Advertisement
ಸುದ್ದಿಗಳು

ಹೈನುಗಾರಿಕೆ ಮಾಡುವ ರೈತರಿಗೆ ಇರುವ ಸರ್ಕಾರದ ಯೋಜನೆ ಯಾವೆಲ್ಲಾ? ಸಂಪೂರ್ಣ ಮಾಹಿತಿ

Share

ಹೈನುಗಾರಿಕೆ, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಮಾಡುವ ರೈತರಿಗೆ ತಮಗಾಗಿ ಸರ್ಕಾರದಿಂದ ಯಾವೆಲ್ಲ ಸಹಾಯಧನ ಆದಾರಿತ ಯೋಜನೆಗಳು ಜಾರಿಯಾಗಿದೆ ಎಂಬ ಮಾಹಿತಿಗಳು ಸರಿಯಾಗಿ ತಿಳಿದಿರುವುದಿಲ್ಲ.  ಆ ಯೋಜನೆಗೆ ಯಾವ ರೀತಿಯಾಗಿ ಅರ್ಜಿ ಸಲ್ಲಿಸುವುದು..? ಈ ಮಾಹಿತಿಯನ್ನು ರೈತರಿಗೆ ಇಲ್ಲಿ ನೀಡಲಾಗಿದೆ…

ರಾಜ್ಯದಲ್ಲಿ ಪ್ರಸ್ತುತ ಪಶುಪಾಲನಾ ಇಲಾಖೆಯಿಂದ ರೈತರಿಗೆ ಲಭ್ಯವಿರರುವ ಸಹಾಯಧನ ಆಧಾರಿತ ಯೋಜನೆಗಳು ಈ ರೀತಿಯಾಗಿವೆ:

