Advertisement
MIRROR FOCUS

Arecanut Market | ಕಾಯಿರಿ, ಅಡಿಕೆ ಧಾರಣೆ ಸ್ಥಿರವಾಗುತ್ತದೆ…! | ಬರ್ಮಾ ಅಡಿಕೆಗೆ ಬೀಳಲಿ ಬ್ರೇಕ್..‌ | ಬೆಳೆಗಾರರೇ ಎಚ್ಚರ ವಹಿಸಿ…. |

Share

ಅಡಿಕೆ ಧಾರಣೆ ಏರಿಕೆಯಾಗುತ್ತದಾ…?. ಈ ಪ್ರಶ್ನೆ ಅನೇಕ ಬೆಳೆಗಾರರಲ್ಲಿದೆ. ಕಾಯಿರಿ, ಈಗ ಅಡಿಕೆ ಧಾರಣೆ ಇಳಿಕೆಯ ವೇಳೆ ಒಮ್ಮೆಲೇ ಅಡಿಕೆಯನ್ನು ಮಾರುಕಟ್ಟೆಗೆ ಬಿಡಬೇಡಿ. ಬರ್ಮಾ ಸೇರಿದಂತೆ ಕಳಪೆ ಅಡಿಕೆ ಮಾರುಕಟ್ಟೆ ಪ್ರವೇಶವಾಗದಂತೆ ಬೆಳೆಗಾರರೇ ಎಚ್ಚರ ವಹಿಸಿ. ಅಡಿಕೆ ಧಾರಣೆ ಮುಂದಿನ 15 ದಿನದಲ್ಲಿ ಮತ್ತೆ ಏರಿಕೆಯಾಗುತ್ತದೆ. ಇದೀಗ ಕಳೆದ ಎರಡು ದಿನಗಳಿಂದ ಅಡಿಕೆ ಮಾರುಕಟ್ಟೆ ಮತ್ತೆ ಕುಸಿತವಾಗುವುದು ನಿಂತಿದೆ.

ಚಾಲಿ ಅಡಿಕೆ ಧಾರಣೆ ಇಳಿಕೆಯ ಹಾದಿಗೆ ತಾತ್ಕಾಲಿಕ ಬ್ರೇಕ್‌ ಸಿಕ್ಕಿದೆ. ಹೊಸ ಚಾಲಿ ಅಡಿಕೆ ಏರಿಕೆಯ ಲಕ್ಷಣದಲ್ಲಿದೆ. ಹಳೆ ಅಡಿಕೆ ಧಾರಣೆ ಸದ್ಯ ಸ್ಥಿರತೆಯಲ್ಲಿದೆ. ಮಂಗಳೂರು ಮಾರುಕಟ್ಟೆಯಲ್ಲಿ ಹೊಸ ಅಡಿಕೆ 350-370 , ಹಳೆ ಅಡಿಕೆ 415-422 ಹಾಗೂ ಚೋಲ್‌ ಅಡಿಕೆ 455-462 ರೂಪಾಯಿಗೆ ಇದೆ.  ಕಳೆದ ಎರಡು ವಾರಗಳಿಂದ ಅಡಿಕೆ ಧಾರಣೆ ಇಳಿಕೆಯ ಹಾದಿಯಲ್ಲಿತ್ತು. ಇದೀಗ ಕಳೆದ ಎರಡು ದಿನಗಳಿಂದ ಸ್ಥಿರತೆಯ ಕಡೆಗೆ ಬಂದಿದೆ. ಧಾರಣೆ ಇಳಿಕೆಯ ಕಾರಣದಿಂದ ಅಡಿಕೆಯು ಮಾರುಕಟ್ಟೆ ಬರುವುದು ಕಡಿಮೆಯಾಗಿದೆ. ಹೀಗಾಗಿ ಸಹಜವಾಗಿಯೇ ಮಾರುಕಟ್ಟೆ ಕುಸಿತವೂ ನಿಲುಗಡೆಯಾಗಿದೆ. ಇದೇ ಟ್ರೆಂಡ್‌ ಮುಂದುವರಿದರೆ ಮುಂದಿನ 15 ದಿನಗಳಲ್ಲಿ ಮತ್ತೆ ಚಾಲಿ ಅಡಿಕೆ ಧಾರಣೆ ಏರಿಕೆ ಕಾಣಬಹುದು.

ಈ ನಡುವೆ ಬರ್ಮಾ ಅಡಿಕೆ ಗ್ರಾಮೀಣ ಭಾಗದವರೆಗೂ ಬಂದಿದೆ ಎಂಬ ಮಾಹಿತಿ ಇದೆ.  ಹೀಗಾಗಿ ಈ ಅಡಿಕೆಯು ಇಲ್ಲಿನ ಅಡಿಕೆ ಜೊತೆ ಸೇರಿ ಕ್ಯಾಂಪ್ಕೋ ಸಹಿತ ಇತರ ಸಹಕಾರಿ ಸಂಸ್ಥೆಗಳ ಮೂಲಕ ಹಾಗೂ ಪ್ರಮುಖ ಖಾಸಗಿ ವ್ಯಾಪಾರಿಗಳಿಗೂ ಮಾರಾಟ ಮಾಡುವ ಕೆಲವೊಂದು ದಂಧೆಗಳೂ ಇರುವ ಬಗ್ಗೆ ಗುಮಾನಿ ಇದೆ. ಹೀಗಾಗಿ ಅಡಿಕೆ ಬೆಳೆಗಾರರು ಕೂಡಾ ಈಗ ಎಚ್ಚರಿಕೆ ವಹಿಸಿ, ಅಂತಹ ಪ್ರಕರಣಗಳ ಸಂದೇಹ ಇದ್ದರೆ ಪ್ರತಿಭಟಿಸಬೇಕಾದ ಅಗತ್ಯ ಇದೆ. ಧಾರಣೆ ಸ್ಥಿರೀಕರಣಹಾಗೂ ಅಡಿಕೆ ಮಾರುಕಟ್ಟೆ ಉಳಿಸುವ ನಿಟ್ಟಿನಲ್ಲಿ ಈಗ ಬೆಳೆಗಾರರ ಪಾತ್ರವೂ ಮುಖ್ಯವಾಗಿದೆ. ಧಾರಣೆ ಕುಸಿತದ ಕಾರಣದಿಂದ ಒಮ್ಮೆಲೇ ಅಡಿಕೆಯನ್ನು ಮಾರುಕಟ್ಟೆ ಬಿಡದೇ ಇರುವುದು ಹಾಗೂ ಅಕ್ರಮಗಳ ಬಗ್ಗೆ ಗುಮಾನಿ ಇದ್ದರೆ ತಕ್ಷಣವೇ ಪ್ರತಿಭಟಿಸಬೇಕಾದ ಅಗತ್ಯವೂ ಇದೆ. ಹೀಗಾದರೆ ಮುಂದಿನ 15 ದಿನಗಳಲ್ಲಿ ಮತ್ತೆ ಅಡಿಕೆ ಮಾರುಕಟ್ಟೆ ಸ್ಥಿರತೆ ಕಂಡು ಏರಿಕೆ ಸಾಧ್ಯತೆ ಇದೆ. (ಅಡಿಕೆ ಧಾರಣೆ ಏನಾದೀತು ಎಂದು ರೂರಲ್‌ ಮಿರರ್‌ ಈ ತಿಂಗಳ ಆರಂಭದಲ್ಲಿ ಮಾಡಿರುವ ವರದಿ ಇಲ್ಲಿದೆ…)

ಈ ನಡುವೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾರುಕಟ್ಟೆಯಲ್ಲಿ ಕೊಂಚ ಪ್ರಮಾಣದಲ್ಲಿ  ಕುಸಿತ ಕಂಡಿದೆ. 57 ಸಾವಿರ ರೂ. ಗಡಿ ದಾಟಿದ್ದ ಅಡಿಕೆ ಧಾರಣೆ ಇದೀಗ ಕೊಂಚ ಕುಸಿತ ಕಂಡಿದೆ. ಕೆಲವು ಜಿಲ್ಲೆಗಳಲ್ಲಿ ಅಡಿಕೆ ಬೆಲೆ ಸ್ಥಿರತೆಯತ್ತ ಬಂದಿದೆ. ತುಮಕೂರಿನಲ್ಲಿ ಅಡಿಕೆ ಧಾರಣೆ 44,800 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

15 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

21 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago