Advertisement
ಅಭಿಮತ

#bepositive |ನೀವು ಓದಿ ಇಷ್ಟ ಆಗುತ್ತೆ…..! | ವೃತ್ತಿ ಯಾವುದಾದರೇನು..? ನಿಮ್ಮ ಕೆಲಸವನ್ನು ಪ್ರೀತಿಸಿ | ಯಶಸ್ಸು ನಿಮ್ಮದಾಗುತ್ತದೆ….|

Share

ಕೆಲವೊಂದು ಜೀವನ ಸಂದೇಶಗಳು ಎಷ್ಟು ಅರ್ಥಪೂರ್ಣವಾಗಿರುತ್ತೆ ಎಂದರೆ, ಜೀವನ ಎಷ್ಟೊಂದು ಸರಳ ಅನ್ನಿಸಿ ಬಿಡುತ್ತದೆ. ಹಿರಿಯರು,  ಜ್ಞಾನಿಗಳು ಕೊಡುವ ಉಪದೇಶ ನಮ್ಮ ಇತ್ತೀಚಿನ ಈ ಜೀವನ ಶೈಲಿಗೆ ನಿಜಕ್ಕೂ ಅಗತ್ಯ ಎನ್ನಿಸಿ ಬಿಡುತ್ತೆ. ಈ ಕೆಳಗಿನ ಸಂದೇಶವನ್ನು ನೀವು ಓದಿ, ಖಂಡಿತ ಇಷ್ಟವಾಗುತ್ತೆ.

ಹೊಸ ಚಪ್ಪಲಿ ಕೊಳ್ಳಲೆಂದು ಪ್ರತಿಷ್ಠಿತ ಶೋರೂಮ್ ಒಂದಕ್ಕೆ ಒಬ್ಬ ವ್ಯಕ್ತಿ ಹೋಗುತ್ತಾನೆ. ಅಲ್ಲಿನ ಸೇಲ್ಸ್ ಮನ್ ಅವನಿಗೆ ಬೇರೆ ಬೇರೆ ರೀತಿಯ, ಹೊಸ ಹೊಸ ನಮೂನೆಯ ಚಪ್ಪಲಿಗಳನ್ನು ತೋರಿಸುವನು. ಆದರೆ ಕೊಳ್ಳಲು ಹೋದ ಆ ಗಿರಾಕಿಗೆ ಸೈಜ್ ಸರಿ ಇದ್ದರೆ ಚಪ್ಪಲಿ ಇಷ್ಟವಾಗುತ್ತಿರಲಿಲ್ಲ, ಇಷ್ಟವಾದ ಚಪ್ಪಲಿಗಳ ಸೈಜ್  ಸರಿ ಹೊಂದುತ್ತಿರಲಿಲ್ಲ. ಆದರೂ ಆ ಸೇಲ್ಸ್ ಮನ್  ತಾಳ್ಮೆಯಿಂದ ಇನ್ನೂ ಹೊಸ ಹೊಸ ಬೇರೆ ವಿಧದ ಚಪ್ಪಲಿಗಳನ್ನು ತೋರಿಸುತ್ತಾನೆ.

ಅಷ್ಟರಲ್ಲಿ ಹೊರಗಡೆ ಅಂಗಡಿಯ ಮುಂದೆ ದೊಡ್ಡ ಕಾರೊಂದು  ಬಂದು ನಿಲ್ಲುತ್ತದೆ. ಆ ಕಾರಿನಿಂದ ಒಬ್ಬ ವ್ಯಕ್ತಿ ಗಂಭೀರವಾಗಿ  ಇಳಿದು  ಬರುತ್ತಿದ್ದಂತೆ ಅಂಗಡಿಯಲ್ಲಿದ್ದ ಕೆಲಸದವರೆಲ್ಲರೂ ಎದ್ದುನಿಂತು ನಮಸ್ಕರಿಸಿದರು. ಆ ವ್ಯಕ್ತಿಯು ಮುಗುಳ್ನಕ್ಕು, ಗಲ್ಲಾ ಪೆಟ್ಟಿಗೆ ಕಡೆಗೆ ಹೋಗಿ ಅಲ್ಲಿದ್ದ ದೇವರ ಫೋಟೋಗೆ ಕೈ ಮುಗಿದು ಅಲ್ಲಿ ಕುಳಿತು ತನ್ನ ಕೆಲಸದಲ್ಲಿ ಮಗ್ನನಾಗುತ್ತಾನೆ.

ಆಗ ಚಪ್ಪಲಿ ಕೊಳ್ಳಲು ಬಂದ ಆ ಗಿರಾಕಿ ತನಗೆ ಚಪ್ಪಲಿ ತೋರಿಸುತ್ತಿದ್ದವನನ್ನು ಅವರು ನಿಮ್ಮ ಯಜಮಾನರಾ? ಎಂದು ಕೇಳಲು ಅವನು ಹೌದು ಅವರೇ ನಮ್ಮ ಯಜಮಾನ್ರು. ಅವರಿಗೆ ಇಂತಹ ಐದಾರು ಶೋರೂಮುಗಳಿವೆ ಎಂದು ಮಾತಾಡುತ್ತಲೇ ಮತ್ತೊಂದು ಜೊತೆ ಚಪ್ಪಲಿ ತೋರಿಸಿದನು. ಅದನ್ನು ನೋಡುತ್ತಿದ್ದಂತೆ ಅದು ಸ್ವಲ್ಪ ಒಪ್ಪಿಗೆಯಾಗುವಂತೆನ್ನಿಸಿತು ಆದರೆ size ಸ್ವಲ್ಪ ಹೆಚ್ಚು- ಕಮ್ಮಿ ಅನಿಸುತ್ತಿತ್ತು. ಆ ಜೊತೆ ಗಿರಾಕಿಗೆ ಇಷ್ಟವಾಯಿತೆಂದು ಅವನಿಗೆ ಅನ್ನಿಸಿತೇನೋ ಹೇಗಾದರೂ  ಮಾಡಿ ಆ ಚಪ್ಪಲಿಗಳನ್ನು ಅವನ ಮನಸೊಪ್ಪಿಸಿ ಮಾರುವುದಕ್ಕೆ ಪ್ರಯತ್ನ ಪಡುತ್ತಿದ್ದನು. ಆ ಜೊತೆ ಸ್ವಲ್ಪ ಬಿಗಿಯಾಗುತ್ತಿರುವುದಲ್ಲಾ ಎನ್ನುತ್ತಿದ್ದಂತೆ “ಇಲ್ಲ ಸರ್.. ಅದು ನಿಮಗೆ ಕರೆಕ್ಟ್ ಸೈಜ್, ಸರಿಯಾಗಿದೆ ಎಂದು ಮತ್ತೆ ಮತ್ತೆ ಬಲವಂತ ಪಡಿಸುತ್ತಿದ್ದನು.

ಇದನ್ನೆಲ್ಲಾ ಗಲ್ಲಾ ಪೆಟ್ಟಿಗೆಯಲ್ಲಿ ಕುಳಿತು ಗಮನಿಸುತ್ತಿದ್ದ ಯಜಮಾನ ಎದ್ದು ಬಂದು ಆ ಗಿರಾಕಿಯ ಮುಂದೆ ಕೆಳಗೆ ಕುಳಿತುಕೊಂಡು ಸ್ವಲ್ಪ ನಿಮ್ಮ ಕಾಲುಗಳನ್ನು ಕೆಳಗಿಡಿರಿ ಎಂದು ಅವರ ಕಾಲನ್ನು ತನ್ನ ಕೈಗಳಲ್ಲಿ ತೆಗೆದುಕೊಂಡು ಆ ಚಪ್ಪಲಿಗಳನ್ನು ತೊಡಿಸಿದರು.  ಆಗ ಆ ಗಿರಾಕಿಗೆ ವಯಸ್ಸಿನಲ್ಲೂ ಅಂತಸ್ತಿನಲ್ಲೂ ದೊಡ್ಡವರಾದ ಆ ಯಜಮಾನ ಇವನ ಕಾಲು ಹಿಡಿದು ಚಪ್ಪಲಿ ತೊಡಿಸುತ್ತಿದ್ದಂತೆ  ತೀರಾ ಮುಜುಗರವೆನಿಸಿತು. ‘ಪರವಾ ಇಲ್ಲ ನಾನೇ ಹಾಕಿಕೊಳ್ಳುತ್ತೇನೆ’ ಎಂದು ಹೇಳುತ್ತಿದ್ದರೂ ಕೇಳದೇ ಎರಡೂ ಕಾಲುಗಳಿಗೆ ಚಪ್ಪಲಿ ತೊಡಿಸಿ, ಒಂದು ಸಲ ನಡೆದು ನೋಡಿರಿ, ನಿಮಗೆ ಕಮ್ಫರ್ಟ್ ಎನಿಸದಿದ್ದರೆ ಬೇರೊಂದು ಜೊತೆಯನ್ನು ನೋಡುವಿರಂತೆ ಎಂದರು.

ಆದರೆ ಆ ಜೊತೆ ಸ್ವಲ್ಪ ಹೆಚ್ಚು ಕಡಿಮೆ ಸರಿ ಎನಿಸುವಂತಿತ್ತು.  ಬಿಲ್ಲನ್ನು ಕೊಟ್ಟ ನಂತರ ಅವನ ಮನಸ್ಸಿನಲ್ಲಿ ಕೊರೆಯುತ್ತಿದ್ದ ಪ್ರಶ್ನೆಯನ್ನು ಓನರ್ ಮುಂದಿಡುತ್ತಾನೆ.  “ಯಜಮಾನರೆ ನೀವು ಇಷ್ಟು ದೊಡ್ಡ ಸ್ಥಿತಿಯಲ್ಲಿದ್ದರೂ, ಹಲವಾರು ಅಂಗಡಿಗಳ ಒಡೆಯರಾಗಿದ್ದರೂ ನೀವು ಹೀಗೆ ನಮ್ಮಂಥವರ ಕಾಲುಗಳಿಗೆ ಚಪ್ಪಲಿ ತೊಡಿಸುತ್ತೀರಲ್ಲಾ!!”

ಆಗ ಆ ವ್ಯಕ್ತಿ ನಸುನಗುತ್ತಾ ಚಿಲ್ಲರೆ ವಾಪಸ್ ಕೊಡುತ್ತಾ “ಇದು ನನ್ನ ವೃತ್ತಿ, ನನಗೆ ಅನ್ನ ನೀಡುವ ದೈವ. ನೀವು ಕೋಟಿ ರೂಪಾಯಿ ಕೊಡುವೆನೆಂದರೂ ನಾನು ಅಂಗಡಿಯ ಹೊರಗೆ ನಿಮ್ಮ ಪಾದ ಮುಟ್ಟಲಾರೆ, ಹಿಡಿಯಲಾರೆ. ಆದರೆ ಇಲ್ಲಿ ಅಂಗಡಿಯೊಳಗೆ ನೀವು ಏನೂ ಕೊಡದಿದ್ದರೂ ನಿಮ್ಮ ಪಾದ ಹಿಡಿಯಲು ಹಿಂಜರಿಯಲಾರೆ.” ಆಗ ಆ ಗಿರಾಕಿಗೆ ನಿಜಕ್ಕೂ ಆಶ್ಚರ್ಯವೆನ್ನಿಸಿತು. ಎಂತ ಮೇರು ವ್ಯಕ್ತಿತ್ವ!

ನಾವು ಮಾಡುವ ಕೆಲಸ ಸಣ್ಣದೋ ದೊಡ್ಡದೋ ಎಂಬುದು ಮುಖ್ಯವಲ್ಲ. ನ್ಯಾಯಬದ್ಧವಾದ ಎಂತಹುದೇ ಕೆಲಸವಾದರೂ ನಾವು ಮಾಡುವ ಕೆಲಸದ ಮೇಲಿನ ಗೌರವ, ನಿಯತ್ತು ಕಡಿಮೆಯಾಗಬಾರದು  ಮತ್ತು ನಾಚಿಕೆಪಡುವ, ಹಿಂಜರಿಯುವ, ಮುಜುಗರಪಟ್ಟುಕೊಳ್ಳುವ ಅವಶ್ಯಕತೆಯೇ ಇರಬಾರದು. ಯಾವತ್ತೂ ನಾ(ನೀ)ವು ಮಾಡುವ ವೃತ್ತಿಗೆ ಅವಮಾನಿಸದಿರಿ, ಅಸಹ್ಯಪಡದಿರಿ.

(ಅನಂತ ನಾರಾಯಣ ಕೋಲಾರ ಅವರ ವಾಲ್ ನಿಂದ.  ಪರಿಣಾಮಕಾರಿ ಸಂದೇಶ..)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

7 minutes ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

15 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

16 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago