ಸುದ್ದಿಗಳು

#NalinKumarKateel | ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ರಾಜೀನಾಮೆ ಹೇಳಿಕೆ…! | ನಿಜಕ್ಕೂ ಅವರು ಹೇಳಿದ್ದೇನು.. ? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರು ಬಳ್ಳಾರಿಯಲ್ಲಿ ಸುದ್ದಿಗೋಷ್ಟಿ ನಡೆಸುವಾಗ ಮಾಧ್ಯಮ ಪ್ರತಿನಿಧಿಗಳು ರಾಜೀನಾಮೆ ಬಗ್ಗೆ ಪ್ರಶ್ನಿಸಿದರು. ಈ ಸಂದರ್ಭ ನಳಿನ್‌ ಅವರು ನೀಡುರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಮಾಧ್ಯಮಗಳೇ ಸತ್ಯಕ್ಕೆ ದೂರವಾದ ಸುದ್ದಿ ಪ್ರಕಟಿಸಿವೆ ಎಂಬ ಆರೋಪ ಬಂದಿದೆ. ಹಾಗಿದ್ದರೆ ಅವರು ನಿಜಕ್ಕೂ ಹೇಳಿದ್ದೇನು ಎಂಬುದೇ ಪ್ರಶ್ನೆ.

Advertisement
Advertisement

ಖಾಸಗಿ ವಾಹಿನಿ ಟಿವಿ9  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರು ಮಾತನಾಡಿರುವ ವಿಡಿಯೋ ಪ್ರಸಾರ ಮಾಡಿದೆ. ಅದರ ತುಣುಕು ಇಲ್ಲಿದೆ..

ಸುದ್ದಿಗೋಷ್ಟಿಯಲ್ಲಿ ಹೇಳಿರುವ ಪ್ರಕಾರ, ವಿಧಾನಸಭೆ ಚುನಾವಣೆ ಸೋಲಿನ ನೈತಿನ ಹೊಣೆ ಹೊತ್ತು ತಾನು ಈಗಾಗಲೇ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಮೌಖಿಕವಾಗಿಯೂ , ಲಿಖಿತವಾಗಿಯೂ ನೀಡಿದ್ದೇನೆ ಎಂದು ಹೇಳಿದ್ದಾರೆ. ಅದಾದ ಬಳಿಕದ ಕೆಲ ಹೊತ್ತಿನಲ್ಲಿ, ರಾಜೀನಾಮೆ ಹೇಳಿಕೆ ತಪ್ಪಾಗಿ ವರದಿಯಾಗುತ್ತಿದೆ ಎಂದು ಹೇಳಿದ್ದರು.ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ರಾಜಿನಾಮೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದು, ‘ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜಿನಾಮೆ ನೀಡಿಲ್ಲ. ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಈ ಕುರಿತ ಸುದ್ದಿಗಳು ಸತ್ಯಕ್ಕೆ ದೂರವಾದದ್ದು ಎಂದು ಕಟೀಲ್ ತಿಳಿಸಿದ್ದಾರೆ.

ವಿಡಿಯೋ ಪ್ರಕಾರ, ವಿಧಾನಸಭೆ ಚುನಾವಣೆ ಸೋಲಿನ ನೈತಿನ ಹೊಣೆ ಹೊತ್ತು ತಾನು ಈಗಾಗಲೇ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಮೌಖಿಕವಾಗಿಯೂ , ಲಿಖಿತವಾಗಿಯೂ ನೀಡಿದ್ದೇನೆ ಎಂದು ಸ್ವತಃ ನಳಿನ್‌ ಕುಮಾರ್‌ ಅವರು ಎರಡು ಬಾರಿ ಹೇಳಿದ್ದಾರೆ. ಅಂದರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಬಳಿಕವೂ ರಾಷ್ಟ್ರೀಯ ನಾಯಕರು, ವಿಳಂಬವಾದ ಆತ್ಮಾವಲೋಕನ ನಡೆಸುತ್ತಿರುವುದು ಏಕೆ?. ರಾಜ್ಯಾಧ್ಯಕ್ಷರ ರಾಜೀನಾಮೆ ಏಕೆ ಅಂಗೀಕಾರ ಮಾಡಲಿಲ್ಲ ? ಹೀಗೇ ಹಲವಾರು‌ ಪ್ರಶ್ನೆಗಳು ಎದ್ದಿವೆ. ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಕನ್ನಡದಲ್ಲಿ ಸಂಸದರ ವಿರುದ್ಧ ಆಕ್ರೋಶಗಳು ಇದ್ದರೂ, ರಾಜ್ಯಾಧ್ಯಕ್ಷರಾದ ಬಳಿಕವೂ ಈ ಆಕ್ರೋಶ ಈಗಲೂ ಇರುವಾಗಲೂ ಏಕೆ ರಾಷ್ಟ್ರೀಯ ನಾಯಕರು ಮೌನವಹಿಸುತ್ತಿದ್ದಾರೆ ? .

Advertisement

ಬಿಜೆಪಿ ರಾಜ್ಯಾಧ್ಯಕ್ಷರ ರಾಜೀನಾಮೆ ಎಂಬ ಹೇಳಿಕೆಗಳು ಮಾಧ್ಯಮಗಳಲ್ಲಿ ಬರುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ಮತ್ತೊಮ್ಮೆ ಟ್ರೋಲ್‌ ಗೆ ಒಳಗಾಗಿ, ಬಿಜೆಪಿ ಸುಸ್ಥಿತಿಗೆ ಬರಲಿ ಎಂಬ ಹಾರೈಕೆಗಳು ಬಿಜೆಪಿ ಕಾರ್ಯಕರ್ತರಿಂದಲೇ ಬರುತ್ತಿರುವುದನ್ನೂ ಬಿಜೆಪಿ ನಾಯಕತ್ವಗಳು ಗಮನಿಸುವುದಿಲ್ಲವೇ ? ಇದೆಲ್ಲಾ ಪ್ರಶ್ನೆಗಳ ನಡುವೆಯೂ ಕೇಡರ್‌ ಹಿನ್ನಲೆಯ ಬಿಜೆಪಿ ಮಾತ್ರಾ ಯಾವುದೂ ಕೇಳದಂತೆ ಕುಳಿತಿದೆ. ಎಲ್‌ ಕೆ ಅಡ್ವಾಣಿ ಅವರಂತಹ ನಾಯಕರನ್ನೇ ರಾಜೀನಾಮೆ ಪಡೆದಿರುವ ಒಂದು ಕಾಲದ ಬಿಜೆಪಿ ಈಗ ಕಾರ್ಯಕರ್ತರ ಆಕ್ರೋಶ, ಅಸಮಾಧಾನಗಳು ಇದ್ದರೂ ಮೌನವಾಗಿರುವುದರ ಅರ್ಥ ಬಿಜೆಪಿ ಆಂತರಿಕವಾಗು ಕುಸಿದಿದೆ ಎಂಬುದು ಸ್ಪಷ್ಟವಾಗುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…

1 hour ago

ಗುರು ಮತ್ತು ಬುಧ ದಶಾಂಕ ಯೋಗ | ಉದ್ಯೋಗದ ಮೇಲೆ ಜಾಕ್ಪಾಟ್ ದೊರೆಯಲಿದೆ

ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ

ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…

11 hours ago

ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…

11 hours ago

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…

11 hours ago

ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ

ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ  ಮೂರು ದಿನಗಳ…

11 hours ago