Advertisement
ವಿಶೇಷ ವರದಿಗಳು

ಭೂಕಂಪನ-ಜಲಸ್ಫೋಟ-ಭೂಕುಸಿತ| ಸಂಪಾಜೆ-ಕಲ್ಮಕಾರು ಪ್ರದೇಶದಲ್ಲಿ ಮಳೆ ಬಂದಾಗ ಭಯ | ಜಲಸ್ಫೋಟಕ್ಕೆ ಕಾರಣವೇನು ? ಆಡಳಿತ ನೋಡಲೇಬೇಕಿದೆ |

Share

ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಈಗ ಭಯದ ವಾತಾವರಣ ಉಂಟಾಗುತ್ತಿದೆ. ಕಳೆದ ಒಂದು ತಿಂಗಳಲ್ಲಿ  ಸಂಪಾಜೆ, ದೇವರಕೊಲ್ಲಿ, ಕೊಯನಾಡು ಪ್ರದೇಶ ಹಾಗೂ ಕಲ್ಮಕಾರು, ಕೊಲ್ಲಮೊಗ್ರ ಪ್ರದೇಶದಲ್ಲಿ ಜಲಸ್ಫೋಟ ಅಥವಾ ಮೇಘಸ್ಫೋಟಗೊಂಡು ಭಾರೀ ಮಳೆಯ ಜೊತೆಗೆ ಭೂಕುಸಿತ ಉಂಟಾಗುತ್ತಿದೆ. ತಪ್ಪಲು ಪ್ರದೇಶದ ಕೃಷಿ ಭೂಮಿ ಸರ್ವನಾಶವಾಗುತ್ತಿದೆ. ಹೀಗಾಗಿ ಮಳೆ ಆರಂಭವಾದಾಗ ಈ ಭಾಗದ ಜನರಿಗೆ ಭಯ ಉಂಟಾಗುತ್ತಿದೆ.

ಕಳೆದ ತಿಂಗಳ ಸುಮಾರು 10 ಕ್ಕೂ ಅಧಿಕ ಬಾರಿ ಸಂಪಾಜೆ ಪ್ರದೇಶದಲ್ಲಿ ಹಾಗೂ ಒಂದೆರಡು ಬಾರಿ ಕಲ್ಮಕಾರು, ಕಡಮಕಲ್‌ ಪ್ರದೇಶದಲ್ಲಿ ಭೂಕಂಪನ ಉಂಟಾಗಿತ್ತು. ಆ ಸಂದರ್ಭ ಚೆಂಬು, ಸಂಪಾಜೆ, ದೇವರಕೊಲ್ಲಿ, ಕಲ್ಲುಗುಂಡಿ ಮೊದಲಾದ ಪ್ರದೇಶಗಳಲ್ಲಿ ಭಾರೀ ಸದ್ದಿನೊಂದಿಗೆ ಭೂಕಂಪನ ಉಂಟಾಗುತ್ತಿತ್ತು. ನಿರಂತರ ಕಂಪನದ ಬಳಿಕ ಚೆಂಬು ಪ್ರದೇಶದಲ್ಲಿಯೇ ರಿಕ್ಟರ್‌ ಮಾಪನವನ್ನು ಇರಿಸಲಾಗಿತ್ತು. ಅದಾಗಿ ಅನೇಕ ದಿನಗಳಾದರೂ ಭೂಕಂಪನಕ್ಕೆ ಕಾರಣ ತಿಳಿಯಲಿಲ್ಲ. ಒಬ್ಬೊಬ್ಬರು ಒಂದೊಂದು ಕಾರಣ ಹೇಳಿದರು. 2018 ರಲ್ಲೂ ಇದೇ ಮಾದರಿಯಲ್ಲಿ ಕಂಪನವಾಗಿತ್ತು. ಆ ಕಂಪನಕ್ಕೂ ಕಾರಣ ತಿಳಿಯಲಿಲ್ಲ.

