Advertisement
ಮಾಹಿತಿ

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

Share

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ(Richest man). ಹಾಗೆ ಮುಕೇಶ್ ಅಂಬಾನಿ, ವಿಶ್ವದ ಅಗ್ರ ಧನಿಕರ ಪಟ್ಟಿಯಲ್ಲಿ 11ನೇ ಶ್ರೀಮಂತ ವ್ಯಕ್ತಿ ಕೂಡ ಹೌದು. ಬಿಡುಗಡೆಯಾದ ವರದಿವೊಂದರ ಪ್ರಕಾರ 106 ಬಿಲಿಯನ್ ಡಾಲರ್ (ಭಾರತೀಯ ಕರೆನ್ಸಿಯಲ್ಲಿ ಸರಿಸುಮಾರು ರೂ. 9,15,405 ಕೋಟಿ) ಸಂಪತ್ತು ಹೊಂದಿರುವ ಅಂಬಾನಿ, ದಿನವೊಂದರ ಗಳಿಕೆ ಎಷ್ಟು ಗೊತ್ತಾ?

ಗಂಟೆಗೆ 90 ಕೋಟಿ ರೂ. ಗಳಿಕೆ..!: 2020ರಲ್ಲಿ IIFL ವೆಲ್ತ್ ಹುರುನ್ ಇಂಡಿಯಾ ಸಂಸ್ಥೆಯು ಬಿಡುಗಡೆ ಮಾಡಿರುವ ವರದಿ ಪ್ರಕಾರ ಮುಖೇಶ್ ಅಂಬಾನಿ ಅವರ ಪ್ರತಿ ಗಂಟೆಯ ಗಳಿಕೆ ಸರಿಸುಮಾರು 90 ಕೋಟಿ ರೂ. ಅಂತೆ. ಆಕ್ಸ್‌ ಫ್ಯಾಮ್ ವರದಿ ಕೂಡ ಇದೇ ಅಂಕಿ – ಅಂಶವನ್ನು ಉಲ್ಲೇಖಿಸಿದೆ. ಲಾಕ್​ಡೌನ್​ ಹಾಗೂ ಕೊರೊನಾದಂತಹ ಸಂದಿಗ್ಧ ಸಮಯದಲ್ಲೂ ಇದೇ ರೀತಿಯ ಆರ್ಥಿಕ ಸ್ಥಿತಿಗತಿ ಹೊಂದಿದ್ದರು ಅನ್ನೋದು ಇಲ್ಲಿ ಗಮನಿಸಬೇಕಾದ ಸಂಗತಿ. ಆದರೆ, ಮತ್ತೊಂದು ವರದಿ ಪ್ರಕಾರ ದೇಶದ ಶೇ.24 ರಷ್ಟು ಜನರ ತಿಂಗಳ ಗಳಿಕೆ ಕೇವಲ 3000 ರೂ. ಮಾತ್ರವಂತೆ!.

ನಾವು ಸಹ ಗಳಿಸಬಹುದೇ?: ಅಂಕಿ – ಅಂಶಗಳ ಪ್ರಕಾರ, ಒಂದು ಗಂಟೆಯಲ್ಲಿ ಅಂಬಾನಿ ಗಳಿಸುವಷ್ಟು ಹಣವನ್ನು ಗಳಿಸಲು ಒಬ್ಬ ಸರಾಸರಿ ಭಾರತೀಯನಿಗೆ ಕನಿಷ್ಠ 17.4 ಮಿಲಿಯನ್ ವರ್ಷಗಳು ಬೇಕಂತೆ!. ವಿವರಿಸಿ ಹೇಳುವುದಾದರೆ, ವಾರ್ಷಿಕ 4 ಲಕ್ಷ ರೂ. (ತಿಂಗಳಿಗೆ ಸರಿಸುಮಾರು ರೂ.33 ಸಾವಿರ) ಗಳಿಸುವ ಓರ್ವ ವ್ಯಕ್ತಿ, 90 ಕೋಟಿ ರೂ. ಗಳಿಸಲು ಸುಮಾರು 1.74 ಕೋಟಿ ವರ್ಷಗಳೇ ಬೇಕಂತೆ!. ಮನುಷ್ಯ 100 ವರ್ಷಗಳ ಕಾಲ ಬದುಕುವುದೇ ವಿರಳ. ಲಕ್ಷಾಂತರ ವರ್ಷಗಳ ಕಾಲ ದುಡಿದು ಯಾರಾದರೂ ಹಾಗೆ ಹಣ ಗಳಿಸಲು ಸಾಧ್ಯವೇ? ಇನ್ನೂ ಸರಳವಾಗಿ ಹೇಳಬೇಕಂದರೆ, ಅಂಬಾನಿ ಓರ್ವ ಸಾಮಾನ್ಯ ವ್ಯಕ್ತಿ ತನ್ನ ಕನಸಿನಲ್ಲಿಯೂ ಕಾಣದಷ್ಟು ಹಣವನ್ನು ಗಳಿಸುತ್ತಾರೆ. ಅಷ್ಟು ಸಂಪತ್ತು ಸಹ ಅವರ ಬಳಿ ಇದೆ.

ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?: ರಿಲಯನ್ಸ್ ಇಂಡಸ್ಟ್ರೀಸ್​ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ಮುಕೇಶ್ ಅಂಬಾನಿ ತಮ್ಮ ವಾರ್ಷಿಕ ವೇತನದ ಬಗ್ಗೆ ಹೇಳಿಕೊಂಡಿದ್ದಾರೆ. ತಮ್ಮ ವಾರ್ಷಿಕ ವೇತನವನ್ನು 15 ಕೋಟಿ ರೂ.ಗೆ ಸೀಮಿತಗೊಳಿಸಿಕೊಂಡಿರುವುದಾಗಿ ಅವರೇ ಈ ಹಿಂದೆ ಹೇಳಿಕೊಂಡಿದ್ದನ್ನು ಇಲ್ಲಿ ಗಮನಿಸಬಹುದು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

16 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

16 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

18 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

19 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago