Advertisement
MIRROR FOCUS

Arecanut Market | ಕಾಯಿರಿ, ಅಡಿಕೆ ಧಾರಣೆ ಸ್ಥಿರವಾಗುತ್ತದೆ…! | ಬರ್ಮಾ ಅಡಿಕೆಗೆ ಬೀಳಲಿ ಬ್ರೇಕ್..‌ | ಬೆಳೆಗಾರರೇ ಎಚ್ಚರ ವಹಿಸಿ…. |

Share

ಅಡಿಕೆ ಧಾರಣೆ ಏರಿಕೆಯಾಗುತ್ತದಾ…?. ಈ ಪ್ರಶ್ನೆ ಅನೇಕ ಬೆಳೆಗಾರರಲ್ಲಿದೆ. ಕಾಯಿರಿ, ಈಗ ಅಡಿಕೆ ಧಾರಣೆ ಇಳಿಕೆಯ ವೇಳೆ ಒಮ್ಮೆಲೇ ಅಡಿಕೆಯನ್ನು ಮಾರುಕಟ್ಟೆಗೆ ಬಿಡಬೇಡಿ. ಬರ್ಮಾ ಸೇರಿದಂತೆ ಕಳಪೆ ಅಡಿಕೆ ಮಾರುಕಟ್ಟೆ ಪ್ರವೇಶವಾಗದಂತೆ ಬೆಳೆಗಾರರೇ ಎಚ್ಚರ ವಹಿಸಿ. ಅಡಿಕೆ ಧಾರಣೆ ಮುಂದಿನ 15 ದಿನದಲ್ಲಿ ಮತ್ತೆ ಏರಿಕೆಯಾಗುತ್ತದೆ. ಇದೀಗ ಕಳೆದ ಎರಡು ದಿನಗಳಿಂದ ಅಡಿಕೆ ಮಾರುಕಟ್ಟೆ ಮತ್ತೆ ಕುಸಿತವಾಗುವುದು ನಿಂತಿದೆ.

ಚಾಲಿ ಅಡಿಕೆ ಧಾರಣೆ ಇಳಿಕೆಯ ಹಾದಿಗೆ ತಾತ್ಕಾಲಿಕ ಬ್ರೇಕ್‌ ಸಿಕ್ಕಿದೆ. ಹೊಸ ಚಾಲಿ ಅಡಿಕೆ ಏರಿಕೆಯ ಲಕ್ಷಣದಲ್ಲಿದೆ. ಹಳೆ ಅಡಿಕೆ ಧಾರಣೆ ಸದ್ಯ ಸ್ಥಿರತೆಯಲ್ಲಿದೆ. ಮಂಗಳೂರು ಮಾರುಕಟ್ಟೆಯಲ್ಲಿ ಹೊಸ ಅಡಿಕೆ 350-370 , ಹಳೆ ಅಡಿಕೆ 415-422 ಹಾಗೂ ಚೋಲ್‌ ಅಡಿಕೆ 455-462 ರೂಪಾಯಿಗೆ ಇದೆ.  ಕಳೆದ ಎರಡು ವಾರಗಳಿಂದ ಅಡಿಕೆ ಧಾರಣೆ ಇಳಿಕೆಯ ಹಾದಿಯಲ್ಲಿತ್ತು. ಇದೀಗ ಕಳೆದ ಎರಡು ದಿನಗಳಿಂದ ಸ್ಥಿರತೆಯ ಕಡೆಗೆ ಬಂದಿದೆ. ಧಾರಣೆ ಇಳಿಕೆಯ ಕಾರಣದಿಂದ ಅಡಿಕೆಯು ಮಾರುಕಟ್ಟೆ ಬರುವುದು ಕಡಿಮೆಯಾಗಿದೆ. ಹೀಗಾಗಿ ಸಹಜವಾಗಿಯೇ ಮಾರುಕಟ್ಟೆ ಕುಸಿತವೂ ನಿಲುಗಡೆಯಾಗಿದೆ. ಇದೇ ಟ್ರೆಂಡ್‌ ಮುಂದುವರಿದರೆ ಮುಂದಿನ 15 ದಿನಗಳಲ್ಲಿ ಮತ್ತೆ ಚಾಲಿ ಅಡಿಕೆ ಧಾರಣೆ ಏರಿಕೆ ಕಾಣಬಹುದು.

ಈ ನಡುವೆ ಬರ್ಮಾ ಅಡಿಕೆ ಗ್ರಾಮೀಣ ಭಾಗದವರೆಗೂ ಬಂದಿದೆ ಎಂಬ ಮಾಹಿತಿ ಇದೆ.  ಹೀಗಾಗಿ ಈ ಅಡಿಕೆಯು ಇಲ್ಲಿನ ಅಡಿಕೆ ಜೊತೆ ಸೇರಿ ಕ್ಯಾಂಪ್ಕೋ ಸಹಿತ ಇತರ ಸಹಕಾರಿ ಸಂಸ್ಥೆಗಳ ಮೂಲಕ ಹಾಗೂ ಪ್ರಮುಖ ಖಾಸಗಿ ವ್ಯಾಪಾರಿಗಳಿಗೂ ಮಾರಾಟ ಮಾಡುವ ಕೆಲವೊಂದು ದಂಧೆಗಳೂ ಇರುವ ಬಗ್ಗೆ ಗುಮಾನಿ ಇದೆ. ಹೀಗಾಗಿ ಅಡಿಕೆ ಬೆಳೆಗಾರರು ಕೂಡಾ ಈಗ ಎಚ್ಚರಿಕೆ ವಹಿಸಿ, ಅಂತಹ ಪ್ರಕರಣಗಳ ಸಂದೇಹ ಇದ್ದರೆ ಪ್ರತಿಭಟಿಸಬೇಕಾದ ಅಗತ್ಯ ಇದೆ. ಧಾರಣೆ ಸ್ಥಿರೀಕರಣಹಾಗೂ ಅಡಿಕೆ ಮಾರುಕಟ್ಟೆ ಉಳಿಸುವ ನಿಟ್ಟಿನಲ್ಲಿ ಈಗ ಬೆಳೆಗಾರರ ಪಾತ್ರವೂ ಮುಖ್ಯವಾಗಿದೆ. ಧಾರಣೆ ಕುಸಿತದ ಕಾರಣದಿಂದ ಒಮ್ಮೆಲೇ ಅಡಿಕೆಯನ್ನು ಮಾರುಕಟ್ಟೆ ಬಿಡದೇ ಇರುವುದು ಹಾಗೂ ಅಕ್ರಮಗಳ ಬಗ್ಗೆ ಗುಮಾನಿ ಇದ್ದರೆ ತಕ್ಷಣವೇ ಪ್ರತಿಭಟಿಸಬೇಕಾದ ಅಗತ್ಯವೂ ಇದೆ. ಹೀಗಾದರೆ ಮುಂದಿನ 15 ದಿನಗಳಲ್ಲಿ ಮತ್ತೆ ಅಡಿಕೆ ಮಾರುಕಟ್ಟೆ ಸ್ಥಿರತೆ ಕಂಡು ಏರಿಕೆ ಸಾಧ್ಯತೆ ಇದೆ. (ಅಡಿಕೆ ಧಾರಣೆ ಏನಾದೀತು ಎಂದು ರೂರಲ್‌ ಮಿರರ್‌ ಈ ತಿಂಗಳ ಆರಂಭದಲ್ಲಿ ಮಾಡಿರುವ ವರದಿ ಇಲ್ಲಿದೆ…)

ಈ ನಡುವೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾರುಕಟ್ಟೆಯಲ್ಲಿ ಕೊಂಚ ಪ್ರಮಾಣದಲ್ಲಿ  ಕುಸಿತ ಕಂಡಿದೆ. 57 ಸಾವಿರ ರೂ. ಗಡಿ ದಾಟಿದ್ದ ಅಡಿಕೆ ಧಾರಣೆ ಇದೀಗ ಕೊಂಚ ಕುಸಿತ ಕಂಡಿದೆ. ಕೆಲವು ಜಿಲ್ಲೆಗಳಲ್ಲಿ ಅಡಿಕೆ ಬೆಲೆ ಸ್ಥಿರತೆಯತ್ತ ಬಂದಿದೆ. ತುಮಕೂರಿನಲ್ಲಿ ಅಡಿಕೆ ಧಾರಣೆ 44,800 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

4 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

5 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

11 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

12 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

12 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

14 hours ago