ಇದೀಗ ಭೂಕಂಪನದ ನಂತರ ಭೂಕುಸಿತ, ಜಲಸ್ಫೋಟ, ಮೇಘಸ್ಫೋಟಗೊಳ್ಳುತ್ತಿದೆ. ಒಮ್ಮೆಲೇ ಸಂಜೆಯ ಹೊತ್ತಿಗೆ ಅಥವಾ ರಾತ್ರಿ ಭಾರೀ ಮಳೆಯಾಗುತ್ತದೆ. ಭಾರೀ ಸದ್ದಿನೊಂಡಿದೆ ಗುಡ್ಡ ಕುಸಿತವಾಗುತ್ತದೆ, ಕೆಸರು ಮಿಶ್ರಿತ ಭಾರೀ ನೀರು ಹಾಗೂ ಮರ ನೀರಿನ ಜೊತೆಗೆ ಬರುತ್ತಾ ಕೃಷಿ ಭೂಮಿ , ಮನೆ ನಾಶವಾಗುತ್ತಿದೆ. ಈಗಾಗಲೇ ಸಂಪಾಜೆ, ಕಲ್ಲುಗುಂಡಿ, ದೇವರಕೊಲ್ಲಿ, ಚೆಂಬು, ದಬ್ಬಡ್ಕ ಮೊದಲಾದ ಕಡೆಗಳಲ್ಲಿ ಇದೇ ಮಾದರಿಯ ಕುಸಿತವಾಗಿದೆ. ಜಲಸ್ಫೋಟವಾಗಿದೆ. ಕೃಷಿ ಹಾನಿಯೂ ಆಗಿದೆ. ಕಲ್ಮಕಾರು , ಕೊಲ್ಲಮೊಗ್ರ ಪ್ರದೇಶದಲ್ಲಿ ಕೃಷಿ ಹಾನಿ ಅಧಿಕವಾಗಿದೆ. ಕಡಮಕಲ್‌ ಪ್ರದೇಶದಲ್ಲಿ ಸುರಿಯುವ ಭಾರೀ ಮಲೆ ಹಾಗೂ ಗುಡ್ಡ ಕುಸಿತದ ಜೊತೆಗೆ ಮರ, ಕೆಸರು ನೀರು, ಭಾರೀ ನೀರು ಹರಿಯುತ್ತದೆ. ಇದರಿಂದ ಕೃಷಿ, ಸೇತುವೆ ಎಲ್ಲವೂ ಕೊಚ್ಚಿ ಹೋಗುತ್ತಿದೆ. ಒಂದು ತಿಂಗಳಲ್ಲಿ ಎರಡನೇ ಬಾರಿ ಜಲಸ್ಫೋಟವಾಗಿದೆ. ಅನೇಕರ ಕೃಷಿ ನಾಶವಾಗಿದೆ.

ಈ ಮಾದರಿಯಲ್ಲಿ ಅದರಲ್ಲೂ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಕುಸಿತ, ಕಂಪನವಾಗಲು ಏನು ಕಾರಣ ಎಂಬುದು ಪ್ರಶ್ನೆಯಾಗಿದೆ. ಈ ಬಗ್ಗೆ ತಕ್ಷಣವೇ ಅಧ್ಯಯನದ ಅಗತ್ಯವಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೃಷಿಕರು ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದ ಜನರು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಅರಿವನ್ನು ಆಡಳಿತವು ನೀಡಬೇಕಿದೆ.


ಈ ಅನಾಹುತಗಳು ವಿಪರೀತ ಅಭಿವೃದ್ಧಿಯ ಕಾರಣದಿಂದ ಎಂಬ ಕಾರಣವನ್ನು ಕೆಲವರು ಮುಂದಿಟ್ಟರೆ ಭೂಕಂಪನದ ಕಾರಣದಿಂದ ಪಶ್ಚಿಮ ಘಟ್ಟದ ಹಲವು ಕಡೆ ಭೂಮಿ ಬಿರುಕು ಬಿಟ್ಟಿದ್ದು, ಮಳೆಯಾದ ತಕ್ಷಣವೇ ಭೂಮಿಯೊಳಗೆ ನೀರು ಸೇರಿ ಈಗ ಮಣ್ಣು ಸಡಿಲವಾಗಿ ಭೂಕುಸಿತವಾಗುತ್ತದೆ ಎನ್ನುವುದು  ಇನ್ನೊಂದು ವಾದ.  ಅರಣ್ಯ ನಾಶದಿಂದ ಹವಾಮಾನದ ಏರುಪೇರಿನಿಂದ ಎಂಬುದು ಇನ್ನೊಂದು ವಾದ. ಎತ್ತಿನಹೊಳೆಯ ಸಹಿತ ಇತರ ಅಣೆಕಟ್ಟುಗಳ ಕಾರಣದಿಂದ ನೀರಿನ ಒತ್ತಡ ಹೆಚ್ಚಾಗಿದೆ, ಇದೇ ವೇಳೆ ಭಾರೀ ಮಳೆಯ ಕಾರಣದಿಂದ ಮಣ್ಣು ಸಡಿಲಗೊಂಡು ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲೂ ನೀರಿನ ಮಟ್ಟ ಹೆಚ್ಚಾಗಿ ಮಣ್ಣು ಮತ್ತಷ್ಟು ಸಡಿಲವಾಗಿ ಈಗ ಭೂಕುಸಿತವಾಗುತ್ತದೆ ಎಂಬುದು ಮತ್ತೊಂದು ವಾದ.

ಆದರೆ ಈ ಭೂಕುಸಿತಕ್ಕೆ ಸರಿಯಾದ ಕಾರಣಗಳನ್ನು ಹುಡುಕಲು ಮತ್ತು ಭವಿಷ್ಯದಲ್ಲಿ ಆಗಬಹುದಾದ ಅನಾಹುತಗಳನ್ನು ತಪ್ಪಿಸಲು ಆಡಳಿತವು ಇಲ್ಲಿ ಸರಿಯಾದ ಅಧ್ಯಯನ ನಡೆಸಲು ಸೂಕ್ತ ಕ್ರಮಕೈಗೊಳ್ಳಬೇಕು ಎಂಬ ಒತ್ತಾಯಗಳು ಈಗ ಆರಂಭವಾಗಿದೆ.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

3 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

3 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

11 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

16 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

17 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago