Advertisement
Opinion

ಸಕ್ಕರೆ ತ್ಯಜಿಸಿದರೆ ಏನೆಲ್ಲಾ ಆರೋಗ್ಯ ಲಾಭಗಳು..? ದೇಹದಲ್ಲಿ ಈ 5 ಬದಲಾವಣೆಗಳನ್ನು ಕಾಣಬಹುದು : ತೂಕ ಕೂಡ ಬೇಗ ಕಡಿಮೆಯಾಗುತ್ತದೆ

Share

ಸಕ್ಕರೆ(Sugar) ನಮ್ಮ ಆಹಾರದ(Food) ಪ್ರಮುಖ ಅಂಶವಾಗಿದೆ. ಟೀ-ಕಾಫಿ(Tea-Coffee), ಸಿಹಿತಿಂಡಿಗಳು(Sweet) ಅಥವಾ ಯಾವುದೇ ಪ್ಯಾಕೆಟ್ ಆಹಾರ(Packed food), ಬೇಕರಿ(Bakery) ಉತ್ಪನ್ನಗಳಲ್ಲಿ ಸಕ್ಕರೆ ಇದ್ದೇ ಇರುತ್ತದೆ. ಆದರೆ, ಈ ಸಕ್ಕರೆ ಆರೋಗ್ಯಕ್ಕೆ(Health) ತುಂಬಾ ಅಪಾಯಕಾರಿ. ಇದು ಗೊತ್ತಿದ್ದರೂ ಸಕ್ಕರೆ ಸೇವನೆಯನ್ನು ನಿಯಂತ್ರಿಸಲು ಕಷ್ಟ. ಆದರೆ, ಒಮ್ಮೆ ಸಕ್ಕರೆ ಸೇವನೆಯನ್ನು ನಿಯಂತ್ರಿಸಿಕೊಂಡರೆ ಅನೇಕ ಆರೋಗ್ಯ ಸಮಸ್ಯೆಗಳನ್ನು ಖಂಡಿತಾ ದೂರವಿಡಬಹುದು.

ಕೇವಲ ಮಧುಮೇಹ, ಬೊಜ್ಜು ಸಮಸ್ಯೆ ಇರುವವರು ನಿಯಂತ್ರಣದಲ್ಲಿರಬೇಕು ಎಂದು ನಾವು ಅಂದುಕೊಳ್ಳುತ್ತೇವೆ. ಆದರೆ, ಮಧುಮೇಹ ಅಥವಾ ಇನ್ನಾವುದೇ ಸಮಸ್ಯೆ ಇಲ್ಲದವರೂ ಆರೋಗ್ಯವಾಗಿರಲು ಸಕ್ಕರೆ ಸೇವನೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಖ್ಯಾತ ಪೌಷ್ಟಿಕತಜ್ಞೆ ಶ್ವೇತಾ ಶಾ-ಪಾಂಚಾಲ್ ಇವರು ಸಕ್ಕರೆ ಕಡಿತ ಆರೋಗ್ಯಕ್ಕೆ ಯಾವ ರೀತಿ ಪ್ರಯೋಜನಕಾರಿ ಎಂದು ಹೇಳುತ್ತಾರೆ.

ಸಕ್ಕರೆ ತ್ಯಜಿಸುವುದರಿಂದ ದೇಹಕ್ಕೆ ಆಗುವ ಅದ್ಭುತ ಪ್ರಯೋಜನಗಳು..

1. ನಿಮ್ಮ ದೇಹದಲ್ಲಿ ಸಶಕ್ತತೆಯ ಅನುಭವವಾಗುತ್ತದೆ. ಆಹಾರದಲ್ಲಿ ಸಕ್ಕರೆ ಇಲ್ಲದಿರುವುದರಿಂದ ರಕ್ತದಲ್ಲಿ ಸಕ್ಕರೆಯ ಪ್ರಮಾಣದಲ್ಲಿ ಹೆಚ್ಚಿನ ಏರಿಳಿತಗಳು ಇರುವುದಿಲ್ಲ. ಇದರಿಂದ ಯಾವಾಗಲೂ ಸಬಲತೆಯ ಅನುಭವವಾಗುತ್ತದೆ.

2. ಬೆಳಗಿನ ಉಪಾಹಾರ, ಮಧ್ಯಾಹ್ನ ಅಥವಾ ರಾತ್ರಿಯ ಊಟದಲ್ಲಿ ನೀವು ಹೆಚ್ಚು ಸಕ್ಕರೆಯನ್ನು ಸೇವಿಸದ ಕಾರಣ ನಿಮಗೆ ಗೊತ್ತಿಲ್ಲದೆಯೇ ನೀವು ಅನಾವಶ್ಯಕವಾದ ತೂಕವನ್ನು ಕಳೆದುಕೊಳ್ಳುತ್ತೀರಿ. ಊಟ ಅಥವಾ ತಿಂಡಿಗಳ ನಡುವೆ ನಾವು ಸಿಹಿ ಆಹಾರಗಳನ್ನು ಸೇರಿಸುತ್ತೇವೆ. ಆದರೆ, ಈ ಮಧ್ಯಾಹ್ನದ ಸಿಹಿತಿಂಡಿಗಳನ್ನು ನಿಲ್ಲಿಸುವುದರಿಂದ ತಿಳಿಯದೆ ತೂಕ ನಷ್ಟವಾಗುತ್ತದೆ.

3. ನೀವು ಬೆಳಿಗ್ಗೆ ಎದ್ದಾಗ ಇದು ನಿಮಗೆ ಅರಿವಿಲ್ಲದೆ ತುಂಬಾ ತಾಜಾತನವನ್ನು ಅನುಭವಿಸಲು ಸಹಾಯ ಮಾಡುತ್ತದೆ. ಸಕ್ಕರೆಯಿಂದಾಗಿ ದೇಹದಲ್ಲಿ ನಿಯೋಪೆಪ್ಟೈಡ್ ಹೆಚ್ಚಾಗುತ್ತದೆ ಮತ್ತು ಅದು ನಮಗೆ ದಣಿವು ಅಥವಾ ಆಲಸ್ಯವನ್ನುಂಟು ಮಾಡುತ್ತದೆ. ಆದರೆ ಸಕ್ಕರೆ ನಿಲ್ಲಿಸಿದರೆ ಈ ಘಟಕಾಂಶವು ಹೆಚ್ಚಾಗುವುದಿಲ್ಲ ಮತ್ತು ತಾಜಾತನವನ್ನು ಅನುಭವಿಸಲು ಸಹಾಯ ಮಾಡುತ್ತದೆ.

4. ಈ ಅಂಶದ ಪ್ರಮಾಣವು ಕಡಿಮೆಯಾದಂತೆ, ಇದು ನಿದ್ರೆಯ ಮೇಲೂ ಉತ್ತಮ ಪರಿಣಾಮ ಬೀರುತ್ತದೆ. ಇದು ಬೇಗನೆ ಮತ್ತು ಉತ್ತಮ ಆಳವಾದ ನಿದ್ರೆಯನ್ನು ಪಡೆಯಲು ಸಹಾಯ ಮಾಡುತ್ತದೆ. ಮಗುವು ಆಳವಾಗಿ ನಿದ್ರಿಸುವಂತೆಯೇ, ಆಳವಾದ ನಿದ್ರೆಯು ಹೆಚ್ಚು ತೃಪ್ತಿಕರವಾಗಿರುತ್ತದೆ.

5. ಸಕ್ಕರೆಯನ್ನು ತಿನ್ನದಿರುವ ಇನ್ನೊಂದು ಪ್ರಮುಖ ಪರಿಣಾಮವೆಂದರೆ ಸೌಂದರ್ಯವನ್ನು ಹೆಚ್ಚಿಸುವುದು. ಸಕ್ಕರೆಯನ್ನು ತಪ್ಪಿಸುವುದು ಹೊಳೆಯುವ ಮತ್ತು ನಯವಾದ ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ. ಇದಲ್ಲದೆ, ಸಕ್ಕರೆಯನ್ನು ತ್ಯಜಿಸುವುದರಿಂದ ಮಧುಮೇಹ, ಬಿಪಿ, ಥೈರಾಯ್ಡ್ ಮುಂತಾದ ಕಾಯಿಲೆಗಳನ್ನು ತಡೆಯಬಹುದು ಎಂಬುದನ್ನು ಬೇರೆ ಹೇಳಬೇಕಾಗಿಲ್ಲ.

ಡಾ. ಸುನಿಲ್ ಇನಾಮದಾರ ಕನ್ನಡಕ್ಕೆ: ಡಾ. ಪ್ರ. ಅ. ಕುಲಕರ್ಣಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

1 day ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago