ಕಳೆದ ಸಮಯಗಳಿಂದ ಚರ್ಚೆಯಾಗುತ್ತಿದ್ದ ವಿಷಯ, ದೇವಸ್ಥಾನದ ಹುಂಡಿಗೆ ಹಾಕಿದ ಹಣ ಏನಾಗುತ್ತದೆ..?. ಈ ಬಗ್ಗೆ ಭಕ್ತರು ಮತ್ತು ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ವ್ಯಕ್ತವಾಗುತ್ತಿತ್ತು. ಇದಕ್ಕೆ ಸ್ಪಷ್ಟನೆಯನ್ನು ಕುಕ್ಕೆ ಸುಬ್ರಹ್ಮಣ್ಯದ ಸೋಶಿಯಲ್ ಮೀಡಿಯಾ ಪೇಜಲ್ಲಿ ಸ್ಪಷ್ಟನೆ ನೀಡಲಾಗಿದೆ.ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಭಕ್ತರಲ್ಲಿ ದೇವಾಲಯದ ಹುಂಡಿಗೆ ಹಣ ಹಾಕ್ಬೇಡಿ ಅದು ಸಮಾಜಕ್ಕೆ ಉಪಯೋಗವಾಗೋದಿಲ್ಲ ಅನ್ನುವವರಿಗೆ ಸರಿಯಾದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ದೇವಾಲಯಕ್ಕೆ ಸೇರಿದ ಹಣದಲ್ಲಿ (ಹುಂಡಿ, ಪೂಜೆ,ಬಾಡಿಗೆ ಅಥವಾ ಇನ್ನಿತರ ಎಲ್ಲಾ) ದೇವಾಲಯದ ಎಲ್ಲಾ ಖರ್ಚು ಕಳೆದು ಉಳಿದ ಹಣದ 10% ಮಾತ್ರ ದೇವಾಲಯ ಸರ್ಕಾರಕ್ಕೆ (ಮುಜರಾಯಿ ಇಲಾಖೆಗೆ) ಕೊಡಬೇಕಾಗಿರುತ್ತದೆ. ಉಳಿದ ಹಣದಲ್ಲಿ ಅನ್ನದಾನ ರೂಪದಲ್ಲಿ ಬಂದ ದೇಣಿಗೆಯನ್ನು ಅನ್ನದಾನಕ್ಕೆ ಉಪಯೋಗಿಸಿಕೊಳ್ಳತಕ್ಕದ್ದು. ಅದನ್ನು ಫಿಕ್ಸೆಡ್ ಡೆಪಾಸಿಟ್ ಮಾಡಬೇಕಾಗಿರುತ್ತದೆ. ಉಳಿದದ್ದನ್ನು ಅಭಿವೃದ್ಧಿಗೆ ಉಪಯೋಗಿಸಬಹುದು. ಈ ಹಣವನ್ನು ಅಭಿವೃದ್ಧಿಗೆ ಉಪಯೋಗಿಸಲು ಸರ್ಕಾರದ ಅನೊಮೋದನೆ ಪಡೆಯಬೇಕಾಗುತ್ತದೆ.
ದೇವಾಲಯದ ಆಡಳಿತ ಮಂಡಳಿಯ ನಿರ್ಣಯದ ನಂತರ 5 ಲಕ್ಷದವರೆಗೆ ದೇವಾಲಯದ ಕಾರ್ಯನಿರ್ವಹಣಾಧಿಕಾರಿಗೆ, 25 ಲಕ್ಷದವರೆಗೆ ಜಿಲ್ಲಾಧಿಕಾರಿಗಳಿಗೆ, 2 ಕೋಟಿವರೆಗೆ ಮುಜರಾಯಿ ಇಲಾಖೆ ಕಮಿಶನರ್ ಮತ್ತು 10 ಕೋಟಿವರೆಗೆ ಮುಜರಾಯಿ ಮಂತ್ರಿಗಳಿಗೆ ಅವಕಾಶವಿದೆ. ಅದಕ್ಕೂ ಹೆಚ್ಚಿನ ಅನುಮೋದನೆಗೆ ಸರ್ಕಾರದ ಕ್ಯಾಬಿನೇಟ್ ಗೆ ಕಳುಹಿಸಿ ಅನುಮೋದನೆ ಪಡೆದುಕೊಳ್ಳಬೇಕಾಗುತ್ತದೆ. ಇದರೊಂದಿಗೆ ದೇವಾಲಯದ ಹಣವನ್ನು ಖರ್ಚು ಮಾಡುವಾಗ ಟೆಂಡರ್ ಮೂಲಕವೇ ಮಾಡತಕ್ಕದ್ದು ಅಥವಾ ನಿರ್ಮಿತಿ ಕೇಂದ್ರ ಅಥವಾ ಇನ್ನಿತರ ಸರಕಾರದ ಸಂಸ್ಥೆಗಳಾದ 4ಜಿ ವಿನಾಯತಿ ಇರುವ ಸಂಸ್ಥೆಗಳ ಮೂಲಕ ಅಭಿವೃದ್ಧಿ ಕಾರ್ಯ ಮಾಡಬೇಕಾಗುತ್ತದೆ. ಅದಲ್ಲದೆ ಹಣವನ್ನು ಏಕ ಏಕಿ ಖರ್ಚು ಮಾಡಲು ಸಾಧ್ಯವಿಲ್ಲ. ಇನ್ನು ಮುಜರಾಯಿ ಇಲಾಖೆಗೆ ಸೇರಿದ 10% ಹಣವನ್ನು ಇನ್ನಿತರ ಸಣ್ಣ ಪುಟ್ಟ ದೇವಾಲಯದ ಅಭಿವೃದ್ಧಿ, ತಸ್ತಿಕ್ ಅಥವಾ ಇನ್ನಿತರ ಕಾರ್ಯಗಳಿಗೆ ಖರ್ಚು ಮಾಡುತ್ತಾರೆ.
ಪ್ರಸ್ತುತ ಸುಬ್ರಹ್ಮಣ್ಯದಲ್ಲಿ ದೇವಾಲಯದ ವತಿಯಿಂದ ಇಡೀ ಸುಬ್ರಹ್ಮಣ್ಯ ಗ್ರಾಮಕ್ಕೆ ಕುಡಿಯುವ ನೀರಿನ ಯೋಜನೆಯನ್ನು ಉಚಿತವಾಗಿ ನೀಡುತ್ತದೆ, UGD ವ್ಯವಸ್ಥೆಯನ್ನು ದೇವಾಲಯದ ವತಿಯಿಂದ ನಡೆಸಲಾಗಿದೆ. ಮುಖ್ಯ ರಸ್ತೆ ಹಾಗು ಅನೇಕ ಒಳ ರಸ್ತೆಗಳನ್ನು ಕಾಂಕ್ರಿಟೀಕರಣ ಮಾಡಲಾಗಿದೆ. ಬೀದಿ ದೀಪಗಳನ್ನು ಅಳವಡಿಸಲಾಗಿದೆ ಮತ್ತು ಇದರ ತಿಂಗಳ ವೆಚ್ಚವನ್ನು ಬರಿಸಲಾಗುತ್ತಿದೆ. ಸ್ಥಳೀಯ ಕಡಬ ಮತ್ತು ಸುಳ್ಯದಂತಹ ಸರ್ಕಾರಿ ಆಸ್ಪತ್ರೆಗಳಿಗೆ ಆಂಬುಲೆನ್ಸ್, ಡಯಾಲಿಸಿಸ್ ಹಾಗು ಇನ್ನಿತರ ಉಪಕರಣಗಳನ್ನು ನೀಡಲಾಗಿದೆ. ಸ್ಥಳೀಯ ದೇವಾಲಯಗಳಿಗೆ ಮತ್ತು ಸ್ಥಳೀಯ ಸಂಘ ಸಂಸ್ಥೆಗಳಿಗೆ ಅನ್ನದಾನದ ವ್ಯವಸ್ಥೆಯನ್ನು ಪ್ರತಿ ವರ್ಷ ಮಾಡಿಕೊಡಲಾಗುತ್ತದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…