Advertisement
  • ಹಸುಗಳ ಆಕಸ್ಮಿಕ ಸಾವಿಗೆ ಸಹಾಯಧನ: ಜಾನುವಾರು, ಎಮ್ಮೆ, ಹೋರಿಗಳು ಆಕಸ್ಮಿಕವಾಗಿ ಮರಣ ಹೊಂದಿದರೆ ರೈತರಿಗೆ ಉಂಟಾಗುವ ಆರ್ಥಿಕ ನಷ್ಟಕ್ಕೆ ಪರಿಹಾರವಾಗಿ 15,000 ಪರಿಹಾರ ಧನವನ್ನು ನೀಡಲಾಗುತ್ತದೆ.
  • ಕುರಿ ಮೇಕೆಗಳ ಸಾವಿಗೆ: ಒಂದುವೇಳೆ ಕುರಿ, ಮೇಕೆಗಳು ಆಕಸ್ಮಿಕವಾಗಿ ಮರಣ ಹೊಂದಿದರೆ ಅವುಗಳ ಮಾಲೀಕನಿಗೆ ಸಹಾಯಧನ ನೀಡಲಾಗುವುದು.
  • ಜಾನುವಾರು ವಿಮೆ: ರೈತರು ಸಾಕಾಣಿಕೆ ಮಾಡುವ ಜಾನುವಾರುಗಳಿಗೆ ವಿಮೆ/ ಇನ್ಸುರೆನ್ಸ್ ಅನ್ನು ಮಾಡಿಸಲು ಆರಂಭಿಕ ಹಂತದಲ್ಲಿ ವಿಮೆ ಪ್ರೀಮೀಯಂ ದರವನ್ನು ಪಾವತಿ ಮಾಡಲು ಇಲಾಖೆಯಿಂದ ಶೇ.85% ಸಬ್ಸಿಡಿ ಅನ್ನು ಪಾವತಿಸಲಾಗುತ್ತದೆ ರೈತರು ಕೇವಲ ಶೇ15% ಪ್ರೀಮೀಯಂ ಅನ್ನು ಪಾವತಿ ಮಾಡಿದರೆ ಸಾಕಾಗುತ್ತದೆ.
  • ಮೇವು ಕತ್ತರಿಸುವ ಯಂತ್ರ ವಿತರಣೆ: ಹೈನುಗಾರಿಕೆ ಮತ್ತು ಕುರಿ/ ಮೇಕೆ ಸಾಕಾಣಿಕೆಯನ್ನು ಮಾಡುತ್ತಿರುವ ರೈತರಿಗೆ ಹಸಿ ಮೇವನ್ನು ಕತ್ತರಿಸಿಕೊಳ್ಳಲು ಶೇ.50% ಸಹಾಯಧನದಲ್ಲಿ ಒಟ್ಟು ಪೂರ್ಣ ದರ 34,000 ಕ್ಕೆ ರೂ 17,000 ಸರಕಾರದಿಂದ ಸಬ್ಸಿಡಿ ನೀಡಲಾಗುತ್ತದೆ ಬಾಕು ಉಳಿದ ರೂ 17,000 ಪಾವತಿ ಮಾಡಿ ರೈತರು ಮೇವು ಕತ್ತರಿಸುವ ಯಂತ್ರವನ್ನು ಪಡೆದುಕೊಳ್ಳಬಹುದು.
  • ರಬ್ಬರ್ ನೆಲ ಹಾಸುಗಳ ವಿತರಣೆ: ಕೊಟ್ಟಿಗೆಯಲ್ಲಿ ಹಸು ಉತ್ತಮ ನೆಲ ಹಾಸು ವ್ಯವಸ್ಥೆಯನ್ನು ರೂಪಿಸಲು ಶೇ.50% ಸಹಾಯಧನ ಕೌ ಮ್ಯಾಟ್ ಅನ್ನು ರೈತರು ಪಶು ಪಾಲನಾ ಇಲಾಖೆಯಂದ ಪಡೆಯಲು ಅವಕಾಶವಿದ್ದು ಒಟ್ಟು ಪೂರ್ಣ ದರ ರೂ 2,849 ಇದಕ್ಕೆ ರೂ1424 ಸಬ್ಸಿಡಿಯನ್ನು ಇಲಾಖೆಯಿಂದ ಒದಗಿಸಲಾಗುತ್ತದೆ.
  • ಮೇವಿನ ಬೀಜ ಕಿರು ಪೊಟ್ಟಣಗಳ ವಿತರಣೆ: ಪಶು ಪಾಲನಾ ಇಲಾಖೆಯಿಂದ ರೈತರಿಗೆ ಹಸಿ ಮೇವನ್ನು ಉತ್ಪಾದನೆ ಮಾಡಿಕೊಳ್ಳಲು ಶೇ.50% ಸಬ್ಸಡಿಯಲ್ಲಿ ಮೇವಿನ ಬೀಜಗಳನ್ನು ವಿತರಣೆ ಮಾಡಲಾಗುತ್ತದೆ.
  • ಪರಿಶಿಷ್ಟ ಜಾತಿ ಮತ್ತು ಪಂಗಡ ಸದಸ್ಯರುಗಳಿಗೆ ಕುರಿ/ಮೇಕೆ ವಿತರಣೆ: ಪರಿಶಿಷ್ಟ ಜಾತಿ ಮತ್ತು ಪಂಗಡ ಸದಸ್ಯರುಗಳಿಗೆ ಕುರಿ/ ಮೇಖೆ ಸಾಕಾಣಿಕೆಯನ್ನು ಮಾಡಲು ಶೇ.90% ಅಂದರೆ ಗರಿಷ್ಠ 90,000 ಸಬ್ಸಿಡಿಯನ್ನು ಒದಗಿಸಲಾಗುತ್ತದೆ ರೈತರು ಶೇ.10% ರೂ 10,000 ಪಾವತಿ ಮಾಡಬೇಕು ಈ ಯೋಜನೆಯಡಿ 10 ಕುರಿ 1 ಟಗರು ಮರಿಯನ್ನು ವಿತರಣೆ ಮಾಡಲಾಗುತ್ತದೆ.
  • ನಾಟಿ ಕೋಳಿ ಮರಿಗಳ ವಿತರಣೆ: ನಾಟಿ ಕೋಳಿಯನ್ನು ಸಾಕಾಣಿಕೆ ಂಆಡ ಅನುಭವವನ್ನು ಹೊಂದಿರುವ ಅರ್ಹ ಮಹಿಳಾ ಅಭ್ಯರ್ಥಿಗಳಿಗೆ ಇಲಾಖೆಯಿಂದ 5 ವಾರಗಳ 20ಕೋಳಿ ಮರಿಗಳನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತದೆ.
  • ಹಾಲು ಉತ್ಪಾದಕರಿಗೆ ಉತ್ತೇಜನ: ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಸರಬರಾಜ ಮಾಡುವ ಸದಸ್ಯರಿಗೆ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ.5% ಪ್ರೋತ್ಸಾಹಧನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ಪಾನ್ ಕಾರ್ಡ್
• ರೇಶನ್ ಕಾರ್ಡ್
• ಜಾತಿ ಮತ್ತು ಆದಾಯ ಪ್ರಮಾಣ ಪತ್ರ
• ಬ್ಯಾಂಕ್ ಪಾಸ್ ಬುಕ್
• ಫೋಟೋ
ಎಲ್ಲಿ ಅರ್ಜಿ ಸಲ್ಲಿಸುವುದು:
ಈ ಮೇಲಿನ ಯೋಜನೆಗಳನ್ನು ಪಡೆಯಲು ರೈತರು ಆಯಾ ತಾಲ್ಲೂಕಿನ ಪಶು ಸಂಗೋಪನಾ ಆಸ್ಪತ್ರೆಗಳಿ ಭೇಟಿ ನೀಡಿ ಅಲ್ಲಿಯೇ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

4 hours ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

4 hours ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

6 hours ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

7 hours ago

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

12 hours ago

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

3 days ago