Advertisement
ಸುದ್ದಿಗಳು

ಭಾರತ ಹಾಗೂ ಅಮೇರಿಕ ನಡುವಿನ ವ್ಯಾಪಾರ ಒಪ್ಪಂದ ಅಂತಿಮ ಪ್ರಸ್ತಾಪವೇನು?

Share

ಈಗಾಗಲೇ ಭಾರತದ ಹಾಗೂ ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಭಾರತವು ತನ್ನ ಅಂತಿಮ ಪ್ರಸ್ತಾಪವನ್ನು ಅಮೆರಿಕದ ಮುಂದಿಟ್ಟಿದೆ.
ರಷ್ಯನ್ ತೈಲವನ್ನು ಖರೀದಿಸುತ್ತಿರುವುದಕ್ಕೆ ಶಿಕ್ಷೆಯಾಗಿ ಭಾರತದ ಮೇಲೆ ಅಮೇರಿಕ ಶೇ.25ರಷ್ಟು ಹೆಚ್ಚು ಹಾಕುತ್ತಿದೆ. ಇದನ್ನು ತೆಗೆದುಹಾಕುವಂತೆ ಭಾರತವು ತನ್ನ ಟ್ರೇಡ್ ಡೀಲ್ ಪ್ರಸ್ತಾಪದಲ್ಲಿ ಕೋರಿಕೊಂಡಿದೆ. ದಂಡ ರೂಪದ ಶೇ.25 ಸುಂಕವೂ ಸೇರಿದಂತೆ ಒಟ್ಟು ಶೇ.50ರಷ್ಟು ಸುಂಕವನ್ನು ಅಮೇರಿಕ ಹಾಕುತ್ತಿದೆ. ಇದನ್ನು ಶೇ.15ಕ್ಕೆ ಇಳಿಸಬೇಕೆಂದು ಭಾರತ ಬೇಡಿಕೆ ಇರಿಸಿರುವುದು ತಿಳಿದುಬಂದಿದೆ.

ಇದರೊಂದಿಗೆ ಕೋಟ್ಯಂತರ ಭಾರತೀಯ ರೈತರನ್ನು ರಕ್ಷಿಸುವ ದೃಷ್ಟಿಯಿಂದ ಅಮೆರಿಕದ ಡೈರಿ ಉತ್ಪನ್ನಗಳ ಹಾಗೂ ಕುಲಾಂತರಿ ಬೆಳೆ ಉತ್ಪನ್ನಗಳು ಭಾರತಕ್ಕೆ ಬೇಡ ಎಂದು ಸರ್ಕಾರ ಗಟ್ಟಿ ನಿಲುವು ತೆಗೆದುಕೊಂಡಿದೆ. ಆದರೆ ಈ ಪ್ರಸ್ತಾಪಕ್ಕೆ ಅಮೇರಿಕದಿಂದ ಇನ್ನೂ ಪತ್ರಿಕ್ರಿಯೆ ಸಿಕ್ಕಿಲ್ಲ.  ಎರಡೂ ದೇಶಗಳ ನಡುವೆ ಸುದೀರ್ಘ ಕಾಲದಿಂದ ಒಪ್ಪಂದಕ್ಕಾಗಿ ಮಾತುಕತೆಗಳು ನಡೆಯುತ್ತಿವೆಯಾದರೂ ಕೃಷಿ ಉತ್ಪನ್ನಗಳ ವಿಚಾರವು ಪ್ರಮುಖ ತೊಡಕಾಗಿದೆ. ಭಾರತ ಈಗ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿರುವ ಹಿನ್ನಲೆಯಲ್ಲಿ ಅಮೆರಿಕ ಮುಂದಿನ ನಡೆ ಏನು ಎಂಬುದು ನೋಡಬೇಕು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…

55 minutes ago

ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…

1 hour ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

22 hours ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

23 hours ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

23 hours ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

1 day ago