Advertisement
ಸುದ್ದಿಗಳು

ದೇವಸ್ಥಾನದ ಹುಂಡಿಗೆ ಹಾಕಿದ ಹಣ ಏನಾಗುತ್ತದೆ… ? | ಮಹತ್ವದ ಮಾಹಿತಿ ನೀಡಿದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸೋಶಿಯಲ್‌ ಮೀಡಿಯಾ ಪೇಜ್‌ |

Share

ಕಳೆದ ಸಮಯಗಳಿಂದ ಚರ್ಚೆಯಾಗುತ್ತಿದ್ದ ವಿಷಯ, ದೇವಸ್ಥಾನದ ಹುಂಡಿಗೆ ಹಾಕಿದ ಹಣ ಏನಾಗುತ್ತದೆ..?. ಈ ಬಗ್ಗೆ  ಭಕ್ತರು ಮತ್ತು ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ವ್ಯಕ್ತವಾಗುತ್ತಿತ್ತು. ಇದಕ್ಕೆ  ಸ್ಪಷ್ಟನೆಯನ್ನು ಕುಕ್ಕೆ ಸುಬ್ರಹ್ಮಣ್ಯದ ಸೋಶಿಯಲ್‌ ಮೀಡಿಯಾ ಪೇಜಲ್ಲಿ ಸ್ಪಷ್ಟನೆ ನೀಡಲಾಗಿದೆ.ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಭಕ್ತರಲ್ಲಿ ದೇವಾಲಯದ ಹುಂಡಿಗೆ ಹಣ ಹಾಕ್ಬೇಡಿ ಅದು ಸಮಾಜಕ್ಕೆ ಉಪಯೋಗವಾಗೋದಿಲ್ಲ ಅನ್ನುವವರಿಗೆ ಸರಿಯಾದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ದೇವಾಲಯಕ್ಕೆ ಸೇರಿದ ಹಣದಲ್ಲಿ (ಹುಂಡಿ, ಪೂಜೆ,ಬಾಡಿಗೆ ಅಥವಾ ಇನ್ನಿತರ ಎಲ್ಲಾ) ದೇವಾಲಯದ ಎಲ್ಲಾ ಖರ್ಚು ಕಳೆದು ಉಳಿದ ಹಣದ 10% ಮಾತ್ರ ದೇವಾಲಯ ಸರ್ಕಾರಕ್ಕೆ (ಮುಜರಾಯಿ ಇಲಾಖೆಗೆ) ಕೊಡಬೇಕಾಗಿರುತ್ತದೆ. ಉಳಿದ ಹಣದಲ್ಲಿ ಅನ್ನದಾನ ರೂಪದಲ್ಲಿ ಬಂದ ದೇಣಿಗೆಯನ್ನು ಅನ್ನದಾನಕ್ಕೆ ಉಪಯೋಗಿಸಿಕೊಳ್ಳತಕ್ಕದ್ದು. ಅದನ್ನು ಫಿಕ್ಸೆಡ್ ಡೆಪಾಸಿಟ್ ಮಾಡಬೇಕಾಗಿರುತ್ತದೆ. ಉಳಿದದ್ದನ್ನು ಅಭಿವೃದ್ಧಿಗೆ ಉಪಯೋಗಿಸಬಹುದು. ಈ ಹಣವನ್ನು ಅಭಿವೃದ್ಧಿಗೆ ಉಪಯೋಗಿಸಲು ಸರ್ಕಾರದ ಅನೊಮೋದನೆ ಪಡೆಯಬೇಕಾಗುತ್ತದೆ.

ದೇವಾಲಯದ ಆಡಳಿತ ಮಂಡಳಿಯ ನಿರ್ಣಯದ ನಂತರ 5 ಲಕ್ಷದವರೆಗೆ ದೇವಾಲಯದ ಕಾರ್ಯನಿರ್ವಹಣಾಧಿಕಾರಿಗೆ, 25 ಲಕ್ಷದವರೆಗೆ ಜಿಲ್ಲಾಧಿಕಾರಿಗಳಿಗೆ, 2 ಕೋಟಿವರೆಗೆ ಮುಜರಾಯಿ ಇಲಾಖೆ ಕಮಿಶನರ್ ಮತ್ತು 10 ಕೋಟಿವರೆಗೆ ಮುಜರಾಯಿ ಮಂತ್ರಿಗಳಿಗೆ ಅವಕಾಶವಿದೆ. ಅದಕ್ಕೂ ಹೆಚ್ಚಿನ ಅನುಮೋದನೆಗೆ ಸರ್ಕಾರದ ಕ್ಯಾಬಿನೇಟ್ ಗೆ ಕಳುಹಿಸಿ ಅನುಮೋದನೆ ಪಡೆದುಕೊಳ್ಳಬೇಕಾಗುತ್ತದೆ. ಇದರೊಂದಿಗೆ ದೇವಾಲಯದ ಹಣವನ್ನು ಖರ್ಚು ಮಾಡುವಾಗ ಟೆಂಡರ್ ಮೂಲಕವೇ ಮಾಡತಕ್ಕದ್ದು ಅಥವಾ ನಿರ್ಮಿತಿ ಕೇಂದ್ರ ಅಥವಾ ಇನ್ನಿತರ ಸರಕಾರದ ಸಂಸ್ಥೆಗಳಾದ 4ಜಿ ವಿನಾಯತಿ ಇರುವ ಸಂಸ್ಥೆಗಳ ಮೂಲಕ ಅಭಿವೃದ್ಧಿ ಕಾರ್ಯ ಮಾಡಬೇಕಾಗುತ್ತದೆ. ಅದಲ್ಲದೆ ಹಣವನ್ನು ಏಕ ಏಕಿ ಖರ್ಚು ಮಾಡಲು ಸಾಧ್ಯವಿಲ್ಲ. ಇನ್ನು ಮುಜರಾಯಿ ಇಲಾಖೆಗೆ ಸೇರಿದ 10% ಹಣವನ್ನು ಇನ್ನಿತರ ಸಣ್ಣ ಪುಟ್ಟ ದೇವಾಲಯದ ಅಭಿವೃದ್ಧಿ, ತಸ್ತಿಕ್ ಅಥವಾ ಇನ್ನಿತರ ಕಾರ್ಯಗಳಿಗೆ ಖರ್ಚು ಮಾಡುತ್ತಾರೆ.

ಪ್ರಸ್ತುತ ಸುಬ್ರಹ್ಮಣ್ಯದಲ್ಲಿ ದೇವಾಲಯದ ವತಿಯಿಂದ ಇಡೀ ಸುಬ್ರಹ್ಮಣ್ಯ ಗ್ರಾಮಕ್ಕೆ ಕುಡಿಯುವ ನೀರಿನ ಯೋಜನೆಯನ್ನು ಉಚಿತವಾಗಿ ನೀಡುತ್ತದೆ, UGD ವ್ಯವಸ್ಥೆಯನ್ನು ದೇವಾಲಯದ ವತಿಯಿಂದ ನಡೆಸಲಾಗಿದೆ. ಮುಖ್ಯ ರಸ್ತೆ ಹಾಗು ಅನೇಕ ಒಳ ರಸ್ತೆಗಳನ್ನು ಕಾಂಕ್ರಿಟೀಕರಣ ಮಾಡಲಾಗಿದೆ. ಬೀದಿ ದೀಪಗಳನ್ನು ಅಳವಡಿಸಲಾಗಿದೆ ಮತ್ತು ಇದರ ತಿಂಗಳ ವೆಚ್ಚವನ್ನು ಬರಿಸಲಾಗುತ್ತಿದೆ. ಸ್ಥಳೀಯ ಕಡಬ ಮತ್ತು ಸುಳ್ಯದಂತಹ ಸರ್ಕಾರಿ ಆಸ್ಪತ್ರೆಗಳಿಗೆ ಆಂಬುಲೆನ್ಸ್, ಡಯಾಲಿಸಿಸ್ ಹಾಗು ಇನ್ನಿತರ ಉಪಕರಣಗಳನ್ನು ನೀಡಲಾಗಿದೆ. ಸ್ಥಳೀಯ ದೇವಾಲಯಗಳಿಗೆ ಮತ್ತು ಸ್ಥಳೀಯ ಸಂಘ ಸಂಸ್ಥೆಗಳಿಗೆ ಅನ್ನದಾನದ ವ್ಯವಸ್ಥೆಯನ್ನು ಪ್ರತಿ ವರ್ಷ ಮಾಡಿಕೊಡಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago