Advertisement
Opinion

ಭೂ ಅಭಿವೃದ್ಧಿ ಕೃಷಿ ಸಾಲ ಎಂದರೇನು..? ರೈತರು ಇದನ್ನು ಪಡೆಯುವುದು ಹೇಗೆ..?

Share

ಸಣ್ಣಪ್ಪ ಕೆಲವು ವರ್ಷಗಳು ಅಲಸಂಡೆ ಮತ್ತಿತರ ಕೃಷಿ ಮಾಡಿದ. ಬ್ಯಾಂಕಿಗೆ ಬೆಳೆ ಸಾಲ ಮತ್ತು ಬಡ್ಡಿ ಕಟ್ಟಿದ ಬಳಿಕ ಆತನಲ್ಲಿ ಸಾಕಷ್ಟು ಹಣ ಉಳಿದುಕೊಂಡಿತ್ತು.ಹಾಗಾಗಿ ಒಂದಷ್ಟು ಉಳಿತಾಯವೂ ಈಗ ಸಣ್ಣಪ್ಪನ ಬಳಿ ಇದೆ. ಆದರೆ ಜಮೀನಿನಲ್ಲಿ ವ್ಯವಸ್ಥಿತವಾದ ನೀರಿನ ಸೌಕರ್ಯ ಇಲ್ಲದ್ದರಿಂದ ವರ್ಷಪೂರ್ತಿ ಕೃಷಿ ಮಾಡಲು ಸಾಧ್ಯವಾಗ್ತಾ ಇಲ್ಲ.ಜೊತೆಗೆ ಅತ್ಯಾಧುನಿಕ ನೀರಾವರಿ ಸೌಲಭ್ಯ ಅಳವಡಿಸಿದರೆ ಒಳ್ಳೆಯದು ಅಂತಲೂ ಸಣ್ಣಪ್ಪನಿಗೆ ಅನಿಸ್ತಾ ಇದೆ.

ಸಣ್ಣಪ್ಪ ಬ್ಯಾಂಕಿಗೆ ಹೋಗಿ ಈ ಬಗ್ಗೆ ವಿಚಾರಿಸಿದ.ಬ್ಯಾಂಕಿನವರಿಗೂ ಸಣ್ಣಪ್ಪನ ಜೊತೆಗಿನ ವ್ಯವಹಾರ ಖುಷಿ ಕೊಟ್ಟಿದೆ.ನಂಬಿಕೆಯೂ ಬಂದಿದೆ.
ನೀರಿಗಾಗಿ ಬಾವಿ ತೆಗೆಯುವುದು, ಅದಕ್ಕೊಂದು ವಿದ್ಯುತ್ ಪಂಪ್ ಅಳವಡಿಸುವುದು ಮತ್ತು ನೀರಾವರಿಗಾಗಿ ಸ್ಪ್ರಿಂಕ್ಲರ್ ಪದ್ದತಿ ಅಳವಡಿಸುವುದು ಸಣ್ಣಪ್ಪನ ಚಿಂತನೆ. ಇದಕ್ಕೆ ಬಂಡವಾಳ ಹೆಚ್ಚು ಬೇಕು. ಜೊತೆಗೆ ಒಂದೇ ವರ್ಷದಲ್ಲಿ ಪಡಕೊಂಡ ಹಣವನ್ನು ಬಡ್ಡಿ ಸಮೇತ ಹಿಂದಿರುಗಿಸಲು ಸಾಧ್ಯವೂ ಇಲ್ಲ.ಪ್ರತಿ ವರ್ಷವೂ ಕಂತು ಕಂತಿನಲ್ಲಿ ಸಾಲ ತೀರಿಸುವ ವ್ಯವಸ್ಥೆ ಸಣ್ಣಪ್ಪನಿಗೆ ಬೇಕಾಗಿದೆ.

ಬ್ಯಾಂಕು ಸಣ್ಣಪ್ಪನ ಬಳಿ ಇದಕ್ಕಾಗಿ ಒಂದು ಯೋಜನಾ ಪಟ್ಟಿಯನ್ನು ( project report) ತಯಾರಿಸಲು ಹೇಳಿದೆ.ಯಾವ್ಯಾವ ಯೋಜನೆಗೆ ಎಷ್ಟೆಷ್ಟು ಖರ್ಚು ಬರುತ್ತದೆ ಎಂದು ಅಂದಾಜಿಸಲು ಹೇಳಿದೆ.ಯೋಜನಾ ವರದಿಯ ಆಧಾರದಲ್ಲಿ ಬ್ಯಾಂಕ್ ಸಣ್ಣಪ್ಪನಿಗೆ ಎಷ್ಟು ಸಾಲ ಕೊಡಬಹುದು ಅಂತ ನಿರ್ಧರಿಸುತ್ತದೆ.
ಸಾಲದ ಒಟ್ಟು ಮೊತ್ತ, ಸಣ್ಣಪ್ಪನಿಗೆ ಆಗಬಹುದಾದ ವಾರ್ಷಿಕ ಉಳಿತಾಯದ ಪ್ರಮಾಣ ಇತ್ಯಾದಿಗಳನ್ನು ಗಮನಿಸಿ ಮರುಪಾವತಿಯ ಅವಧಿಯನ್ನು ಬ್ಯಾಂಕ್ ನಿರ್ಧರಿಸುತ್ತದೆ. ಪ್ರತಿ ಕಂತಿನಲ್ಲೂ ಆ ವರ್ಷದ ಬಡ್ಡಿಯ ಹಣ ಮತ್ತು ಅಸಲಿನ ಒಂದು ಭಾಗ ಇರುವಂತೆ ಅವಧಿಯನ್ನು ವಿಭಾಗಿಸಲಾಗುತ್ತದೆ. ಸಾಮಾನ್ಯವಾಗಿ ಮೂರು/ ಐದು/ಹತ್ತು ವರ್ಷಗಳ ಅವಧಿಯಲ್ಲಿ ಸಾಲ ತೀರುವಳಿಯಾಗುವಂತೆ ಮರು ಪಾವತಿ ನಿರ್ಧರಿಸಲಾಗುತ್ತದೆ .

ಗಮನಿಸಿ ,ಈ ಸಾಲ ಇರುವುದು ವಾರ್ಷಿಕ ಖರ್ಚಿನ‌ ನಿಭಾವಣೆಗಾಗಿ ಅಲ್ಲ.ಜಮೀನಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ. ತೋಟಗಾರಿಕಾ ಬೆಳೆಗಳಲ್ಲಿ ಫಸಲು ಬರಲು ಹಲವು ವರ್ಷಗಳು ಕಾಯ ಬೇಕಾಗ್ತದೆ.ಅಂತಹ ಸಂದರ್ಭದಲ್ಲಿ ಸಾಲಗಾರ ವಾರ್ಷಿಕ ನೆಲೆಯಲ್ಲಿ ಕಂತು ಕಟ್ಟುವುದು ಹೇಗೆ? ಅದಕ್ಕಾಗಿ ಫಸಲು ಆರಂಭವಾಗಲು ಇಂತಿಷ್ಟು ವರ್ಷ ಬೇಕು ಅಂತ ಮೊದಲೇ ನಿರ್ಧರಿಸಿ ಆ ಬಳಿಕವೇ ಕಂತು ಕಟ್ಟಲು ಹೇಳುವ ಕ್ರಮವೂ ಇತ್ತು. ವಿಶೇಷವಾಗಿ ರಬ್ಬರ್ ಕೃಷಿಯಲ್ಲಿ ಹಿಂದೆ ಈ ಮಾದರಿ ಸಾಲ ತೀರುವಳಿಯ ಅವಕಾಶ ಕೃಷಿಕರುಗಳಿಗೆ ಇತ್ತು.

‌‌ಬ್ಯಾಂಕುಗಳು ದೀರ್ಘಾವಧಿ ಸಾಲವನ್ನು ಕೃಷಿಕರಿಗೆ ಕೊಡ್ತದೆ.ಆದರೆ ಸಹಕಾರಿ ಸಂಘಗಳಿಗೆ ಈ ಅವಕಾಶ ಇದೆಯಾ? ಇತ್ತೀಚೆಗಿನ ತನಕವೂ ಸಹಕಾರಿ ಸಂಘಗಳೂ ಕೃಷಿಕರುಗಳಿಗೆ ದೀರ್ಘಾವಧಿ ಸಾಲ ಕೊಡ್ತಾ ಇತ್ತು.ಆದರೆ ವಾಸ್ತವದಲ್ಲಿ ಅದಕ್ಕೆ ಅವಕಾಶ ಇರಲಿಲ್ಲವಂತೆ.ಕೃಷಿಕರು ದೀರ್ಘಾವಧಿ ಕೃಷಿ ಸಾಲ ಬೇಕಿದ್ದರೆ ಸಂಬಂಧಿತ ಭೂ ಅಭಿವೃದ್ಧಿ ಬ್ಯಾಂಕಿನಿಂದ (L.D.Bank) ಪಡಕೊಳ್ಳ ತಕ್ಕದ್ದು ಎಂಬುದು ನಿಯಮವಂತೆ.

ಕಾಲಾನುಕ್ರಮದಲ್ಲಿ L.D.Bank ಗಳು ಒಂದಿಷ್ಟು ದುರ್ಬಲವಾಗಿ ತನ್ನ ಪರಿಧಿಯ ಕೃಷಿಕರುಗಳ ಆವಶ್ಯಕತೆ ಪೂರೈಸುವ ಸಾಮರ್ಥ್ಯ ಕಳಕೊಂಡದ್ದು ಮತ್ತು ಅದೇ ಸಮಯದಲ್ಲಿ ಸ್ಥಳೀಯ ಸಹಕಾರಿ ಸಂಘಗಳು ಬಲಿಷ್ಟವಾಗಿ ಸದಸ್ಯರುಗಳಿಗೆ ಹೆಚ್ಚಿನ ಸಾಲ ಕೊಡುವಷ್ಟು ಶಕ್ತಿ ಗಳಿಸಿಕೊಂಡದ್ದರಿಂದ ,ನಿಯಮಗಳಲ್ಲಿ ಅವಕಾಶ ಇಲ್ಲದೇ ಹೋದರೂ,ವಾಸ್ತವದಲ್ಲಿ ದೀರ್ಘಾವಧಿ ಸಾಲ ಕೊಡುವುದು ರೂಢಿಗೆ ಬಂದದ್ದು ಅಂತ ಕೇಳಿದ್ದೆ.

ಇತ್ತೀಚೆಗೆ ಸಹಕಾರಿ ಸಂಸ್ಥೆಗಳಿಗೆ ಸಂಬಂಧ ಪಟ್ಟಂತೆ ದೇಶಕ್ಕೊಂದೇ ಬೈಲಾ ಎಂಬ ತತ್ವದಡಿಯಲ್ಲಿ ಪುನಹ ಸಹಕಾರಿ ಸಂಸ್ಥೆಗಳಿಗೆ ದೀರ್ಘಾವಧಿ ಸಾಲ ಕೊಡುವ ಅವಕಾಶ ಇಲ್ಲ ಅಂತ ಹೇಳಲಾಯ್ತು.ಜೊತೆಗೆ ಅಸ್ತಿತ್ವದಲ್ಲಿ ಇರುವ ಕಾರ್ಯಕ್ರಮಗಳನ್ನು ಮುಂದುವರೆಸಲೂ ಹೇಳಲಾಯ್ತು.ಗೊಂದಲಕ್ಕೆ ಒಳಗಾದ ಹಲವು ಸಂಘಗಳು ದೀರ್ಘಾವಧಿ ಸಾಲ ಕೊಡುವುದನ್ನು ಸ್ಥಗಿತಗೊಳಿಸಿದವು. ಇನ್ನೊಂದಷ್ಟು ಸಂಸ್ಥೆಗಳು ದೀರ್ಘಾವಧಿ ಸಾಲ ಕೊಡುವುದನ್ನು ಮುಂದುವರೆಸಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರಮೇಶ್‌ ದೇಲಂಪಾಡಿ

ರಮೇಶ್‌ ದೇಲಂಪಾಡಿ ಅವರು ಕೃಷಿಕರು. ಪ್ರಯೋಗಶೀಲ ಕೃಷಿಕರಾಗಿ ಗುರುತಿಸಿಕೊಂಡಿದ್ದಾರೆ. ಅಡಿಕೆ, ತೆಂಗು, ತಾಳೆ, ರಬ್ಬರ್‌ ಇವರ ಪ್ರಮುಖ ಕೃಷಿ. ಅಡಿಕೆ ಬೇರುಹುಳ, ಅಡಿಕೆ ಹಳದಿ ಎಲೆರೋಗ ಸೇರಿದಂತೆ ಕೃಷಿ ಸಂಬಂಧಿತ ವಿಚಾರಗಳಲ್ಲಿ ಹೆಚ್ಚು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೆ.

Published by
ರಮೇಶ್‌ ದೇಲಂಪಾಡಿ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

17 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago