ಮಾಹಿತಿ

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ(Richest man). ಹಾಗೆ ಮುಕೇಶ್ ಅಂಬಾನಿ, ವಿಶ್ವದ ಅಗ್ರ ಧನಿಕರ ಪಟ್ಟಿಯಲ್ಲಿ 11ನೇ ಶ್ರೀಮಂತ ವ್ಯಕ್ತಿ ಕೂಡ ಹೌದು. ಬಿಡುಗಡೆಯಾದ ವರದಿವೊಂದರ ಪ್ರಕಾರ 106 ಬಿಲಿಯನ್ ಡಾಲರ್ (ಭಾರತೀಯ ಕರೆನ್ಸಿಯಲ್ಲಿ ಸರಿಸುಮಾರು ರೂ. 9,15,405 ಕೋಟಿ) ಸಂಪತ್ತು ಹೊಂದಿರುವ ಅಂಬಾನಿ, ದಿನವೊಂದರ ಗಳಿಕೆ ಎಷ್ಟು ಗೊತ್ತಾ?

Advertisement

ಗಂಟೆಗೆ 90 ಕೋಟಿ ರೂ. ಗಳಿಕೆ..!: 2020ರಲ್ಲಿ IIFL ವೆಲ್ತ್ ಹುರುನ್ ಇಂಡಿಯಾ ಸಂಸ್ಥೆಯು ಬಿಡುಗಡೆ ಮಾಡಿರುವ ವರದಿ ಪ್ರಕಾರ ಮುಖೇಶ್ ಅಂಬಾನಿ ಅವರ ಪ್ರತಿ ಗಂಟೆಯ ಗಳಿಕೆ ಸರಿಸುಮಾರು 90 ಕೋಟಿ ರೂ. ಅಂತೆ. ಆಕ್ಸ್‌ ಫ್ಯಾಮ್ ವರದಿ ಕೂಡ ಇದೇ ಅಂಕಿ – ಅಂಶವನ್ನು ಉಲ್ಲೇಖಿಸಿದೆ. ಲಾಕ್​ಡೌನ್​ ಹಾಗೂ ಕೊರೊನಾದಂತಹ ಸಂದಿಗ್ಧ ಸಮಯದಲ್ಲೂ ಇದೇ ರೀತಿಯ ಆರ್ಥಿಕ ಸ್ಥಿತಿಗತಿ ಹೊಂದಿದ್ದರು ಅನ್ನೋದು ಇಲ್ಲಿ ಗಮನಿಸಬೇಕಾದ ಸಂಗತಿ. ಆದರೆ, ಮತ್ತೊಂದು ವರದಿ ಪ್ರಕಾರ ದೇಶದ ಶೇ.24 ರಷ್ಟು ಜನರ ತಿಂಗಳ ಗಳಿಕೆ ಕೇವಲ 3000 ರೂ. ಮಾತ್ರವಂತೆ!.

ನಾವು ಸಹ ಗಳಿಸಬಹುದೇ?: ಅಂಕಿ – ಅಂಶಗಳ ಪ್ರಕಾರ, ಒಂದು ಗಂಟೆಯಲ್ಲಿ ಅಂಬಾನಿ ಗಳಿಸುವಷ್ಟು ಹಣವನ್ನು ಗಳಿಸಲು ಒಬ್ಬ ಸರಾಸರಿ ಭಾರತೀಯನಿಗೆ ಕನಿಷ್ಠ 17.4 ಮಿಲಿಯನ್ ವರ್ಷಗಳು ಬೇಕಂತೆ!. ವಿವರಿಸಿ ಹೇಳುವುದಾದರೆ, ವಾರ್ಷಿಕ 4 ಲಕ್ಷ ರೂ. (ತಿಂಗಳಿಗೆ ಸರಿಸುಮಾರು ರೂ.33 ಸಾವಿರ) ಗಳಿಸುವ ಓರ್ವ ವ್ಯಕ್ತಿ, 90 ಕೋಟಿ ರೂ. ಗಳಿಸಲು ಸುಮಾರು 1.74 ಕೋಟಿ ವರ್ಷಗಳೇ ಬೇಕಂತೆ!. ಮನುಷ್ಯ 100 ವರ್ಷಗಳ ಕಾಲ ಬದುಕುವುದೇ ವಿರಳ. ಲಕ್ಷಾಂತರ ವರ್ಷಗಳ ಕಾಲ ದುಡಿದು ಯಾರಾದರೂ ಹಾಗೆ ಹಣ ಗಳಿಸಲು ಸಾಧ್ಯವೇ? ಇನ್ನೂ ಸರಳವಾಗಿ ಹೇಳಬೇಕಂದರೆ, ಅಂಬಾನಿ ಓರ್ವ ಸಾಮಾನ್ಯ ವ್ಯಕ್ತಿ ತನ್ನ ಕನಸಿನಲ್ಲಿಯೂ ಕಾಣದಷ್ಟು ಹಣವನ್ನು ಗಳಿಸುತ್ತಾರೆ. ಅಷ್ಟು ಸಂಪತ್ತು ಸಹ ಅವರ ಬಳಿ ಇದೆ.

ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?: ರಿಲಯನ್ಸ್ ಇಂಡಸ್ಟ್ರೀಸ್​ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ಮುಕೇಶ್ ಅಂಬಾನಿ ತಮ್ಮ ವಾರ್ಷಿಕ ವೇತನದ ಬಗ್ಗೆ ಹೇಳಿಕೊಂಡಿದ್ದಾರೆ. ತಮ್ಮ ವಾರ್ಷಿಕ ವೇತನವನ್ನು 15 ಕೋಟಿ ರೂ.ಗೆ ಸೀಮಿತಗೊಳಿಸಿಕೊಂಡಿರುವುದಾಗಿ ಅವರೇ ಈ ಹಿಂದೆ ಹೇಳಿಕೊಂಡಿದ್ದನ್ನು ಇಲ್ಲಿ ಗಮನಿಸಬಹುದು.

Advertisement
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

3 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

9 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

10 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

10 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

20 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago