Opinion

ಸಕ್ಕರೆ ತ್ಯಜಿಸಿದರೆ ಏನೆಲ್ಲಾ ಆರೋಗ್ಯ ಲಾಭಗಳು..? ದೇಹದಲ್ಲಿ ಈ 5 ಬದಲಾವಣೆಗಳನ್ನು ಕಾಣಬಹುದು : ತೂಕ ಕೂಡ ಬೇಗ ಕಡಿಮೆಯಾಗುತ್ತದೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಕ್ಕರೆ(Sugar) ನಮ್ಮ ಆಹಾರದ(Food) ಪ್ರಮುಖ ಅಂಶವಾಗಿದೆ. ಟೀ-ಕಾಫಿ(Tea-Coffee), ಸಿಹಿತಿಂಡಿಗಳು(Sweet) ಅಥವಾ ಯಾವುದೇ ಪ್ಯಾಕೆಟ್ ಆಹಾರ(Packed food), ಬೇಕರಿ(Bakery) ಉತ್ಪನ್ನಗಳಲ್ಲಿ ಸಕ್ಕರೆ ಇದ್ದೇ ಇರುತ್ತದೆ. ಆದರೆ, ಈ ಸಕ್ಕರೆ ಆರೋಗ್ಯಕ್ಕೆ(Health) ತುಂಬಾ ಅಪಾಯಕಾರಿ. ಇದು ಗೊತ್ತಿದ್ದರೂ ಸಕ್ಕರೆ ಸೇವನೆಯನ್ನು ನಿಯಂತ್ರಿಸಲು ಕಷ್ಟ. ಆದರೆ, ಒಮ್ಮೆ ಸಕ್ಕರೆ ಸೇವನೆಯನ್ನು ನಿಯಂತ್ರಿಸಿಕೊಂಡರೆ ಅನೇಕ ಆರೋಗ್ಯ ಸಮಸ್ಯೆಗಳನ್ನು ಖಂಡಿತಾ ದೂರವಿಡಬಹುದು.

Advertisement
Advertisement

ಕೇವಲ ಮಧುಮೇಹ, ಬೊಜ್ಜು ಸಮಸ್ಯೆ ಇರುವವರು ನಿಯಂತ್ರಣದಲ್ಲಿರಬೇಕು ಎಂದು ನಾವು ಅಂದುಕೊಳ್ಳುತ್ತೇವೆ. ಆದರೆ, ಮಧುಮೇಹ ಅಥವಾ ಇನ್ನಾವುದೇ ಸಮಸ್ಯೆ ಇಲ್ಲದವರೂ ಆರೋಗ್ಯವಾಗಿರಲು ಸಕ್ಕರೆ ಸೇವನೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಖ್ಯಾತ ಪೌಷ್ಟಿಕತಜ್ಞೆ ಶ್ವೇತಾ ಶಾ-ಪಾಂಚಾಲ್ ಇವರು ಸಕ್ಕರೆ ಕಡಿತ ಆರೋಗ್ಯಕ್ಕೆ ಯಾವ ರೀತಿ ಪ್ರಯೋಜನಕಾರಿ ಎಂದು ಹೇಳುತ್ತಾರೆ.

ಸಕ್ಕರೆ ತ್ಯಜಿಸುವುದರಿಂದ ದೇಹಕ್ಕೆ ಆಗುವ ಅದ್ಭುತ ಪ್ರಯೋಜನಗಳು..

1. ನಿಮ್ಮ ದೇಹದಲ್ಲಿ ಸಶಕ್ತತೆಯ ಅನುಭವವಾಗುತ್ತದೆ. ಆಹಾರದಲ್ಲಿ ಸಕ್ಕರೆ ಇಲ್ಲದಿರುವುದರಿಂದ ರಕ್ತದಲ್ಲಿ ಸಕ್ಕರೆಯ ಪ್ರಮಾಣದಲ್ಲಿ ಹೆಚ್ಚಿನ ಏರಿಳಿತಗಳು ಇರುವುದಿಲ್ಲ. ಇದರಿಂದ ಯಾವಾಗಲೂ ಸಬಲತೆಯ ಅನುಭವವಾಗುತ್ತದೆ.

2. ಬೆಳಗಿನ ಉಪಾಹಾರ, ಮಧ್ಯಾಹ್ನ ಅಥವಾ ರಾತ್ರಿಯ ಊಟದಲ್ಲಿ ನೀವು ಹೆಚ್ಚು ಸಕ್ಕರೆಯನ್ನು ಸೇವಿಸದ ಕಾರಣ ನಿಮಗೆ ಗೊತ್ತಿಲ್ಲದೆಯೇ ನೀವು ಅನಾವಶ್ಯಕವಾದ ತೂಕವನ್ನು ಕಳೆದುಕೊಳ್ಳುತ್ತೀರಿ. ಊಟ ಅಥವಾ ತಿಂಡಿಗಳ ನಡುವೆ ನಾವು ಸಿಹಿ ಆಹಾರಗಳನ್ನು ಸೇರಿಸುತ್ತೇವೆ. ಆದರೆ, ಈ ಮಧ್ಯಾಹ್ನದ ಸಿಹಿತಿಂಡಿಗಳನ್ನು ನಿಲ್ಲಿಸುವುದರಿಂದ ತಿಳಿಯದೆ ತೂಕ ನಷ್ಟವಾಗುತ್ತದೆ.

Advertisement

3. ನೀವು ಬೆಳಿಗ್ಗೆ ಎದ್ದಾಗ ಇದು ನಿಮಗೆ ಅರಿವಿಲ್ಲದೆ ತುಂಬಾ ತಾಜಾತನವನ್ನು ಅನುಭವಿಸಲು ಸಹಾಯ ಮಾಡುತ್ತದೆ. ಸಕ್ಕರೆಯಿಂದಾಗಿ ದೇಹದಲ್ಲಿ ನಿಯೋಪೆಪ್ಟೈಡ್ ಹೆಚ್ಚಾಗುತ್ತದೆ ಮತ್ತು ಅದು ನಮಗೆ ದಣಿವು ಅಥವಾ ಆಲಸ್ಯವನ್ನುಂಟು ಮಾಡುತ್ತದೆ. ಆದರೆ ಸಕ್ಕರೆ ನಿಲ್ಲಿಸಿದರೆ ಈ ಘಟಕಾಂಶವು ಹೆಚ್ಚಾಗುವುದಿಲ್ಲ ಮತ್ತು ತಾಜಾತನವನ್ನು ಅನುಭವಿಸಲು ಸಹಾಯ ಮಾಡುತ್ತದೆ.

4. ಈ ಅಂಶದ ಪ್ರಮಾಣವು ಕಡಿಮೆಯಾದಂತೆ, ಇದು ನಿದ್ರೆಯ ಮೇಲೂ ಉತ್ತಮ ಪರಿಣಾಮ ಬೀರುತ್ತದೆ. ಇದು ಬೇಗನೆ ಮತ್ತು ಉತ್ತಮ ಆಳವಾದ ನಿದ್ರೆಯನ್ನು ಪಡೆಯಲು ಸಹಾಯ ಮಾಡುತ್ತದೆ. ಮಗುವು ಆಳವಾಗಿ ನಿದ್ರಿಸುವಂತೆಯೇ, ಆಳವಾದ ನಿದ್ರೆಯು ಹೆಚ್ಚು ತೃಪ್ತಿಕರವಾಗಿರುತ್ತದೆ.

5. ಸಕ್ಕರೆಯನ್ನು ತಿನ್ನದಿರುವ ಇನ್ನೊಂದು ಪ್ರಮುಖ ಪರಿಣಾಮವೆಂದರೆ ಸೌಂದರ್ಯವನ್ನು ಹೆಚ್ಚಿಸುವುದು. ಸಕ್ಕರೆಯನ್ನು ತಪ್ಪಿಸುವುದು ಹೊಳೆಯುವ ಮತ್ತು ನಯವಾದ ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ. ಇದಲ್ಲದೆ, ಸಕ್ಕರೆಯನ್ನು ತ್ಯಜಿಸುವುದರಿಂದ ಮಧುಮೇಹ, ಬಿಪಿ, ಥೈರಾಯ್ಡ್ ಮುಂತಾದ ಕಾಯಿಲೆಗಳನ್ನು ತಡೆಯಬಹುದು ಎಂಬುದನ್ನು ಬೇರೆ ಹೇಳಬೇಕಾಗಿಲ್ಲ.

ಡಾ. ಸುನಿಲ್ ಇನಾಮದಾರ ಕನ್ನಡಕ್ಕೆ: ಡಾ. ಪ್ರ. ಅ. ಕುಲಕರ್ಣಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

2 hours ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

2 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

2 hours ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

1 day ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

2 days ago