Advertisement
ಮಾಹಿತಿ

ಕಿಸಾನ್ ಕ್ರೆಡಿಟ್ ಕಾರ್ಡ್ : ಇದನ್ನು ಯಾರೆಲ್ಲ ಮಾಡಿಸಬಹುದು..? ಇದ್ರಿಂದ ಸಿಗೂ ಲಾಭ ಹಾಗೂ ಪ್ರಯೋಜನ ಏನು..?

Share

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ.. ರೈತರಿಗಾಗಿ ಸರ್ಕಾರ ಮಾಡಿದ ಒಂದು ಅತ್ಯನುಕೂಲಕರವಾದ ಯೋಜನೆ. ಈ ಕಾರ್ಡ್ ಮೂಲಕ ರೈತರಿಗೆ ಕ್ರೆಡಿಟ್ ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್ ಮೂಲಕ ಅವರು ತಮ್ಮ ಅಗತ್ಯಕ್ಕೆ ಅನುಗುಣವಾಗಿ 1.6 ಲಕ್ಷ ರೂಪಾಯಿವರೆಗೆ ಸಾಲ ಪಡೆಯಬಹುದು. ಅವರು ತಮ್ಮ ಹೊಲಗಳಿಗೆ ಬಿತ್ತನೆ ಮಾಡುವುದು, ಬೆಳೆ ಪೋಷಣೆ, ಬೆಳೆಗಳಿಗೆ ರಸಗೊಬ್ಬರ ಹಾಕುವುದು ಮೊದಲಾದ ಕೃಷಿ ಚಟುವಟಿಕೆಗಳಿಗೆ ಸಾಲ ಪಡೆಯಲು ಕಿಸಾನ್ ಕ್ರೆಡಿಟ್‌ ಕಾರ್ಡ್‌ ಬಳಸಬಹುದು.

ಈ ಕಾರ್ಡ್ ಮೂಲಕ ಸಾಲ ಪಡೆಯಲು ಅರ್ಹತೆ:

ಬಾಡಿಗೆ ಕೃಷಿಕರು, ಸ್ವಂತ ಹಿಡುವಳಿದಾರರು, ಸ್ವಂತ ಹಿಡುವಳಿಯುಳ್ಳ ಬೆಳೆ ಪಾಲುದಾರರು, ಭೋಗ್ಯ ಕೃಷಿಕರು, ಸ್ವ ಸಹಾಯ ಸಂಘಗಳು, ಕೃಷಿಕರು, ಕೃಷಿಕರ ಸಂಯುಕ್ತ ಋಣಭಾರ ಗುಂಪುಗಳು ಸಾಲ ಸೌಲಭ್ಯ ಪಡೆಯಬಹುದು.

ಯಾವುದಕ್ಕೆಲ್ಲ ಸಾಲ ಸೌಲಭ್ಯವಿದೆ:

ಬೆಳೆ ಬೆಳೆಯಲು ಬೇಕಾಗುವ ಬೀಜ, ಗೊಬ್ಬರ ಇತ್ಯಾದಿ ಅಲ್ಪಾವಧಿ ಖರ್ಚುಗಳಿಗೆ ಫ‌ಸಲು ಬಂದ ಅನಂತರ ಬೆಳೆಯ ಸಂಸ್ಕರಣೆಗೆ ಮಾಡಬೇಕಾದ ಖರ್ಚು ವೆಚ್ಚಗಳಿಗೆ, ಬೆಳೆಗೆ ಮಾರುಕಟ್ಟೆಯಲ್ಲಿ ಸರಿಯಾದ ದರ ಬರುವವರೆಗೆ ಕಾಯ್ದಿಡಬೇಕಾದ ಅವಧಿಯಲ್ಲಿ ಅಗತ್ಯವಿರುವ ಕೃಷಿ ಖರ್ಚು, ರೈತನ ಮನೆಯ ಗೃಹಸಂಬಂಧಿ ಖರ್ಚು, ಕೃಷಿಗೆ ಸಂಬಂಧಿಸಿದ ಪರಿಕರಗಳ ರಿಪೇರಿ ಮತ್ತು ನಿರ್ವಹಣೆಗೆ, ಹೈನುಗಾರಿಕೆ, ಕುರಿ, ಕೋಳಿ ಸಾಕಾಣಿಕೆ ಇತ್ಯಾದಿಗೆ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ನಲ್ಲಿ ಸಾಲ ಪಡೆಯಬಹುದು.

ಬಡ್ಡಿ ದರ ಎಷ್ಟಿರುತ್ತೆ..? :

ಮೂರು ಲಕ್ಷದವರೆಗಿನ ಅಲ್ಪಾವಧಿ ಸಾಲಕ್ಕೆ ಈಗ ಶೇ.7 ಬಡ್ಡಿ ಇದ್ದು ಪ್ರಾಮಾಣಿಕವಾಗಿ ಮರುಪಾವತಿ ಮಾಡಿದವರಿಗೆ ಶೇ.4 ರ ಬಡ್ಡಿಯಲ್ಲಿ ಸಾಲ ದೊರೆಯುತ್ತದೆ. ಅವಧಿ ಸಾಲಗಳಿಗೆ ತುಸು ಹೆಚ್ಚಿನ ಬಡ್ಡಿ ಅಂದರೆ, ಶೇ.10.50 ರಿಂದ ಶೇ.11ರ ವರೆಗೆ ಇದೆ. ಒಂದು ಲಕ್ಷದವರೆಗಿನ ಸಾಲಕ್ಕೆ ಯಾವುದೇ ಭದ್ರತೆಯ ಅವಶ್ಯಕತೆಯಿಲ್ಲ.

ಕಿಸಾನ್ ಕ್ರೆಡಿಟ್ ಕಾರ್ಡ್ ಪ್ರಾಥಮಿಕವಾಗಿ ಕೃಷಿ ಸಂಬಂಧಿತ ಸಾಲವಾಗಿದೆ, ಇದನ್ನು ನಬಾರ್ಡ್ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಮತ್ತು 1998 ರಲ್ಲಿ ಭಾರತದ ವಿವಿಧ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಪರಿಚಯಿಸಿದವು. ಈ ಸಾಲದ ಅಂತಿಮ ಗುರಿ ರೈತನ ಒಟ್ಟಾರೆ ಕೃಷಿ ಅಗತ್ಯಗಳನ್ನು ಪೂರೈಸುವುದಾಗಿದೆ.

ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲವು ಕೃಷಿ ಭವನದಿಂದ ಲಭ್ಯವಿಲ್ಲ, ಆದರೆ ಇದು ಕೇವಲ ಬ್ಯಾಂಕ್‌ಗಳ ಮೂಲಕ ಜಾರಿಗೊಳಿಸಲಾದ ಯೋಜನೆಯಾಗಿದೆ. ಇದು ರೈತರಿಗೆ ‘ಕ್ರೆಡಿಟ್ ಕಾರ್ಡ್’ ಸಾಲ ಯೋಜನೆಯಾಗಿದೆ. ಅಂದರೆ ಸಾಲದ ಜೊತೆಗೆ ರೈತರಿಗೆ ಎಲೆಕ್ಟ್ರಾನಿಕ್ ಕ್ರೆಡಿಟ್ ಕಾರ್ಡ್ ಕೂಡ ಸಿಗುತ್ತದೆ. ಈ ಕಾರ್ಡ್‌ನೊಂದಿಗೆ ರೈತರು ತಮ್ಮ ಕೃಷಿ ಅಗತ್ಯಗಳಿಗಾಗಿ ಎಟಿಎಂ ಮೂಲಕ ಹಣವನ್ನು ಪಡೆಯಬಹುದು.

ನೀವು ಸಾಲದ ಖಾತೆಯಿಂದ1 ಲಕ್ಷ ರೂ. ಗಳನ್ನು ಹಿಂತೆಗೆದುಕೊಳ್ಳುವ ಮತ್ತು ಉಳಿತಾಯ ಖಾತೆಯಲ್ಲಿ ಮೊದಲ ಹಂತದಲ್ಲಿ ಠೇವಣಿ ಮಾಡಿದರೆ, ನೀವು ಅದರಿಂದ 10,000 ರೂ.ಗಳನ್ನು ತೆಗೆದುಕೊಂಡರೂ, ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲವನ್ನು ಸ್ವಂತ ಖಾತೆಯಿಂದ ಹಿಂಪಡೆದು ಮರುಪಾವತಿಸಲು ವಿಶೇಷ ಗಮನ ಹರಿಸಬೇಕು. ಬ್ಯಾಂಕ್‌ಗಳಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಎಲೆಕ್ಟ್ರಾನಿಕ್ ಕ್ರೆಡಿಟ್ ಕಾರ್ಡ್‌ಗಳನ್ನು ಕೇಳಿ ಪಡೆಯಿರಿ.

ಕೃಷಿ ಭೂಮಿ ಹೊಂದಿರುವ ಯಾವುದೇ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು. ಗೇಣಿದಾರ ರೈತರಿಗೆ, ರೈತರ ಗುಂಪುಗಳು ನೋಂದಾಯಿತ ಗುತ್ತಿಗೆ ಒಪ್ಪಂದ ಮತ್ತು ಸಾಗುವಳಿ ಜಮೀನಿನ ಸ್ವಯಂ ಪಾವತಿ ರಸೀದಿಯನ್ನು ಸಲ್ಲಿಸುವ ಮೂಲಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದು. ಪ್ರತಿ ಬೆಳೆಗೆ ನಿಗದಿತ ಪ್ರಮಾಣದ ಹಣಕಾಸು ಸಾಲಗಳು ಲಭ್ಯವಿರುತ್ತವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

50 minutes ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

3 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

8 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

8 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

17 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

18 hours ago