ.  ಆ ಯೋಜನೆಗೆ ಯಾವ ರೀತಿಯಾಗಿ ಅರ್ಜಿ ಸಲ್ಲಿಸುವುದು..? ಈ ಮಾಹಿತಿಯನ್ನು ರೈತರಿಗೆ ಇಲ್ಲಿ ನೀಡಲಾಗಿದೆ…

ರಾಜ್ಯದಲ್ಲಿ ಪ್ರಸ್ತುತ ಪಶುಪಾಲನಾ ಇಲಾಖೆಯಿಂದ ರೈತರಿಗೆ ಲಭ್ಯವಿರರುವ ಸಹಾಯಧನ ಆಧಾರಿತ ಯೋಜನೆಗಳು ಈ ರೀತಿಯಾಗಿವೆ:

  • ಹಸುಗಳ ಆಕಸ್ಮಿಕ ಸಾವಿಗೆ ಸಹಾಯಧನ: ಜಾನುವಾರು, ಎಮ್ಮೆ, ಹೋರಿಗಳು ಆಕಸ್ಮಿಕವಾಗಿ ಮರಣ ಹೊಂದಿದರೆ ರೈತರಿಗೆ ಉಂಟಾಗುವ ಆರ್ಥಿಕ ನಷ್ಟಕ್ಕೆ ಪರಿಹಾರವಾಗಿ 15,000 ಪರಿಹಾರ ಧನವನ್ನು ನೀಡಲಾಗುತ್ತದೆ.
  • ಕುರಿ ಮೇಕೆಗಳ ಸಾವಿಗೆ: ಒಂದುವೇಳೆ ಕುರಿ, ಮೇಕೆಗಳು ಆಕಸ್ಮಿಕವಾಗಿ ಮರಣ ಹೊಂದಿದರೆ ಅವುಗಳ ಮಾಲೀಕನಿಗೆ ಸಹಾಯಧನ ನೀಡಲಾಗುವುದು.
  • ಜಾನುವಾರು ವಿಮೆ: ರೈತರು ಸಾಕಾಣಿಕೆ ಮಾಡುವ ಜಾನುವಾರುಗಳಿಗೆ ವಿಮೆ/ ಇನ್ಸುರೆನ್ಸ್ ಅನ್ನು ಮಾಡಿಸಲು ಆರಂಭಿಕ ಹಂತದಲ್ಲಿ ವಿಮೆ ಪ್ರೀಮೀಯಂ ದರವನ್ನು ಪಾವತಿ ಮಾಡಲು ಇಲಾಖೆಯಿಂದ ಶೇ.85% ಸಬ್ಸಿಡಿ ಅನ್ನು ಪಾವತಿಸಲಾಗುತ್ತದೆ ರೈತರು ಕೇವಲ ಶೇ15% ಪ್ರೀಮೀಯಂ ಅನ್ನು ಪಾವತಿ ಮಾಡಿದರೆ ಸಾಕಾಗುತ್ತದೆ.
  • ಮೇವು ಕತ್ತರಿಸುವ ಯಂತ್ರ ವಿತರಣೆ: ಹೈನುಗಾರಿಕೆ ಮತ್ತು ಕುರಿ/ ಮೇಕೆ ಸಾಕಾಣಿಕೆಯನ್ನು ಮಾಡುತ್ತಿರುವ ರೈತರಿಗೆ ಹಸಿ ಮೇವನ್ನು ಕತ್ತರಿಸಿಕೊಳ್ಳಲು ಶೇ.50% ಸಹಾಯಧನದಲ್ಲಿ ಒಟ್ಟು ಪೂರ್ಣ ದರ 34,000 ಕ್ಕೆ ರೂ 17,000 ಸರಕಾರದಿಂದ ಸಬ್ಸಿಡಿ ನೀಡಲಾಗುತ್ತದೆ ಬಾಕು ಉಳಿದ ರೂ 17,000 ಪಾವತಿ ಮಾಡಿ ರೈತರು ಮೇವು ಕತ್ತರಿಸುವ ಯಂತ್ರವನ್ನು ಪಡೆದುಕೊಳ್ಳಬಹುದು.
  • ರಬ್ಬರ್ ನೆಲ ಹಾಸುಗಳ ವಿತರಣೆ: ಕೊಟ್ಟಿಗೆಯಲ್ಲಿ ಹಸು ಉತ್ತಮ ನೆಲ ಹಾಸು ವ್ಯವಸ್ಥೆಯನ್ನು ರೂಪಿಸಲು ಶೇ.50% ಸಹಾಯಧನ ಕೌ ಮ್ಯಾಟ್ ಅನ್ನು ರೈತರು ಪಶು ಪಾಲನಾ ಇಲಾಖೆಯಂದ ಪಡೆಯಲು ಅವಕಾಶವಿದ್ದು ಒಟ್ಟು ಪೂರ್ಣ ದರ ರೂ 2,849 ಇದಕ್ಕೆ ರೂ1424 ಸಬ್ಸಿಡಿಯನ್ನು ಇಲಾಖೆಯಿಂದ ಒದಗಿಸಲಾಗುತ್ತದೆ.
  • ಮೇವಿನ ಬೀಜ ಕಿರು ಪೊಟ್ಟಣಗಳ ವಿತರಣೆ: ಪಶು ಪಾಲನಾ ಇಲಾಖೆಯಿಂದ ರೈತರಿಗೆ ಹಸಿ ಮೇವನ್ನು ಉತ್ಪಾದನೆ ಮಾಡಿಕೊಳ್ಳಲು ಶೇ.50% ಸಬ್ಸಡಿಯಲ್ಲಿ ಮೇವಿನ ಬೀಜಗಳನ್ನು ವಿತರಣೆ ಮಾಡಲಾಗುತ್ತದೆ.
  • ಪರಿಶಿಷ್ಟ ಜಾತಿ ಮತ್ತು ಪಂಗಡ ಸದಸ್ಯರುಗಳಿಗೆ ಕುರಿ/ಮೇಕೆ ವಿತರಣೆ: ಪರಿಶಿಷ್ಟ ಜಾತಿ ಮತ್ತು ಪಂಗಡ ಸದಸ್ಯರುಗಳಿಗೆ ಕುರಿ/ ಮೇಖೆ ಸಾಕಾಣಿಕೆಯನ್ನು ಮಾಡಲು ಶೇ.90% ಅಂದರೆ ಗರಿಷ್ಠ 90,000 ಸಬ್ಸಿಡಿಯನ್ನು ಒದಗಿಸಲಾಗುತ್ತದೆ ರೈತರು ಶೇ.10% ರೂ 10,000 ಪಾವತಿ ಮಾಡಬೇಕು ಈ ಯೋಜನೆಯಡಿ 10 ಕುರಿ 1 ಟಗರು ಮರಿಯನ್ನು ವಿತರಣೆ ಮಾಡಲಾಗುತ್ತದೆ.
  • ನಾಟಿ ಕೋಳಿ ಮರಿಗಳ ವಿತರಣೆ: ನಾಟಿ ಕೋಳಿಯನ್ನು ಸಾಕಾಣಿಕೆ ಂಆಡ ಅನುಭವವನ್ನು ಹೊಂದಿರುವ ಅರ್ಹ ಮಹಿಳಾ ಅಭ್ಯರ್ಥಿಗಳಿಗೆ ಇಲಾಖೆಯಿಂದ 5 ವಾರಗಳ 20ಕೋಳಿ ಮರಿಗಳನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತದೆ.
  • ಹಾಲು ಉತ್ಪಾದಕರಿಗೆ ಉತ್ತೇಜನ: ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಸರಬರಾಜ ಮಾಡುವ ಸದಸ್ಯರಿಗೆ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ.5% ಪ್ರೋತ್ಸಾಹಧನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ಪಾನ್ ಕಾರ್ಡ್
• ರೇಶನ್ ಕಾರ್ಡ್
• ಜಾತಿ ಮತ್ತು ಆದಾಯ ಪ್ರಮಾಣ ಪತ್ರ
• ಬ್ಯಾಂಕ್ ಪಾಸ್ ಬುಕ್
• ಫೋಟೋ
ಎಲ್ಲಿ ಅರ್ಜಿ ಸಲ್ಲಿಸುವುದು:
ಈ ಮೇಲಿನ ಯೋಜನೆಗಳನ್ನು ಪಡೆಯಲು ರೈತರು ಆಯಾ ತಾಲ್ಲೂಕಿನ ಪಶು ಸಂಗೋಪನಾ ಆಸ್ಪತ್ರೆಗಳಿ ಭೇಟಿ ನೀಡಿ ಅಲ್ಲಿಯೇ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

3 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

8 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

8 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

19 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

24 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago