Advertisement
ಸುದ್ದಿಗಳು

#NalinKumarKateel | ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ರಾಜೀನಾಮೆ ಹೇಳಿಕೆ…! | ನಿಜಕ್ಕೂ ಅವರು ಹೇಳಿದ್ದೇನು.. ? |

Share

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರು ಬಳ್ಳಾರಿಯಲ್ಲಿ ಸುದ್ದಿಗೋಷ್ಟಿ ನಡೆಸುವಾಗ ಮಾಧ್ಯಮ ಪ್ರತಿನಿಧಿಗಳು ರಾಜೀನಾಮೆ ಬಗ್ಗೆ ಪ್ರಶ್ನಿಸಿದರು. ಈ ಸಂದರ್ಭ ನಳಿನ್‌ ಅವರು ನೀಡುರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಮಾಧ್ಯಮಗಳೇ ಸತ್ಯಕ್ಕೆ ದೂರವಾದ ಸುದ್ದಿ ಪ್ರಕಟಿಸಿವೆ ಎಂಬ ಆರೋಪ ಬಂದಿದೆ. ಹಾಗಿದ್ದರೆ ಅವರು ನಿಜಕ್ಕೂ ಹೇಳಿದ್ದೇನು ಎಂಬುದೇ ಪ್ರಶ್ನೆ.

ಖಾಸಗಿ ವಾಹಿನಿ ಟಿವಿ9  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರು ಮಾತನಾಡಿರುವ ವಿಡಿಯೋ ಪ್ರಸಾರ ಮಾಡಿದೆ. ಅದರ ತುಣುಕು ಇಲ್ಲಿದೆ..

ಸುದ್ದಿಗೋಷ್ಟಿಯಲ್ಲಿ ಹೇಳಿರುವ ಪ್ರಕಾರ, ವಿಧಾನಸಭೆ ಚುನಾವಣೆ ಸೋಲಿನ ನೈತಿನ ಹೊಣೆ ಹೊತ್ತು ತಾನು ಈಗಾಗಲೇ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಮೌಖಿಕವಾಗಿಯೂ , ಲಿಖಿತವಾಗಿಯೂ ನೀಡಿದ್ದೇನೆ ಎಂದು ಹೇಳಿದ್ದಾರೆ. ಅದಾದ ಬಳಿಕದ ಕೆಲ ಹೊತ್ತಿನಲ್ಲಿ, ರಾಜೀನಾಮೆ ಹೇಳಿಕೆ ತಪ್ಪಾಗಿ ವರದಿಯಾಗುತ್ತಿದೆ ಎಂದು ಹೇಳಿದ್ದರು.ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ರಾಜಿನಾಮೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದು, ‘ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜಿನಾಮೆ ನೀಡಿಲ್ಲ. ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಈ ಕುರಿತ ಸುದ್ದಿಗಳು ಸತ್ಯಕ್ಕೆ ದೂರವಾದದ್ದು ಎಂದು ಕಟೀಲ್ ತಿಳಿಸಿದ್ದಾರೆ.

ವಿಡಿಯೋ ಪ್ರಕಾರ, ವಿಧಾನಸಭೆ ಚುನಾವಣೆ ಸೋಲಿನ ನೈತಿನ ಹೊಣೆ ಹೊತ್ತು ತಾನು ಈಗಾಗಲೇ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಮೌಖಿಕವಾಗಿಯೂ , ಲಿಖಿತವಾಗಿಯೂ ನೀಡಿದ್ದೇನೆ ಎಂದು ಸ್ವತಃ ನಳಿನ್‌ ಕುಮಾರ್‌ ಅವರು ಎರಡು ಬಾರಿ ಹೇಳಿದ್ದಾರೆ. ಅಂದರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಬಳಿಕವೂ ರಾಷ್ಟ್ರೀಯ ನಾಯಕರು, ವಿಳಂಬವಾದ ಆತ್ಮಾವಲೋಕನ ನಡೆಸುತ್ತಿರುವುದು ಏಕೆ?. ರಾಜ್ಯಾಧ್ಯಕ್ಷರ ರಾಜೀನಾಮೆ ಏಕೆ ಅಂಗೀಕಾರ ಮಾಡಲಿಲ್ಲ ? ಹೀಗೇ ಹಲವಾರು‌ ಪ್ರಶ್ನೆಗಳು ಎದ್ದಿವೆ. ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಕನ್ನಡದಲ್ಲಿ ಸಂಸದರ ವಿರುದ್ಧ ಆಕ್ರೋಶಗಳು ಇದ್ದರೂ, ರಾಜ್ಯಾಧ್ಯಕ್ಷರಾದ ಬಳಿಕವೂ ಈ ಆಕ್ರೋಶ ಈಗಲೂ ಇರುವಾಗಲೂ ಏಕೆ ರಾಷ್ಟ್ರೀಯ ನಾಯಕರು ಮೌನವಹಿಸುತ್ತಿದ್ದಾರೆ ? .

ಬಿಜೆಪಿ ರಾಜ್ಯಾಧ್ಯಕ್ಷರ ರಾಜೀನಾಮೆ ಎಂಬ ಹೇಳಿಕೆಗಳು ಮಾಧ್ಯಮಗಳಲ್ಲಿ ಬರುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ಮತ್ತೊಮ್ಮೆ ಟ್ರೋಲ್‌ ಗೆ ಒಳಗಾಗಿ, ಬಿಜೆಪಿ ಸುಸ್ಥಿತಿಗೆ ಬರಲಿ ಎಂಬ ಹಾರೈಕೆಗಳು ಬಿಜೆಪಿ ಕಾರ್ಯಕರ್ತರಿಂದಲೇ ಬರುತ್ತಿರುವುದನ್ನೂ ಬಿಜೆಪಿ ನಾಯಕತ್ವಗಳು ಗಮನಿಸುವುದಿಲ್ಲವೇ ? ಇದೆಲ್ಲಾ ಪ್ರಶ್ನೆಗಳ ನಡುವೆಯೂ ಕೇಡರ್‌ ಹಿನ್ನಲೆಯ ಬಿಜೆಪಿ ಮಾತ್ರಾ ಯಾವುದೂ ಕೇಳದಂತೆ ಕುಳಿತಿದೆ. ಎಲ್‌ ಕೆ ಅಡ್ವಾಣಿ ಅವರಂತಹ ನಾಯಕರನ್ನೇ ರಾಜೀನಾಮೆ ಪಡೆದಿರುವ ಒಂದು ಕಾಲದ ಬಿಜೆಪಿ ಈಗ ಕಾರ್ಯಕರ್ತರ ಆಕ್ರೋಶ, ಅಸಮಾಧಾನಗಳು ಇದ್ದರೂ ಮೌನವಾಗಿರುವುದರ ಅರ್ಥ ಬಿಜೆಪಿ ಆಂತರಿಕವಾಗು ಕುಸಿದಿದೆ ಎಂಬುದು ಸ್ಪಷ್ಟವಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

4 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

11 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

18 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago