Advertisement
MIRROR FOCUS

Arecanut Market | ಕಾಯಿರಿ, ಅಡಿಕೆ ಧಾರಣೆ ಸ್ಥಿರವಾಗುತ್ತದೆ…! | ಬರ್ಮಾ ಅಡಿಕೆಗೆ ಬೀಳಲಿ ಬ್ರೇಕ್..‌ | ಬೆಳೆಗಾರರೇ ಎಚ್ಚರ ವಹಿಸಿ…. |

Share

ಅಡಿಕೆ ಧಾರಣೆ ಏರಿಕೆಯಾಗುತ್ತದಾ…?. ಈ ಪ್ರಶ್ನೆ ಅನೇಕ ಬೆಳೆಗಾರರಲ್ಲಿದೆ. ಕಾಯಿರಿ, ಈಗ ಅಡಿಕೆ ಧಾರಣೆ ಇಳಿಕೆಯ ವೇಳೆ ಒಮ್ಮೆಲೇ ಅಡಿಕೆಯನ್ನು ಮಾರುಕಟ್ಟೆಗೆ ಬಿಡಬೇಡಿ. ಬರ್ಮಾ ಸೇರಿದಂತೆ ಕಳಪೆ ಅಡಿಕೆ ಮಾರುಕಟ್ಟೆ ಪ್ರವೇಶವಾಗದಂತೆ ಬೆಳೆಗಾರರೇ ಎಚ್ಚರ ವಹಿಸಿ. ಅಡಿಕೆ ಧಾರಣೆ ಮುಂದಿನ 15 ದಿನದಲ್ಲಿ ಮತ್ತೆ ಏರಿಕೆಯಾಗುತ್ತದೆ. ಇದೀಗ ಕಳೆದ ಎರಡು ದಿನಗಳಿಂದ ಅಡಿಕೆ ಮಾರುಕಟ್ಟೆ ಮತ್ತೆ ಕುಸಿತವಾಗುವುದು ನಿಂತಿದೆ.

ಚಾಲಿ ಅಡಿಕೆ ಧಾರಣೆ ಇಳಿಕೆಯ ಹಾದಿಗೆ ತಾತ್ಕಾಲಿಕ ಬ್ರೇಕ್‌ ಸಿಕ್ಕಿದೆ. ಹೊಸ ಚಾಲಿ ಅಡಿಕೆ ಏರಿಕೆಯ ಲಕ್ಷಣದಲ್ಲಿದೆ. ಹಳೆ ಅಡಿಕೆ ಧಾರಣೆ ಸದ್ಯ ಸ್ಥಿರತೆಯಲ್ಲಿದೆ. ಮಂಗಳೂರು ಮಾರುಕಟ್ಟೆಯಲ್ಲಿ ಹೊಸ ಅಡಿಕೆ 350-370 , ಹಳೆ ಅಡಿಕೆ 415-422 ಹಾಗೂ ಚೋಲ್‌ ಅಡಿಕೆ 455-462 ರೂಪಾಯಿಗೆ ಇದೆ.  ಕಳೆದ ಎರಡು ವಾರಗಳಿಂದ ಅಡಿಕೆ ಧಾರಣೆ ಇಳಿಕೆಯ ಹಾದಿಯಲ್ಲಿತ್ತು. ಇದೀಗ ಕಳೆದ ಎರಡು ದಿನಗಳಿಂದ ಸ್ಥಿರತೆಯ ಕಡೆಗೆ ಬಂದಿದೆ. ಧಾರಣೆ ಇಳಿಕೆಯ ಕಾರಣದಿಂದ ಅಡಿಕೆಯು ಮಾರುಕಟ್ಟೆ ಬರುವುದು ಕಡಿಮೆಯಾಗಿದೆ. ಹೀಗಾಗಿ ಸಹಜವಾಗಿಯೇ ಮಾರುಕಟ್ಟೆ ಕುಸಿತವೂ ನಿಲುಗಡೆಯಾಗಿದೆ. ಇದೇ ಟ್ರೆಂಡ್‌ ಮುಂದುವರಿದರೆ ಮುಂದಿನ 15 ದಿನಗಳಲ್ಲಿ ಮತ್ತೆ ಚಾಲಿ ಅಡಿಕೆ ಧಾರಣೆ ಏರಿಕೆ ಕಾಣಬಹುದು.

ಈ ನಡುವೆ ಬರ್ಮಾ ಅಡಿಕೆ ಗ್ರಾಮೀಣ ಭಾಗದವರೆಗೂ ಬಂದಿದೆ ಎಂಬ ಮಾಹಿತಿ ಇದೆ.  ಹೀಗಾಗಿ ಈ ಅಡಿಕೆಯು ಇಲ್ಲಿನ ಅಡಿಕೆ ಜೊತೆ ಸೇರಿ ಕ್ಯಾಂಪ್ಕೋ ಸಹಿತ ಇತರ ಸಹಕಾರಿ ಸಂಸ್ಥೆಗಳ ಮೂಲಕ ಹಾಗೂ ಪ್ರಮುಖ ಖಾಸಗಿ ವ್ಯಾಪಾರಿಗಳಿಗೂ ಮಾರಾಟ ಮಾಡುವ ಕೆಲವೊಂದು ದಂಧೆಗಳೂ ಇರುವ ಬಗ್ಗೆ ಗುಮಾನಿ ಇದೆ. ಹೀಗಾಗಿ ಅಡಿಕೆ ಬೆಳೆಗಾರರು ಕೂಡಾ ಈಗ ಎಚ್ಚರಿಕೆ ವಹಿಸಿ, ಅಂತಹ ಪ್ರಕರಣಗಳ ಸಂದೇಹ ಇದ್ದರೆ ಪ್ರತಿಭಟಿಸಬೇಕಾದ ಅಗತ್ಯ ಇದೆ. ಧಾರಣೆ ಸ್ಥಿರೀಕರಣಹಾಗೂ ಅಡಿಕೆ ಮಾರುಕಟ್ಟೆ ಉಳಿಸುವ ನಿಟ್ಟಿನಲ್ಲಿ ಈಗ ಬೆಳೆಗಾರರ ಪಾತ್ರವೂ ಮುಖ್ಯವಾಗಿದೆ. ಧಾರಣೆ ಕುಸಿತದ ಕಾರಣದಿಂದ ಒಮ್ಮೆಲೇ ಅಡಿಕೆಯನ್ನು ಮಾರುಕಟ್ಟೆ ಬಿಡದೇ ಇರುವುದು ಹಾಗೂ ಅಕ್ರಮಗಳ ಬಗ್ಗೆ ಗುಮಾನಿ ಇದ್ದರೆ ತಕ್ಷಣವೇ ಪ್ರತಿಭಟಿಸಬೇಕಾದ ಅಗತ್ಯವೂ ಇದೆ. ಹೀಗಾದರೆ ಮುಂದಿನ 15 ದಿನಗಳಲ್ಲಿ ಮತ್ತೆ ಅಡಿಕೆ ಮಾರುಕಟ್ಟೆ ಸ್ಥಿರತೆ ಕಂಡು ಏರಿಕೆ ಸಾಧ್ಯತೆ ಇದೆ. (ಅಡಿಕೆ ಧಾರಣೆ ಏನಾದೀತು ಎಂದು ರೂರಲ್‌ ಮಿರರ್‌ ಈ ತಿಂಗಳ ಆರಂಭದಲ್ಲಿ ಮಾಡಿರುವ ವರದಿ ಇಲ್ಲಿದೆ…)

ಈ ನಡುವೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾರುಕಟ್ಟೆಯಲ್ಲಿ ಕೊಂಚ ಪ್ರಮಾಣದಲ್ಲಿ  ಕುಸಿತ ಕಂಡಿದೆ. 57 ಸಾವಿರ ರೂ. ಗಡಿ ದಾಟಿದ್ದ ಅಡಿಕೆ ಧಾರಣೆ ಇದೀಗ ಕೊಂಚ ಕುಸಿತ ಕಂಡಿದೆ. ಕೆಲವು ಜಿಲ್ಲೆಗಳಲ್ಲಿ ಅಡಿಕೆ ಬೆಲೆ ಸ್ಥಿರತೆಯತ್ತ ಬಂದಿದೆ. ತುಮಕೂರಿನಲ್ಲಿ ಅಡಿಕೆ ಧಾರಣೆ 44,800 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

11 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

17 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

1 day ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

1 day ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

1 day ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

1 day ago