ಸಕ್ಕರೆ ತ್ಯಜಿಸಿದರೆ ಏನೆಲ್ಲಾ ಆರೋಗ್ಯ ಲಾಭಗಳು..? ದೇಹದಲ್ಲಿ ಈ 5 ಬದಲಾವಣೆಗಳನ್ನು ಕಾಣಬಹುದು : ತೂಕ ಕೂಡ ಬೇಗ ಕಡಿಮೆಯಾಗುತ್ತದೆ

January 27, 2024
12:21 PM

ಸಕ್ಕರೆ(Sugar) ನಮ್ಮ ಆಹಾರದ(Food) ಪ್ರಮುಖ ಅಂಶವಾಗಿದೆ. ಟೀ-ಕಾಫಿ(Tea-Coffee), ಸಿಹಿತಿಂಡಿಗಳು(Sweet) ಅಥವಾ ಯಾವುದೇ ಪ್ಯಾಕೆಟ್ ಆಹಾರ(Packed food), ಬೇಕರಿ(Bakery) ಉತ್ಪನ್ನಗಳಲ್ಲಿ ಸಕ್ಕರೆ ಇದ್ದೇ ಇರುತ್ತದೆ. ಆದರೆ, ಈ ಸಕ್ಕರೆ ಆರೋಗ್ಯಕ್ಕೆ(Health) ತುಂಬಾ ಅಪಾಯಕಾರಿ. ಇದು ಗೊತ್ತಿದ್ದರೂ ಸಕ್ಕರೆ ಸೇವನೆಯನ್ನು ನಿಯಂತ್ರಿಸಲು ಕಷ್ಟ. ಆದರೆ, ಒಮ್ಮೆ ಸಕ್ಕರೆ ಸೇವನೆಯನ್ನು ನಿಯಂತ್ರಿಸಿಕೊಂಡರೆ ಅನೇಕ ಆರೋಗ್ಯ ಸಮಸ್ಯೆಗಳನ್ನು ಖಂಡಿತಾ ದೂರವಿಡಬಹುದು.

Advertisement
Advertisement
Advertisement
Advertisement

ಕೇವಲ ಮಧುಮೇಹ, ಬೊಜ್ಜು ಸಮಸ್ಯೆ ಇರುವವರು ನಿಯಂತ್ರಣದಲ್ಲಿರಬೇಕು ಎಂದು ನಾವು ಅಂದುಕೊಳ್ಳುತ್ತೇವೆ. ಆದರೆ, ಮಧುಮೇಹ ಅಥವಾ ಇನ್ನಾವುದೇ ಸಮಸ್ಯೆ ಇಲ್ಲದವರೂ ಆರೋಗ್ಯವಾಗಿರಲು ಸಕ್ಕರೆ ಸೇವನೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಖ್ಯಾತ ಪೌಷ್ಟಿಕತಜ್ಞೆ ಶ್ವೇತಾ ಶಾ-ಪಾಂಚಾಲ್ ಇವರು ಸಕ್ಕರೆ ಕಡಿತ ಆರೋಗ್ಯಕ್ಕೆ ಯಾವ ರೀತಿ ಪ್ರಯೋಜನಕಾರಿ ಎಂದು ಹೇಳುತ್ತಾರೆ.

Advertisement

ಸಕ್ಕರೆ ತ್ಯಜಿಸುವುದರಿಂದ ದೇಹಕ್ಕೆ ಆಗುವ ಅದ್ಭುತ ಪ್ರಯೋಜನಗಳು..

1. ನಿಮ್ಮ ದೇಹದಲ್ಲಿ ಸಶಕ್ತತೆಯ ಅನುಭವವಾಗುತ್ತದೆ. ಆಹಾರದಲ್ಲಿ ಸಕ್ಕರೆ ಇಲ್ಲದಿರುವುದರಿಂದ ರಕ್ತದಲ್ಲಿ ಸಕ್ಕರೆಯ ಪ್ರಮಾಣದಲ್ಲಿ ಹೆಚ್ಚಿನ ಏರಿಳಿತಗಳು ಇರುವುದಿಲ್ಲ. ಇದರಿಂದ ಯಾವಾಗಲೂ ಸಬಲತೆಯ ಅನುಭವವಾಗುತ್ತದೆ.

Advertisement

2. ಬೆಳಗಿನ ಉಪಾಹಾರ, ಮಧ್ಯಾಹ್ನ ಅಥವಾ ರಾತ್ರಿಯ ಊಟದಲ್ಲಿ ನೀವು ಹೆಚ್ಚು ಸಕ್ಕರೆಯನ್ನು ಸೇವಿಸದ ಕಾರಣ ನಿಮಗೆ ಗೊತ್ತಿಲ್ಲದೆಯೇ ನೀವು ಅನಾವಶ್ಯಕವಾದ ತೂಕವನ್ನು ಕಳೆದುಕೊಳ್ಳುತ್ತೀರಿ. ಊಟ ಅಥವಾ ತಿಂಡಿಗಳ ನಡುವೆ ನಾವು ಸಿಹಿ ಆಹಾರಗಳನ್ನು ಸೇರಿಸುತ್ತೇವೆ. ಆದರೆ, ಈ ಮಧ್ಯಾಹ್ನದ ಸಿಹಿತಿಂಡಿಗಳನ್ನು ನಿಲ್ಲಿಸುವುದರಿಂದ ತಿಳಿಯದೆ ತೂಕ ನಷ್ಟವಾಗುತ್ತದೆ.

3. ನೀವು ಬೆಳಿಗ್ಗೆ ಎದ್ದಾಗ ಇದು ನಿಮಗೆ ಅರಿವಿಲ್ಲದೆ ತುಂಬಾ ತಾಜಾತನವನ್ನು ಅನುಭವಿಸಲು ಸಹಾಯ ಮಾಡುತ್ತದೆ. ಸಕ್ಕರೆಯಿಂದಾಗಿ ದೇಹದಲ್ಲಿ ನಿಯೋಪೆಪ್ಟೈಡ್ ಹೆಚ್ಚಾಗುತ್ತದೆ ಮತ್ತು ಅದು ನಮಗೆ ದಣಿವು ಅಥವಾ ಆಲಸ್ಯವನ್ನುಂಟು ಮಾಡುತ್ತದೆ. ಆದರೆ ಸಕ್ಕರೆ ನಿಲ್ಲಿಸಿದರೆ ಈ ಘಟಕಾಂಶವು ಹೆಚ್ಚಾಗುವುದಿಲ್ಲ ಮತ್ತು ತಾಜಾತನವನ್ನು ಅನುಭವಿಸಲು ಸಹಾಯ ಮಾಡುತ್ತದೆ.

Advertisement

4. ಈ ಅಂಶದ ಪ್ರಮಾಣವು ಕಡಿಮೆಯಾದಂತೆ, ಇದು ನಿದ್ರೆಯ ಮೇಲೂ ಉತ್ತಮ ಪರಿಣಾಮ ಬೀರುತ್ತದೆ. ಇದು ಬೇಗನೆ ಮತ್ತು ಉತ್ತಮ ಆಳವಾದ ನಿದ್ರೆಯನ್ನು ಪಡೆಯಲು ಸಹಾಯ ಮಾಡುತ್ತದೆ. ಮಗುವು ಆಳವಾಗಿ ನಿದ್ರಿಸುವಂತೆಯೇ, ಆಳವಾದ ನಿದ್ರೆಯು ಹೆಚ್ಚು ತೃಪ್ತಿಕರವಾಗಿರುತ್ತದೆ.

5. ಸಕ್ಕರೆಯನ್ನು ತಿನ್ನದಿರುವ ಇನ್ನೊಂದು ಪ್ರಮುಖ ಪರಿಣಾಮವೆಂದರೆ ಸೌಂದರ್ಯವನ್ನು ಹೆಚ್ಚಿಸುವುದು. ಸಕ್ಕರೆಯನ್ನು ತಪ್ಪಿಸುವುದು ಹೊಳೆಯುವ ಮತ್ತು ನಯವಾದ ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ. ಇದಲ್ಲದೆ, ಸಕ್ಕರೆಯನ್ನು ತ್ಯಜಿಸುವುದರಿಂದ ಮಧುಮೇಹ, ಬಿಪಿ, ಥೈರಾಯ್ಡ್ ಮುಂತಾದ ಕಾಯಿಲೆಗಳನ್ನು ತಡೆಯಬಹುದು ಎಂಬುದನ್ನು ಬೇರೆ ಹೇಳಬೇಕಾಗಿಲ್ಲ.

Advertisement

ಡಾ. ಸುನಿಲ್ ಇನಾಮದಾರ ಕನ್ನಡಕ್ಕೆ: ಡಾ. ಪ್ರ. ಅ. ಕುಲಕರ್ಣಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror