ಹಿಂದುತ್ವ ಭಾಷಣಗಾರ್ತಿ ಚೈತ್ರಾ ಕುಂದಾಪುರಳನ್ನು ಕೋಟ್ಯಂತರ ರೂಪಾಯಿ ವಂಚನೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಆಕೆಯ ಬಂಧನದ ನಂತರ ಆಕೆ ಮಾಡಿರುವ ಒಂದೊಂದೇ ಅವಾಂತರಗಳ ಬಗ್ಗೆಯೂ ಮಾಹಿತಿ ಹೊರಬರುತ್ತಿದೆ.ಹೆಚ್ಚಿನ ತನಿಖೆಗೂ ಮುನ್ನ ಆಕೆ ಅಸ್ವಸ್ಥಗೊಂಡಿದ್ದಳು ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹಣ ಪಡೆದಿರುವುದನ್ನು ಸತ್ಯ ಒಪ್ಪಿಕೊಂಡಿದ್ದಾಳೆ. ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಹಣ ಪಡೆದಿದ್ದಾಗಿ ಚೈತ್ರಾ ಕುಂದಾಪುರ ಬಾಯ್ಬಿಟ್ಟಿದ್ದಾಳೆ. ಆದರೆ 5 ಕೋಟಿ ರೂ. ಅಲ್ಲ 3 ಕೋಟಿ ರೂ. ಪಡೆದಿರುವ ಬಗ್ಗೆ ಚೈತ್ರಾ ಕುಂದಾಪುರ ಮತ್ತು ಆಕೆಯ ಗ್ಯಾಂಗ್ ಒಪ್ಪಿಕೊಂಡಿದೆ ಎಂದು ತಿಳಿದುಬಂದಿದೆ.
ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಹಣ ಪಡೆದಿರುವುದಾಗಿ ವಂಚನೆ ಪ್ರಕರಣದ ಏಳನೇ ಆರೋಪಿ ಶ್ರೀಕಾಂತ್ ಒಪ್ಪಿಕೊಂಡಿದ್ದಾನೆ. ಗೋವಿಂದ್ ಬಾಬು ಅವರಿಂದ ನಾನೇ ಹಣ ಪಡೆದುಕೊಂಡು ಬಂದು ಚೈತ್ರಾ ಕುಂದಾಪುರ, ಗಗನ್ಗೆ ನೀಡಿದ್ದೇನೆ ಸತ್ಯ ಒಪ್ಪಿಕೊಂಡಿದ್ದಾನೆ. ಆದರೆ, ಆರೋಪಿಗಳು ಈಗ ಆ ಹಣ ಎಲ್ಲಿದೆಯೋ ಗೊತ್ತಿಲ್ಲ ಎನ್ನುತ್ತಿದ್ದಾರೆ.
(Source : news Agencies )
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…