ಸುದ್ದಿಗಳು

ದೇವಸ್ಥಾನದ ಹುಂಡಿಗೆ ಹಾಕಿದ ಹಣ ಏನಾಗುತ್ತದೆ… ? | ಮಹತ್ವದ ಮಾಹಿತಿ ನೀಡಿದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸೋಶಿಯಲ್‌ ಮೀಡಿಯಾ ಪೇಜ್‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಸಮಯಗಳಿಂದ ಚರ್ಚೆಯಾಗುತ್ತಿದ್ದ ವಿಷಯ, ದೇವಸ್ಥಾನದ ಹುಂಡಿಗೆ ಹಾಕಿದ ಹಣ ಏನಾಗುತ್ತದೆ..?. ಈ ಬಗ್ಗೆ  ಭಕ್ತರು ಮತ್ತು ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ವ್ಯಕ್ತವಾಗುತ್ತಿತ್ತು. ಇದಕ್ಕೆ  ಸ್ಪಷ್ಟನೆಯನ್ನು ಕುಕ್ಕೆ ಸುಬ್ರಹ್ಮಣ್ಯದ ಸೋಶಿಯಲ್‌ ಮೀಡಿಯಾ ಪೇಜಲ್ಲಿ ಸ್ಪಷ್ಟನೆ ನೀಡಲಾಗಿದೆ.ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಭಕ್ತರಲ್ಲಿ ದೇವಾಲಯದ ಹುಂಡಿಗೆ ಹಣ ಹಾಕ್ಬೇಡಿ ಅದು ಸಮಾಜಕ್ಕೆ ಉಪಯೋಗವಾಗೋದಿಲ್ಲ ಅನ್ನುವವರಿಗೆ ಸರಿಯಾದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

Advertisement
Advertisement

ದೇವಾಲಯಕ್ಕೆ ಸೇರಿದ ಹಣದಲ್ಲಿ (ಹುಂಡಿ, ಪೂಜೆ,ಬಾಡಿಗೆ ಅಥವಾ ಇನ್ನಿತರ ಎಲ್ಲಾ) ದೇವಾಲಯದ ಎಲ್ಲಾ ಖರ್ಚು ಕಳೆದು ಉಳಿದ ಹಣದ 10% ಮಾತ್ರ ದೇವಾಲಯ ಸರ್ಕಾರಕ್ಕೆ (ಮುಜರಾಯಿ ಇಲಾಖೆಗೆ) ಕೊಡಬೇಕಾಗಿರುತ್ತದೆ. ಉಳಿದ ಹಣದಲ್ಲಿ ಅನ್ನದಾನ ರೂಪದಲ್ಲಿ ಬಂದ ದೇಣಿಗೆಯನ್ನು ಅನ್ನದಾನಕ್ಕೆ ಉಪಯೋಗಿಸಿಕೊಳ್ಳತಕ್ಕದ್ದು. ಅದನ್ನು ಫಿಕ್ಸೆಡ್ ಡೆಪಾಸಿಟ್ ಮಾಡಬೇಕಾಗಿರುತ್ತದೆ. ಉಳಿದದ್ದನ್ನು ಅಭಿವೃದ್ಧಿಗೆ ಉಪಯೋಗಿಸಬಹುದು. ಈ ಹಣವನ್ನು ಅಭಿವೃದ್ಧಿಗೆ ಉಪಯೋಗಿಸಲು ಸರ್ಕಾರದ ಅನೊಮೋದನೆ ಪಡೆಯಬೇಕಾಗುತ್ತದೆ.

ದೇವಾಲಯದ ಆಡಳಿತ ಮಂಡಳಿಯ ನಿರ್ಣಯದ ನಂತರ 5 ಲಕ್ಷದವರೆಗೆ ದೇವಾಲಯದ ಕಾರ್ಯನಿರ್ವಹಣಾಧಿಕಾರಿಗೆ, 25 ಲಕ್ಷದವರೆಗೆ ಜಿಲ್ಲಾಧಿಕಾರಿಗಳಿಗೆ, 2 ಕೋಟಿವರೆಗೆ ಮುಜರಾಯಿ ಇಲಾಖೆ ಕಮಿಶನರ್ ಮತ್ತು 10 ಕೋಟಿವರೆಗೆ ಮುಜರಾಯಿ ಮಂತ್ರಿಗಳಿಗೆ ಅವಕಾಶವಿದೆ. ಅದಕ್ಕೂ ಹೆಚ್ಚಿನ ಅನುಮೋದನೆಗೆ ಸರ್ಕಾರದ ಕ್ಯಾಬಿನೇಟ್ ಗೆ ಕಳುಹಿಸಿ ಅನುಮೋದನೆ ಪಡೆದುಕೊಳ್ಳಬೇಕಾಗುತ್ತದೆ. ಇದರೊಂದಿಗೆ ದೇವಾಲಯದ ಹಣವನ್ನು ಖರ್ಚು ಮಾಡುವಾಗ ಟೆಂಡರ್ ಮೂಲಕವೇ ಮಾಡತಕ್ಕದ್ದು ಅಥವಾ ನಿರ್ಮಿತಿ ಕೇಂದ್ರ ಅಥವಾ ಇನ್ನಿತರ ಸರಕಾರದ ಸಂಸ್ಥೆಗಳಾದ 4ಜಿ ವಿನಾಯತಿ ಇರುವ ಸಂಸ್ಥೆಗಳ ಮೂಲಕ ಅಭಿವೃದ್ಧಿ ಕಾರ್ಯ ಮಾಡಬೇಕಾಗುತ್ತದೆ. ಅದಲ್ಲದೆ ಹಣವನ್ನು ಏಕ ಏಕಿ ಖರ್ಚು ಮಾಡಲು ಸಾಧ್ಯವಿಲ್ಲ. ಇನ್ನು ಮುಜರಾಯಿ ಇಲಾಖೆಗೆ ಸೇರಿದ 10% ಹಣವನ್ನು ಇನ್ನಿತರ ಸಣ್ಣ ಪುಟ್ಟ ದೇವಾಲಯದ ಅಭಿವೃದ್ಧಿ, ತಸ್ತಿಕ್ ಅಥವಾ ಇನ್ನಿತರ ಕಾರ್ಯಗಳಿಗೆ ಖರ್ಚು ಮಾಡುತ್ತಾರೆ.

ಪ್ರಸ್ತುತ ಸುಬ್ರಹ್ಮಣ್ಯದಲ್ಲಿ ದೇವಾಲಯದ ವತಿಯಿಂದ ಇಡೀ ಸುಬ್ರಹ್ಮಣ್ಯ ಗ್ರಾಮಕ್ಕೆ ಕುಡಿಯುವ ನೀರಿನ ಯೋಜನೆಯನ್ನು ಉಚಿತವಾಗಿ ನೀಡುತ್ತದೆ, UGD ವ್ಯವಸ್ಥೆಯನ್ನು ದೇವಾಲಯದ ವತಿಯಿಂದ ನಡೆಸಲಾಗಿದೆ. ಮುಖ್ಯ ರಸ್ತೆ ಹಾಗು ಅನೇಕ ಒಳ ರಸ್ತೆಗಳನ್ನು ಕಾಂಕ್ರಿಟೀಕರಣ ಮಾಡಲಾಗಿದೆ. ಬೀದಿ ದೀಪಗಳನ್ನು ಅಳವಡಿಸಲಾಗಿದೆ ಮತ್ತು ಇದರ ತಿಂಗಳ ವೆಚ್ಚವನ್ನು ಬರಿಸಲಾಗುತ್ತಿದೆ. ಸ್ಥಳೀಯ ಕಡಬ ಮತ್ತು ಸುಳ್ಯದಂತಹ ಸರ್ಕಾರಿ ಆಸ್ಪತ್ರೆಗಳಿಗೆ ಆಂಬುಲೆನ್ಸ್, ಡಯಾಲಿಸಿಸ್ ಹಾಗು ಇನ್ನಿತರ ಉಪಕರಣಗಳನ್ನು ನೀಡಲಾಗಿದೆ. ಸ್ಥಳೀಯ ದೇವಾಲಯಗಳಿಗೆ ಮತ್ತು ಸ್ಥಳೀಯ ಸಂಘ ಸಂಸ್ಥೆಗಳಿಗೆ ಅನ್ನದಾನದ ವ್ಯವಸ್ಥೆಯನ್ನು ಪ್ರತಿ ವರ್ಷ ಮಾಡಿಕೊಡಲಾಗುತ್ತದೆ.

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿರಂತರ ಮಳೆಯಿಂದಾಗಿ ತರಕಾರಿಗಳ ಬೆಲೆ ನಗರದಲ್ಲಿ ಏನಾಗಿದೆ..?

ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…

1 hour ago

ಹವಾಮಾನ ವರದಿ | 27-06-2025 | ಜೂ.29-30 ಮಳೆಯ ಪ್ರಮಾಣ ಕಡಿಮೆ ಇರಬಹುದು – ಕೃಷಿಕರು ಗಮನಿಸಿ |

ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…

3 hours ago

ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490

7 hours ago

ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…

10 hours ago

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…

10 hours ago

ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ

ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…

11 hours ago