ವಿಶೇಷ ವರದಿಗಳು

ಭೂಕಂಪನ-ಜಲಸ್ಫೋಟ-ಭೂಕುಸಿತ| ಸಂಪಾಜೆ-ಕಲ್ಮಕಾರು ಪ್ರದೇಶದಲ್ಲಿ ಮಳೆ ಬಂದಾಗ ಭಯ | ಜಲಸ್ಫೋಟಕ್ಕೆ ಕಾರಣವೇನು ? ಆಡಳಿತ ನೋಡಲೇಬೇಕಿದೆ |

Share

ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಈಗ ಭಯದ ವಾತಾವರಣ ಉಂಟಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ  ಸಂಪಾಜೆ, ದೇವರಕೊಲ್ಲಿ, ಕೊಯನಾಡು ಪ್ರದೇಶ ಹಾಗೂ ಕಲ್ಮಕಾರು, ಕೊಲ್ಲಮೊಗ್ರ ಪ್ರದೇಶದಲ್ಲಿ ಜಲಸ್ಫೋಟ ಅಥವಾ ಮೇಘಸ್ಫೋಟಗೊಂಡು ಭಾರೀ ಮಳೆಯ ಜೊತೆಗೆ ಭೂಕುಸಿತ ಉಂಟಾಗುತ್ತಿದೆ. ತಪ್ಪಲು ಪ್ರದೇಶದ ಕೃಷಿ ಭೂಮಿ ಸರ್ವನಾಶವಾಗುತ್ತಿದೆ. ಹೀಗಾಗಿ ಮಳೆ ಆರಂಭವಾದಾಗ ಈ ಭಾಗದ ಜನರಿಗೆ ಭಯ ಉಂಟಾಗುತ್ತಿದೆ.

Advertisement

ಕಳೆದ ತಿಂಗಳ ಸುಮಾರು 10 ಕ್ಕೂ ಅಧಿಕ ಬಾರಿ ಸಂಪಾಜೆ ಪ್ರದೇಶದಲ್ಲಿ ಹಾಗೂ ಒಂದೆರಡು ಬಾರಿ ಕಲ್ಮಕಾರು, ಕಡಮಕಲ್‌ ಪ್ರದೇಶದಲ್ಲಿ ಭೂಕಂಪನ ಉಂಟಾಗಿತ್ತು. ಆ ಸಂದರ್ಭ ಚೆಂಬು, ಸಂಪಾಜೆ, ದೇವರಕೊಲ್ಲಿ, ಕಲ್ಲುಗುಂಡಿ ಮೊದಲಾದ ಪ್ರದೇಶಗಳಲ್ಲಿ ಭಾರೀ ಸದ್ದಿನೊಂದಿಗೆ ಭೂಕಂಪನ ಉಂಟಾಗುತ್ತಿತ್ತು. ನಿರಂತರ ಕಂಪನದ ಬಳಿಕ ಚೆಂಬು ಪ್ರದೇಶದಲ್ಲಿಯೇ ರಿಕ್ಟರ್‌ ಮಾಪನವನ್ನು ಇರಿಸಲಾಗಿತ್ತು. ಅದಾಗಿ ಅನೇಕ ದಿನಗಳಾದರೂ ಭೂಕಂಪನಕ್ಕೆ ಕಾರಣ ತಿಳಿಯಲಿಲ್ಲ. ಒಬ್ಬೊಬ್ಬರು ಒಂದೊಂದು ಕಾರಣ ಹೇಳಿದರು. 2018 ರಲ್ಲೂ ಇದೇ ಮಾದರಿಯಲ್ಲಿ ಕಂಪನವಾಗಿತ್ತು. ಆ ಕಂಪನಕ್ಕೂ ಕಾರಣ ತಿಳಿಯಲಿಲ್ಲ.

ಇದೀಗ ಭೂಕಂಪನದ ನಂತರ ಭೂಕುಸಿತ, ಜಲಸ್ಫೋಟ, ಮೇಘಸ್ಫೋಟಗೊಳ್ಳುತ್ತಿದೆ. ಒಮ್ಮೆಲೇ ಸಂಜೆಯ ಹೊತ್ತಿಗೆ ಅಥವಾ ರಾತ್ರಿ ಭಾರೀ ಮಳೆಯಾಗುತ್ತದೆ. ಭಾರೀ ಸದ್ದಿನೊಂಡಿದೆ ಗುಡ್ಡ ಕುಸಿತವಾಗುತ್ತದೆ, ಕೆಸರು ಮಿಶ್ರಿತ ಭಾರೀ ನೀರು ಹಾಗೂ ಮರ ನೀರಿನ ಜೊತೆಗೆ ಬರುತ್ತಾ ಕೃಷಿ ಭೂಮಿ , ಮನೆ ನಾಶವಾಗುತ್ತಿದೆ. ಈಗಾಗಲೇ ಸಂಪಾಜೆ, ಕಲ್ಲುಗುಂಡಿ, ದೇವರಕೊಲ್ಲಿ, ಚೆಂಬು, ದಬ್ಬಡ್ಕ ಮೊದಲಾದ ಕಡೆಗಳಲ್ಲಿ ಇದೇ ಮಾದರಿಯ ಕುಸಿತವಾಗಿದೆ. ಜಲಸ್ಫೋಟವಾಗಿದೆ. ಕೃಷಿ ಹಾನಿಯೂ ಆಗಿದೆ. ಕಲ್ಮಕಾರು , ಕೊಲ್ಲಮೊಗ್ರ ಪ್ರದೇಶದಲ್ಲಿ ಕೃಷಿ ಹಾನಿ ಅಧಿಕವಾಗಿದೆ. ಕಡಮಕಲ್‌ ಪ್ರದೇಶದಲ್ಲಿ ಸುರಿಯುವ ಭಾರೀ ಮಲೆ ಹಾಗೂ ಗುಡ್ಡ ಕುಸಿತದ ಜೊತೆಗೆ ಮರ, ಕೆಸರು ನೀರು, ಭಾರೀ ನೀರು ಹರಿಯುತ್ತದೆ. ಇದರಿಂದ ಕೃಷಿ, ಸೇತುವೆ ಎಲ್ಲವೂ ಕೊಚ್ಚಿ ಹೋಗುತ್ತಿದೆ. ಒಂದು ತಿಂಗಳಲ್ಲಿ ಎರಡನೇ ಬಾರಿ ಜಲಸ್ಫೋಟವಾಗಿದೆ. ಅನೇಕರ ಕೃಷಿ ನಾಶವಾಗಿದೆ.

ಈ ಮಾದರಿಯಲ್ಲಿ ಅದರಲ್ಲೂ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಕುಸಿತ, ಕಂಪನವಾಗಲು ಏನು ಕಾರಣ ಎಂಬುದು ಪ್ರಶ್ನೆಯಾಗಿದೆ. ಈ ಬಗ್ಗೆ ತಕ್ಷಣವೇ ಅಧ್ಯಯನದ ಅಗತ್ಯವಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೃಷಿಕರು ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದ ಜನರು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಅರಿವನ್ನು ಆಡಳಿತವು ನೀಡಬೇಕಿದೆ.

Advertisement


ಈ ಅನಾಹುತಗಳು ವಿಪರೀತ ಅಭಿವೃದ್ಧಿಯ ಕಾರಣದಿಂದ ಎಂಬ ಕಾರಣವನ್ನು ಕೆಲವರು ಮುಂದಿಟ್ಟರೆ ಭೂಕಂಪನದ ಕಾರಣದಿಂದ ಪಶ್ಚಿಮ ಘಟ್ಟದ ಹಲವು ಕಡೆ ಭೂಮಿ ಬಿರುಕು ಬಿಟ್ಟಿದ್ದು, ಮಳೆಯಾದ ತಕ್ಷಣವೇ ಭೂಮಿಯೊಳಗೆ ನೀರು ಸೇರಿ ಈಗ ಮಣ್ಣು ಸಡಿಲವಾಗಿ ಭೂಕುಸಿತವಾಗುತ್ತದೆ ಎನ್ನುವುದು  ಇನ್ನೊಂದು ವಾದ.  ಅರಣ್ಯ ನಾಶದಿಂದ ಹವಾಮಾನದ ಏರುಪೇರಿನಿಂದ ಎಂಬುದು ಇನ್ನೊಂದು ವಾದ. ಎತ್ತಿನಹೊಳೆಯ ಸಹಿತ ಇತರ ಅಣೆಕಟ್ಟುಗಳ ಕಾರಣದಿಂದ ನೀರಿನ ಒತ್ತಡ ಹೆಚ್ಚಾಗಿದೆ, ಇದೇ ವೇಳೆ ಭಾರೀ ಮಳೆಯ ಕಾರಣದಿಂದ ಮಣ್ಣು ಸಡಿಲಗೊಂಡು ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲೂ ನೀರಿನ ಮಟ್ಟ ಹೆಚ್ಚಾಗಿ ಮಣ್ಣು ಮತ್ತಷ್ಟು ಸಡಿಲವಾಗಿ ಈಗ ಭೂಕುಸಿತವಾಗುತ್ತದೆ ಎಂಬುದು ಮತ್ತೊಂದು ವಾದ.

ಆದರೆ ಈ ಭೂಕುಸಿತಕ್ಕೆ ಸರಿಯಾದ ಕಾರಣಗಳನ್ನು ಹುಡುಕಲು ಮತ್ತು ಭವಿಷ್ಯದಲ್ಲಿ ಆಗಬಹುದಾದ ಅನಾಹುತಗಳನ್ನು ತಪ್ಪಿಸಲು ಆಡಳಿತವು ಇಲ್ಲಿ ಸರಿಯಾದ ಅಧ್ಯಯನ ನಡೆಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂಬ ಒತ್ತಾಯಗಳು ಈಗ ಆರಂಭವಾಗಿದೆ.

 

Advertisement

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಇಳಿಮುಖ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ…

4 hours ago

ವಿದ್ಯಾರ್ಥಿಗಳ ಓದಿನ ವಿಷಯದ ಆಯ್ಕೆ ಹೇಗಿರಬೇಕು..?

ಹಲವಾರು ವಿದ್ಯಾರ್ಥಿಗಳಿಗೆ, ಪೋಷಕರಿಗೆ ತಮ್ಮ ಮಕ್ಕಳು ಎಸ್‌ಎಸ್‌ ಎಲ್‌ಸಿ , ಪಿಯುಸಿ ಆದ…

4 hours ago

ರೈತರು ಗಮನಿಸಿ | ಭತ್ತದ ಬೆಳೆಗೆ ಫಸಲ್‌ ಭಿಮಾ ಯೋಜನೆ ವಿಮಾ ಪ್ರೀಮಿಯಂ ಪಾವತಿ ಪ್ರಾರಂಭ

ಭತ್ತದ ಬೆಳೆ ಬೆಳೆಯುವ ರೈತರಿಗೆ ಪ್ರಧಾನಮಂತ್ರಿ ಫಸಲ್‌ ಭಿಮಾ ಯೋಜನೆಯ ವಿಮಾ ಪ್ರೀಮಿಯಂ…

5 hours ago

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ…

5 hours ago

ಪ್ಲೈಓವರ್‌ ನಿರ್ಮಾಣದ ಬಳಿಕ ಹೇಗಿದೆ ಕಲ್ಲಡ್ಕ..?

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್‌ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ…

5 hours ago

ಗೇರು ವಾಣಿಜ್ಯ ಬೆಳೆ ಗ್ರಾಮೀಣ ಭಾಗದ ರೈತರ ಮೂಲಸಂಪತ್ತು

‌ ಗೇರು ಒಂದು ವಾಣಿಜ್ಯ ಬೆಳೆಯಾಗಿದ್ದು ಇದು ಗ್ರಾಮೀಣ ಭಾಗದ ರೈತರ ಮೂಲಸಂಪತ್ತು.…

6 hours ago