ಹಿಂದುತ್ವ ಭಾಷಣಗಾರ್ತಿ ಚೈತ್ರಾ ಕುಂದಾಪುರಳನ್ನು ಕೋಟ್ಯಂತರ ರೂಪಾಯಿ ವಂಚನೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಆಕೆಯ ಬಂಧನದ ನಂತರ ಆಕೆ ಮಾಡಿರುವ ಒಂದೊಂದೇ ಅವಾಂತರಗಳ ಬಗ್ಗೆಯೂ ಮಾಹಿತಿ ಹೊರಬರುತ್ತಿದೆ.ಹೆಚ್ಚಿನ ತನಿಖೆಗೂ ಮುನ್ನ ಆಕೆ ಅಸ್ವಸ್ಥಗೊಂಡಿದ್ದಳು ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹಣ ಪಡೆದಿರುವುದನ್ನು ಸತ್ಯ ಒಪ್ಪಿಕೊಂಡಿದ್ದಾಳೆ. ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಹಣ ಪಡೆದಿದ್ದಾಗಿ ಚೈತ್ರಾ ಕುಂದಾಪುರ ಬಾಯ್ಬಿಟ್ಟಿದ್ದಾಳೆ. ಆದರೆ 5 ಕೋಟಿ ರೂ. ಅಲ್ಲ 3 ಕೋಟಿ ರೂ. ಪಡೆದಿರುವ ಬಗ್ಗೆ ಚೈತ್ರಾ ಕುಂದಾಪುರ ಮತ್ತು ಆಕೆಯ ಗ್ಯಾಂಗ್ ಒಪ್ಪಿಕೊಂಡಿದೆ ಎಂದು ತಿಳಿದುಬಂದಿದೆ.
ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಹಣ ಪಡೆದಿರುವುದಾಗಿ ವಂಚನೆ ಪ್ರಕರಣದ ಏಳನೇ ಆರೋಪಿ ಶ್ರೀಕಾಂತ್ ಒಪ್ಪಿಕೊಂಡಿದ್ದಾನೆ. ಗೋವಿಂದ್ ಬಾಬು ಅವರಿಂದ ನಾನೇ ಹಣ ಪಡೆದುಕೊಂಡು ಬಂದು ಚೈತ್ರಾ ಕುಂದಾಪುರ, ಗಗನ್ಗೆ ನೀಡಿದ್ದೇನೆ ಸತ್ಯ ಒಪ್ಪಿಕೊಂಡಿದ್ದಾನೆ. ಆದರೆ, ಆರೋಪಿಗಳು ಈಗ ಆ ಹಣ ಎಲ್ಲಿದೆಯೋ ಗೊತ್ತಿಲ್ಲ ಎನ್ನುತ್ತಿದ್ದಾರೆ.
(Source : news Agencies )
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…