ಹಿಂದುತ್ವ ಭಾಷಣಗಾರ್ತಿ ಚೈತ್ರಾ ಕುಂದಾಪುರಳನ್ನು ಕೋಟ್ಯಂತರ ರೂಪಾಯಿ ವಂಚನೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಆಕೆಯ ಬಂಧನದ ನಂತರ ಆಕೆ ಮಾಡಿರುವ ಒಂದೊಂದೇ ಅವಾಂತರಗಳ ಬಗ್ಗೆಯೂ ಮಾಹಿತಿ ಹೊರಬರುತ್ತಿದೆ.ಹೆಚ್ಚಿನ ತನಿಖೆಗೂ ಮುನ್ನ ಆಕೆ ಅಸ್ವಸ್ಥಗೊಂಡಿದ್ದಳು ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹಣ ಪಡೆದಿರುವುದನ್ನು ಸತ್ಯ ಒಪ್ಪಿಕೊಂಡಿದ್ದಾಳೆ. ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಹಣ ಪಡೆದಿದ್ದಾಗಿ ಚೈತ್ರಾ ಕುಂದಾಪುರ ಬಾಯ್ಬಿಟ್ಟಿದ್ದಾಳೆ. ಆದರೆ 5 ಕೋಟಿ ರೂ. ಅಲ್ಲ 3 ಕೋಟಿ ರೂ. ಪಡೆದಿರುವ ಬಗ್ಗೆ ಚೈತ್ರಾ ಕುಂದಾಪುರ ಮತ್ತು ಆಕೆಯ ಗ್ಯಾಂಗ್ ಒಪ್ಪಿಕೊಂಡಿದೆ ಎಂದು ತಿಳಿದುಬಂದಿದೆ.
ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಹಣ ಪಡೆದಿರುವುದಾಗಿ ವಂಚನೆ ಪ್ರಕರಣದ ಏಳನೇ ಆರೋಪಿ ಶ್ರೀಕಾಂತ್ ಒಪ್ಪಿಕೊಂಡಿದ್ದಾನೆ. ಗೋವಿಂದ್ ಬಾಬು ಅವರಿಂದ ನಾನೇ ಹಣ ಪಡೆದುಕೊಂಡು ಬಂದು ಚೈತ್ರಾ ಕುಂದಾಪುರ, ಗಗನ್ಗೆ ನೀಡಿದ್ದೇನೆ ಸತ್ಯ ಒಪ್ಪಿಕೊಂಡಿದ್ದಾನೆ. ಆದರೆ, ಆರೋಪಿಗಳು ಈಗ ಆ ಹಣ ಎಲ್ಲಿದೆಯೋ ಗೊತ್ತಿಲ್ಲ ಎನ್ನುತ್ತಿದ್ದಾರೆ.
(Source : news Agencies )
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…