ಬಾಂಗ್ಲಾದೇಶವು ದೈನಂದಿನ ಜೀವನದಿಂದ ಹಿಡಿದ ಆರೋಗ್ಯ ಕ್ಷೇತ್ರದವರೆಗೆ ಬಹುಮಟ್ಟಿಗೆ ಭಾರತ ದೇಶವನ್ನು ಅವಲಂಬಿತವಾಗಿದೆ. ಈ ವ್ಯಾಪಾರ ವ್ಯವಸ್ಥೆಗಳು ಎರಡು ಮೂರು ದಿನದಿಂದ ಶುರುವಾದ ಸಂಬಂಧವಲ್ಲ. ಹೊರತು, ದಶಕಗಳಿಂದ ಈ ಎರಡು ರಾಷ್ಟ್ರಗಳ ನಡುವೆ ಬಲವಾದ ವ್ಯಾಪಾರ ಸಂಬಂಧಗಳು ನಿರ್ಮಾಣವಾಗಿದೆ. ಆದರಲ್ಲೂ ಬಾಂಗ್ಲಾದೇಶದ ಆಹಾರ ಭದ್ರತೆಯಲ್ಲಿ ಭಾರತದ ಪಾತ್ರ ಅತ್ಯಂತ ಪ್ರಮುಖವಾಗಿದೆ.
ಬಾಂಗ್ಲಾದೇಶವೂ ಸುಮಾರು 2.1 ಮಿಲಿಯನ್ ಮೆಟ್ರಿಕ್ ಟನ್ ಗೋಧಿ ಆಮದು ಮಾಡಿಕೊಂಡಿತ್ತು. ಗೋಧಿಯ ಜೊತೆಗೆ ಬಾಸ್ಮತಿ ಅಕ್ಕಿಯನ್ನು ಭಾರತದಿಂದ ರಫ್ತು ಮಾಡಲಾಗುತ್ತದೆ. 2021-22 ರಲ್ಲಿ ಮಾತ್ರ ಬಾಂಗ್ಲಾದೇಶವು ಭಾರತದಿಂದ ರೂ 5,000 ಕೋಟಿಗೂ ಹೆಚ್ಚು ಮೌಲ್ಯದ ಸಕ್ಕರೆಯನ್ನು ಖರೀದಿಸಿತ್ತು. ಇದರ ಜೊತೆಗೆ ಈರುಳ್ಳಿ, ಆಲೂಗಡ್ಡೆ, ಬೆಳ್ಳುಳ್ಳಿ ಮುಂತಾದ ದಿನನಿತ್ಯದ ತರಕಾರಿಗಳು ಭಾರತದಿಂದ ಬಾಂಗ್ಲಾದೇಶಕ್ಕೆ ಸರಬರಾಜಾಗುತ್ತವೆ. ಮಾತ್ರವಲ್ಲ, ಮಸಾಲೆ ಪಾದಾರ್ಥ, ಧಾನ್ಯಗಳು, ಹಣ್ಣುಗಳು, ತರಕಾರಿಗಳು ಮತ್ತು ಸಂಸ್ಕರಿಸಿದ ಆಹಾರಗಳಿಗೂ ಭಾರತವನ್ನು ಅವಲಂಬಿತವಾಗಿದೆ.
ಆದರಲ್ಲೂ ಅತ್ಯಂತ ಮಹತ್ವದ ಉದ್ಯೋಗ ಕ್ಷೇತ್ರವಾಗಿರುವ ಜವಳಿ ಉದ್ಯಮಕ್ಕೆ ಬಾಂಗ್ಲಾದೇಶವು 11% ಕೊಡುಗೆ ನೀಡಿದರೆ, ಈ ಉದ್ಯಮಕ್ಕೆ ಹತ್ತಿಯ ಅವಶ್ಯಕತೆ ಇರುವುದು ಭಾರತದ ಹತ್ತಿ. ಹತ್ತಿನ ರಫ್ತು ಸುಮಾರು 35% ಬಾಂಗ್ಲಾದೇಶಕ್ಕೆ ಹೋಗುತ್ತದೆ. ಒಂದು ವೇಳೆ ಹತ್ತಿಯ ಸರಬರಾಜುವಿಗೆ ಅಡ್ಡಿಪಡಿಸಿದರೆ, ಲಕ್ಷಾಂತರ ಉದ್ಯೋಗಗಳು ಅಪಾಯದಲ್ಲಿರುತ್ತವೆ. ಜೊತೆಗೆ, ಸಂಸ್ಕರಿಸಿದ ಪೆಟ್ರೋಲಿಯಂ ಉತ್ಪನ್ನಗಳು, ಪ್ಲಾಸ್ಟಿಕ್, ಉಕ್ಕು, ವಿದ್ಯುತ್ ಉಪಕರಣಗಳು ಮತ್ತು ಔಷಧಗಳು ಭಾರತದಿಂದ ಬಾಂಗ್ಲಾದೇಶಕ್ಕೆ ಪೂರೈಕೆಯಾಗುತ್ತದೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…