Advertisement
ಸುದ್ದಿಗಳು

ದೇವಸ್ಥಾನದ ಹುಂಡಿಗೆ ಹಾಕಿದ ಹಣ ಏನಾಗುತ್ತದೆ… ? | ಮಹತ್ವದ ಮಾಹಿತಿ ನೀಡಿದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸೋಶಿಯಲ್‌ ಮೀಡಿಯಾ ಪೇಜ್‌ |

Share

ಕಳೆದ ಸಮಯಗಳಿಂದ ಚರ್ಚೆಯಾಗುತ್ತಿದ್ದ ವಿಷಯ, ದೇವಸ್ಥಾನದ ಹುಂಡಿಗೆ ಹಾಕಿದ ಹಣ ಏನಾಗುತ್ತದೆ..?. ಈ ಬಗ್ಗೆ  ಭಕ್ತರು ಮತ್ತು ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ವ್ಯಕ್ತವಾಗುತ್ತಿತ್ತು. ಇದಕ್ಕೆ  ಸ್ಪಷ್ಟನೆಯನ್ನು ಕುಕ್ಕೆ ಸುಬ್ರಹ್ಮಣ್ಯದ ಸೋಶಿಯಲ್‌ ಮೀಡಿಯಾ ಪೇಜಲ್ಲಿ ಸ್ಪಷ್ಟನೆ ನೀಡಲಾಗಿದೆ.ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಭಕ್ತರಲ್ಲಿ ದೇವಾಲಯದ ಹುಂಡಿಗೆ ಹಣ ಹಾಕ್ಬೇಡಿ ಅದು ಸಮಾಜಕ್ಕೆ ಉಪಯೋಗವಾಗೋದಿಲ್ಲ ಅನ್ನುವವರಿಗೆ ಸರಿಯಾದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ದೇವಾಲಯಕ್ಕೆ ಸೇರಿದ ಹಣದಲ್ಲಿ (ಹುಂಡಿ, ಪೂಜೆ,ಬಾಡಿಗೆ ಅಥವಾ ಇನ್ನಿತರ ಎಲ್ಲಾ) ದೇವಾಲಯದ ಎಲ್ಲಾ ಖರ್ಚು ಕಳೆದು ಉಳಿದ ಹಣದ 10% ಮಾತ್ರ ದೇವಾಲಯ ಸರ್ಕಾರಕ್ಕೆ (ಮುಜರಾಯಿ ಇಲಾಖೆಗೆ) ಕೊಡಬೇಕಾಗಿರುತ್ತದೆ. ಉಳಿದ ಹಣದಲ್ಲಿ ಅನ್ನದಾನ ರೂಪದಲ್ಲಿ ಬಂದ ದೇಣಿಗೆಯನ್ನು ಅನ್ನದಾನಕ್ಕೆ ಉಪಯೋಗಿಸಿಕೊಳ್ಳತಕ್ಕದ್ದು. ಅದನ್ನು ಫಿಕ್ಸೆಡ್ ಡೆಪಾಸಿಟ್ ಮಾಡಬೇಕಾಗಿರುತ್ತದೆ. ಉಳಿದದ್ದನ್ನು ಅಭಿವೃದ್ಧಿಗೆ ಉಪಯೋಗಿಸಬಹುದು. ಈ ಹಣವನ್ನು ಅಭಿವೃದ್ಧಿಗೆ ಉಪಯೋಗಿಸಲು ಸರ್ಕಾರದ ಅನೊಮೋದನೆ ಪಡೆಯಬೇಕಾಗುತ್ತದೆ.

ದೇವಾಲಯದ ಆಡಳಿತ ಮಂಡಳಿಯ ನಿರ್ಣಯದ ನಂತರ 5 ಲಕ್ಷದವರೆಗೆ ದೇವಾಲಯದ ಕಾರ್ಯನಿರ್ವಹಣಾಧಿಕಾರಿಗೆ, 25 ಲಕ್ಷದವರೆಗೆ ಜಿಲ್ಲಾಧಿಕಾರಿಗಳಿಗೆ, 2 ಕೋಟಿವರೆಗೆ ಮುಜರಾಯಿ ಇಲಾಖೆ ಕಮಿಶನರ್ ಮತ್ತು 10 ಕೋಟಿವರೆಗೆ ಮುಜರಾಯಿ ಮಂತ್ರಿಗಳಿಗೆ ಅವಕಾಶವಿದೆ. ಅದಕ್ಕೂ ಹೆಚ್ಚಿನ ಅನುಮೋದನೆಗೆ ಸರ್ಕಾರದ ಕ್ಯಾಬಿನೇಟ್ ಗೆ ಕಳುಹಿಸಿ ಅನುಮೋದನೆ ಪಡೆದುಕೊಳ್ಳಬೇಕಾಗುತ್ತದೆ. ಇದರೊಂದಿಗೆ ದೇವಾಲಯದ ಹಣವನ್ನು ಖರ್ಚು ಮಾಡುವಾಗ ಟೆಂಡರ್ ಮೂಲಕವೇ ಮಾಡತಕ್ಕದ್ದು ಅಥವಾ ನಿರ್ಮಿತಿ ಕೇಂದ್ರ ಅಥವಾ ಇನ್ನಿತರ ಸರಕಾರದ ಸಂಸ್ಥೆಗಳಾದ 4ಜಿ ವಿನಾಯತಿ ಇರುವ ಸಂಸ್ಥೆಗಳ ಮೂಲಕ ಅಭಿವೃದ್ಧಿ ಕಾರ್ಯ ಮಾಡಬೇಕಾಗುತ್ತದೆ. ಅದಲ್ಲದೆ ಹಣವನ್ನು ಏಕ ಏಕಿ ಖರ್ಚು ಮಾಡಲು ಸಾಧ್ಯವಿಲ್ಲ. ಇನ್ನು ಮುಜರಾಯಿ ಇಲಾಖೆಗೆ ಸೇರಿದ 10% ಹಣವನ್ನು ಇನ್ನಿತರ ಸಣ್ಣ ಪುಟ್ಟ ದೇವಾಲಯದ ಅಭಿವೃದ್ಧಿ, ತಸ್ತಿಕ್ ಅಥವಾ ಇನ್ನಿತರ ಕಾರ್ಯಗಳಿಗೆ ಖರ್ಚು ಮಾಡುತ್ತಾರೆ.

ಪ್ರಸ್ತುತ ಸುಬ್ರಹ್ಮಣ್ಯದಲ್ಲಿ ದೇವಾಲಯದ ವತಿಯಿಂದ ಇಡೀ ಸುಬ್ರಹ್ಮಣ್ಯ ಗ್ರಾಮಕ್ಕೆ ಕುಡಿಯುವ ನೀರಿನ ಯೋಜನೆಯನ್ನು ಉಚಿತವಾಗಿ ನೀಡುತ್ತದೆ, UGD ವ್ಯವಸ್ಥೆಯನ್ನು ದೇವಾಲಯದ ವತಿಯಿಂದ ನಡೆಸಲಾಗಿದೆ. ಮುಖ್ಯ ರಸ್ತೆ ಹಾಗು ಅನೇಕ ಒಳ ರಸ್ತೆಗಳನ್ನು ಕಾಂಕ್ರಿಟೀಕರಣ ಮಾಡಲಾಗಿದೆ. ಬೀದಿ ದೀಪಗಳನ್ನು ಅಳವಡಿಸಲಾಗಿದೆ ಮತ್ತು ಇದರ ತಿಂಗಳ ವೆಚ್ಚವನ್ನು ಬರಿಸಲಾಗುತ್ತಿದೆ. ಸ್ಥಳೀಯ ಕಡಬ ಮತ್ತು ಸುಳ್ಯದಂತಹ ಸರ್ಕಾರಿ ಆಸ್ಪತ್ರೆಗಳಿಗೆ ಆಂಬುಲೆನ್ಸ್, ಡಯಾಲಿಸಿಸ್ ಹಾಗು ಇನ್ನಿತರ ಉಪಕರಣಗಳನ್ನು ನೀಡಲಾಗಿದೆ. ಸ್ಥಳೀಯ ದೇವಾಲಯಗಳಿಗೆ ಮತ್ತು ಸ್ಥಳೀಯ ಸಂಘ ಸಂಸ್ಥೆಗಳಿಗೆ ಅನ್ನದಾನದ ವ್ಯವಸ್ಥೆಯನ್ನು ಪ್ರತಿ ವರ್ಷ ಮಾಡಿಕೊಡಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

10 hours ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

11 hours ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

13 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

13 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

21 hours ago